ಭಟ್ಕಳ: ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ, ಆನಂದ ಆಶ್ರಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಾಲಕ, ಬಾಲಕಿಯರ ಥ್ರೊ ಬಾಲ್ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನವನ್ನು ಪಡೆದ್ದಿದ್ದಾರೆ.
ಇವರಲ್ಲಿ 9 ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು ವೈಯಕ್ತಿಕ ವಿಭಾಗದಲ್ಲಿ ಪ್ರತೀಕ್ ಎಮ್. ಮೋಗೆರ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ತರಬೇತಿ ನೀಡಿದ ಶಿಕ್ಷಕ ವಸಂತ್ ಲೋಪಿಸ್ ಇವರನ್ನು ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಥೆರೇಸಿಯಾ ಸೆರಾ, ಶಿಕ್ಷಕ ವೃಂದ ಅಭಿನಂದಿಸಿದೆ.