ಕಾರವಾರ : ದಿನಾಂಕ 28-07-2018 ಮತ್ತು 29-07-2018ರಂದು ಎರಡು ದಿನಗಳ ಕಾಲ ಅಂಕೋಲ ತಾಲೂಕಿನ ಬಾಸರಗೋಡಿನ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ಯಕ್ಷಸಂಭ್ರಮ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ ತಿಳಿಸಿದ್ದಾರೆ.
ಕಾರವಾರ ಪತ್ರಿಕಾಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಅವರು, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಯೋಜನೆಯಡಿ ಯಕ್ಷಗಾನ ಮತ್ತು ಮೂಡಲಪಾಯ ಯಕ್ಷಗಾನದ ಬೆಳವಣಿಗೆಯ ದೃಷ್ಟಿಯಲ್ಲಿ ಎಲ್ಲ ಕಲೆಗಳನ್ನು ಕ್ರೋಢೀಕರಿಸಿ ಒಂದೇ ವೇದಿಕೆಯಲ್ಲಿ ಅನಾವರಣಗೊಳ್ಳುವ ನೆಲೆಯಲ್ಲಿ ಯಕ್ಷಸಂಭ್ರಮ ಕಾರ್ಯಕ್ರಮವನ್ನು ಕರಾವಳಿಯ ಅಂಕೋಲ ತಾಲೂಕಿನ ಬಾಸಗೋಡಿನಲ್ಲಿ ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದರು.
ದಿನಾಂಕ 28-07-2018ರಂದು ಸಂಜೆ 6ಕ್ಕೆ ಶಾಸಕಿ ರೂಪಾಲಿ ನಾಯ್ಕ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು ತಾವು ಅಧ್ಯಕ್ಷತೆ ವಹಿಸುತ್ತಿರುವುದಾಗಿ ಹಾಗೂ ತಾಲೂಕು ಪಂಚಾಯ್ತಿ ಅಧ್ಯಕ್ಷೆ ಸುಜತಾ ಗಾಂವಕರ್, ಪುರಸಭೆ ಅಧ್ಯಕ್ಷೆ ಅಂಜಲಿ ಐಗಳ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿಧ್ವಾಂಸರು, ಕಲಾವಿದರು ಭಾಗವಹಿಸಲಿದ್ದಾರೆ ಎಂದರು.
ಯಕ್ಷಗಾನ ಕುರಿತು ವಿಚಾರ ಗೋಷ್ಠಿಯಲ್ಲಿ ಹಿರಿಯ ಸಾಹಿತಿ ವಿಷ್ಣುನಾಯ್ಕ್ ಸೇರಿದಂತೆ ಅನೇಕ ವಿದ್ವಾಂಸರು ಭಾಗವಹಿಸಲಿದ್ದಾರೆ. ಅಲ್ಲದೆ ಅಂದು ದಾವಣಗೆರೆ ಜಿಲ್ಲೆ ಸಿದ್ದವನಹಳ್ಳಿ ಮೂಡಲಪಾಯ ಕಲಾವಿದರಿಂದ ಕರಿಭಂಟನ ಕಾಳಗ ಮೂಡಲಪಾಯ ಯಕ್ಷಗಾನ ಪ್ರದರ್ಶನ, ಅಂಕೋಲದ ಮಹಾಗಣಪತಿ ಯಕ್ಷಗಾನ ಮಂಡಳಿ ಮಕ್ಕಳಿಂದ ರುಕ್ಮಿಣಿ ಕಲ್ಯಾಣ ಪ್ರಸಂಗ ಹಾಗೂ ಗುಂದಾ ಸಿದ್ದಿವಿನಾಯಕ್ ಯಕ್ಷಗಾನ ಮಂಡಳಿಯಿಂದ ರತ್ನಾವತಿ ಕಲ್ಯಾಣ ಪ್ರಸಂಗಗಳ ಪ್ರದರ್ಶನ ನಡೆಯಲಿವೆ.
ದಿನಾಂಕ 25-07-2018ರಂದು ಸಂಜೆ 5ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಬೆಳಂಬರದ ನಾಟಿ ವೈದ್ಯ ಹನುಮಂತಗೌಡ ಅವರ ಅಧ್ಯಕ್ಷತೆಯಲ್ಲಿ ವಿಚಾರಗೋಷ್ಠಿಗಳು ನಡೆಯಲಿವೆ. ಅಲ್ಲದೆ, ಗುಂದಾ ಕೀರ್ತಿ ಮಹಿಳಾ ತಂಡದವರಿಂದ ಕೃಷ್ಣ ಸಂದಾನ ಪ್ರಸಂಗದ ತಾಳಮದ್ದಳೆ, ಬೋಳೆ ಮಾರಿಕಾಂಬ ಯಕ್ಷಗಾನ ಮತ್ತು ಸಾಂಸ್ಕøತಿಕ ಕ್ರೀಡಾ ಸಂಘ ಇವರಿಂದ ಗದಾಯುದ್ಧ ಹಾಗೂ ಗುಂದ ಪ್ರೇರಣಾ ಅವರಿಂದ ರಾಜಾ ರುದ್ರ ಕೂಪ ಪ್ರಸಂಗ ಯಕ್ಷಗಾನ ಪ್ರದರ್ಶನವಾಗಲಿದೆ. ಈ ಎಲ್ಲ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಯಕ್ಷಸಂಭ್ರಮವನ್ನು ಪ್ರೋತ್ಸಹಿಸುವಂತೆ ಅವರು ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸಂಚಾಲಕ ಡಾ.ರಾಮಕೃಷ್ಣ ಗುಂದಿ, ಮಾರಿಕಾಂಬ ಯಕ್ಷಗಾನ ಮತ್ತು ಸಾಂಸ್ಕøತಿಕ ಕ್ರೀಡಾ ಸಂಘದ ಕಾರ್ಯದರ್ಶಿ ಆನಂದು ನಾರಾಯಣ ಅಗೇರ, ಕರ್ನಾಟಕ ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ಎಸ್.ಎಚ್.ಶಿವರುದ್ರಪ್ಪ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹಿಮಂತರಾಜು ಜಿ. ಉಪಸ್ಥಿತರಿದ್ದರು.
Read These Next
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಕಾರವಾರ: ಚುನಾವಣಾ ಕಂಟ್ರೋಲ್ ರೂಂ ಗೆ ವೆಚ್ಚ ವೀಕ್ಷಕರ ಭೇಟಿ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರದಿರುವ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ...