ಪಿಕ್‍ನಿಕ್ ಗೆ ತೆರಳಿದ್ದ ಭಟ್ಕಳದ ಯುವಕರು ಶಿರೂರು ನದಿಯಲ್ಲಿ ಮುಳುಗಿ ಸಾವು

Source: sonews | By Staff Correspondent | Published on 2nd September 2018, 7:39 PM | Coastal News | State News | Don't Miss |

ಭಟ್ಕಳ: ಕೋಣಮಕ್ಕಿ ಸೇತುವೆ ಬಳಿ ಕುಟುಂಬದ ಸದಸ್ಯರ ಜೊತೆ ಪಿಕ್ ನಿಕ್ ಬಂದ ವೇಳೆ ಪಕ್ಕದ ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿದ ಘಟನೆ ಶಿರೂರು ಸಮೀಪದ ಕೋಣಮಕ್ಕಿ ಬಳಿ  ಭಾನುವಾರ ಸಂಜೆ ನಡೆದಿದೆ.

ಭಟ್ಕಳದ ಕಾರಗದ್ದೆ ನಿವಾಸಿಗಳೆಂದು ಹೇಳಾಗಿರುವ 7ಜನ ಸ್ನೇಹಿತರು ಇಂದು ಶಿರೂರು ಬಳಿ ಕೋಣಮಕ್ಕಿಯ ಜಂಗ್ಲಪೀರಾ ಎಂಬಲ್ಲಿ ಪಿಕ್ನಿಕ್ ಗೆ ತೆರಳಿದ್ದು ಇದೇ ವೇಳೆ ಪಕ್ಕದ ನದಿಯಲ್ಲಿ ಈಜಲು ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ. 

ಮೃತ ಯುವಕರನ್ನು ರಾಜು ಸತೀಶ್ ನಾಯ್ಕ(35) ಹಾಗೂ ಝಮೀರ್ ಇಮಾಮ್ ಶೇಖ್(28) ಎಂದು ಗುರುತಿಸಲಾಗಿದೆ. 

ಯುವಕರು ನದಿಯಲ್ಲಿ ಮುಳುಗಿದ ಸುದ್ದಿ ಭಟ್ಕಳದಲ್ಲಿ ಕಾಡ್ಗಿಚ್ಚಿನಂತೆ ಹರಡಿದ್ದು ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಯುವಕರು ಘಟನಾ ಸ್ಥಳಕ್ಕೆ ತಲುಪಿ ನದಿಯಲ್ಲಿ ಕಾಣೆಯದವರನ್ನು ಹುಡುಕಲು ಪ್ರಯತ್ನಿಸಿದ್ದು ಬಹಳ ಸಮಯದ ನಂತರ ಸುಮಾರು 7ಗಂಟೆಗೆ ಮೃತದೇಹ ಪತ್ತೆಯಾಯಿತು ಎಂದು ತಿಳಿದುಬಂದಿದೆ. 

ಮೃತದೇಹಗಳನ್ನು ಬೈಂದೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


 

Read These Next

ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...

ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ

ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ “ಸಹಾಯವಾಣಿ”

ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ...