ಮುರ್ಡೇಶ್ವರ ನಿಲ್ಲಿಸಿದ ಟೆಂಪೋಗೆ ಕಾರು ಢಿಕ್ಕಿ: ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ
ಭಟ್ಕಳ: ತಾಲೂಕಿನ ಮುರ್ಡೇಶ್ವರದ ರೈಲ್ವೆ ನಿಲ್ದಾಣದ ಎದುರಿಗೆ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಟಾಟಾ ಜೆಸ್ಟ ಕಾರೊಂದು ನಿಂತಿದ್ದ ಪ್ಯಾಸೆಂಜರ್ 407 ಟೆಂಪೋಗೆ ಹಿಂದಿನಿಂದ ಢಿಕ್ಕಿ ಹೊಡೆದ ಘಟನೆ ಶುಕ್ರವಾರದಂದು ಸಂಜೆ ನಡೆದಿದೆ.ಭಟ್ಕಳದಿಂದ ಹೊನ್ನಾವರದಕಡೆ ಬರುತ್ತಿದ್ದ ಪ್ಯಾಸೆಂಜರ್ 407 ಟೆಂಪೋಗೆ ಹಿಂಬದಿಯಿಂದ ಅದೇ ಮಾರ್ಗವಾಗಿ ಬರುತ್ತಿದ್ದ ಟಾಟಾ ಜೆಸ್ಟ ಕಾರೊಂದು ಢಿಕ್ಕಿ ಹೊಡೆದಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪ್ಯಾಸೆಂಜರ್ ಟೆಂಪೋ ಚಾಲಕ ಮುರ್ಡೇಶ್ವರದ ರೈಲ್ವೆ ನಿಲ್ದಾಣದ ಎದುರಿಗೆ ಬರುತ್ತಿರುವ ಸಂಧರ್ಭದಲ್ಲಿ ಏಕಾಏಕಿ ನಿಲ್ಲಿಸಿದ್ದು, ಹಿಂಬದಿಯಿಂದ ಬರುತ್ತಿದ್ದ ಕಾರು ಚಾಲಕನಿಗೆ ತಕ್ಷಣಕ್ಕೆ ಕಾರು ನಿಲ್ಲಿಸಲು ಸಾಧ್ಯವಾಗದೇ ಎದುರಿಗಿದ್ದ ಟೆಂಪೋಗೆ ಢಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಕಾರಿನ ಮುಂಭಾಗದ ಮುಕ್ಕಾಲು ಭಾಗ ನುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಮುರ್ಡೇಶ್ವರ ಪಿಎಸ್ ಭೀಮ್ ಸಿಂಗ್ ಲಮಾಣಿ ಹಾಗೂ ಸಿಬ್ಬಂದಿಗಳು ಬಂದಿದ್ದು, ಪರಿಶೀಲನೆ ನಡೆಸಿದ್ದಾರೆ. ಕಾರು ಹೆಸ್ಕಾಂ ಇಲಾಖೆಯ ಬಾಡಿಗೆಯ ಕಾರು ಎಂದು ಪೋಲೀಸ್ ಮೂಲದಿಂದ ತಿಳಿದು ಬಂದಿದ್ದು, ಪ್ರಕರಣವನ್ನು ಮುರ್ಡೇಶ್ವರ ಪೋಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.