ಉಳ್ಳಾಲ ಕಡಲಕೊರೆತ: 41 ಮನೆಗಳಿಗೆ ಪರ್ಯಾಯ ನಿವೇಶನ- ಸಚಿವರ ಸೂಚನೆ

Source: sonews | By Staff Correspondent | Published on 16th July 2018, 11:13 PM | Coastal News | Don't Miss |

ಉಳ್ಳಾಲ, ಸೋಮೇಶ್ವರ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಲ್ಲಿ ಕಡಲಕೊರೆತ ತೀವ್ರಗೊಂಡು ಸುಮಾರು 41 ಮನೆಗಳು ಸಂಪೂರ್ಣ ಹಾನಿಗೊಂಡಿದ್ದು, ಇವರಿಗೆ ಪರ್ಯಾಯ ನಿವೇಶನ ಗುರುತಿಸಿ ನೀಡಲು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ಆದೇಶಿಸಿದ್ದಾರೆ.
 ಅವರು ಇಂದು ಈ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಡಲಕೊರೆತದಿಂದ ಹೆಚ್ಚು ಅಪಾಯದಲ್ಲಿರುವ ಇಲ್ಲಿನ ನಿವಾಸಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಮುಂದಿನ 15 ದಿನದಲ್ಲಿ ಸೂಕ್ತವಾದ ನಿವೇಶನ ಗುರುತಿಸಿ, ಮಂಜೂರುಗೊಳಿಸಬೇಕು ಎಂದು ಮಂಗಳೂರು ತಹಶೀಲ್ದಾರ್ ಗೆ ಸಚಿವರು ತಿಳಿಸಿದರು.
ಉಳ್ಳಾಲ, ಸೋಮೇಶ್ವರ, ಸಸಿಹಿತ್ಲು ಮತ್ತಿತರ ಕಡೆ  ಕಡಲಕೊರೆತ ನಿಯಂತ್ರಣಕ್ಕೆ ತಡೆಗೋಡೆ ನಿರ್ಮಿಸಲಾಗಿದ್ದರೂ, ಅದನ್ನು ಮೀರಿ ನೀರು ಹರಿದುಬಂದಿದೆ. ಪ್ರಾಕೃತಿಕ ದುರಂತ ಗಳ ನಿಯಂತ್ರಣ ಕಷ್ಟಸಾಧ್ಯ. ಕಡಲ ತೀರದಲ್ಲಿರುವ ಮನೆಗಳು ಸದಾ ಅಪಾಯಕಾರಿಯಾಗಿವೆ. ಈ ನಿಟ್ಟಿನಲ್ಲಿ ಇಂತಹ ಮನೆಗಳನ್ನು ಬೇರೆಡೆಗೆ ಸ್ಥಳಾಂತರಿಸುವುದೇ ಸೂಕ್ತ ಎಂಬ ನಿರ್ಧಾರಕ್ಕೆ ಬದಲಾಗಿದೆ ಎಂದು ಸಚಿವರು ತಿಳಿಸಿದರು.
  ಸೋಮೇಶ್ವರದಲ್ಲಿ ಈಗಾಗಲೇ 1 ಕಿ.ಮೀ. ಸಮುದ್ರ ತಿರದಲ್ಲಿ ತಡೆಗೋಡೆ ನಿರ್ಮಿಸಲಾಗಿದೆ.ಇಲ್ಲಿ ಮತ್ತೆ 300 ಮೀಟರ್ ತಡೆಗೋಡೆ ನಿರ್ಮಿಸಲು ಆದೇಶಿಸಲಾಗಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದರು.
 ಈಗಾಗಲೇ ಮನೆ ಹಾನಿಗೀಡಾದ ಸಂತ್ರಸ್ತರಿಗೆ ಉಳ್ಳಾಲ ದರ್ಗಾ ಸಮಿತಿ ಮತ್ತು ಸ್ಥಳೀಯರ ನೆರವಿನಲ್ಲಿ ತಾತ್ಕಾಲಿಕ ಆಶ್ರಯ ಒದಗಿಸಲಾಗಿದೆ ‌. ಅಗತ್ಯ ಬಿದ್ದಲ್ಲಿ ಇನ್ನಷ್ಟು ಮಂದಿಗೆ ಆಶ್ರಯ ನೀಡಲು ಸಿದ್ಧವಿರುವುದಾಗಿ ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ರಶೀದ್ ಹಾಜಿ ತಿಳಿಸಿದ್ದಾರೆ ಎಂದು ಸಚಿವರು ತಿಳಿಸಿದರು. ಉಳ್ಳಾಲ ನಗರಸಭೆಯಿಂದಲೂ ಎಲ್ಲಾ ಅಗತ್ಯ ನೆರವು ನೀಡಲಾಗುತ್ತಿದೆ ಎಂದು ಅವರು ಹೇಳಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...