ಕೇಂದ್ರ ಸಚಿವ ಅನಂತ ಕುಮಾರ್ ತೀವ್ರ ಅಸ್ವಸ್ಥ ;ದಿ.ವೈರ್ ವರದಿ

Source: sonews | By Staff Correspondent | Published on 17th September 2018, 6:40 PM | National News | Special Report | Don't Miss |

ಹೊಸದಿಲ್ಲಿ: ಗೋವಾ ಮುಖ್ಯಮಂತ್ರಿ ಹಾಗು ಪಕ್ಷದ ಹಿರಿಯ ಮುಖಂಡ ಮನೋಹರ್ ಪರಿಕ್ಕರ್ ತೀವ್ರ ಅಸ್ವಸ್ಥರಾಗಿರುವ ಬೆನ್ನಿಗೇ ಬಿಜೆಪಿ ಹಾಗೂ ಕೇಂದ್ರ ಸರಕಾರಕ್ಕೆ ಮತ್ತೊಂದು ಆಘಾತ ಬಂದೆರಗಿದೆ. ಪಕ್ಷದ ಹಿರಿಯ ಮುಖಂಡ, ಕೇಂದ್ರ ಸಚಿವ ಕರ್ನಾಟಕದ ಅನಂತ್ ಕುಮಾರ್ ಅವರು ಈಗ ತೀವ್ರ ಅನಾರೋಗ್ಯಕ್ಕೊಳಗಾಗಿ ಲಂಡನ್ ನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂದು thewire.in ವರದಿ ಮಾಡಿದೆ. 

ಮನೋಹರ್ ಪರಿಕ್ಕರ್ ಅವರಂತೆ ಅನಂತ್ ಕುಮಾರ್ ಅವರಿಗೂ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಇರಬಹುದೆಂದು ಶಂಕಿಸಲಾಗಿದ್ದು, ಖಚಿತಪಡಿಸಲು ಉನ್ನತ ಮಟ್ಟದ ಪರೀಕ್ಷೆಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ. 

ಮೋದಿ ಸರ್ಕಾರದಲ್ಲಿ ಸಂಸದೀಯ ಮತ್ತು ರಸಗೊಬ್ಬರ ಖಾತೆ ಸಚಿವರಾಗಿರುವ ಅನಂತ್ ಕುಮಾರ್ ಪಕ್ಷದ ಹಿರಿಯ ಮುಖಂಡರಾಗಿದ್ದು ಈ ಹಿಂದಿನ ವಾಜಪೇಯಿ ಸರಕಾರದಲ್ಲೂ ಸೇವೆ ಸಲ್ಲಿಸಿರುವವರು. ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಸತತವಾಗಿ ಚುನಾವಣೆ ಗೆಲ್ಲುತ್ತಾ ಬಂದಿರುವ ಅನಂತ್ ಕುಮಾರ್ 2014 ರಲ್ಲಿ ಆಧಾರ್ ಮುಖ್ಯಸ್ಥ ನಂದನ್ ನಿಲೇಕಣಿಯವರನ್ನು ಸೋಲಿಸಿದ್ದರು. 

ಕಳೆದ ಎರಡು ವಾರಗಳಿಂದಲೇ ಅನಂತ್ ಕುಮಾರ್ ಲಂಡನ್ ನಲ್ಲಿದ್ದು, ಈಗ ಅಗತ್ಯ ಬಿದ್ದರೆ ಅವರನ್ನು ಅಮೆರಿಕಕ್ಕೂ ಕರೆದುಕೊಂಡು ಹೋಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಳೆದ ಕೆಲವು ವಾರಗಳಿಂದಲೇ ಅನಂತ್ ಕುಮಾರ್ ತಮ್ಮ ಇಲಾಖೆಯ ಕಚೇರಿಗೆ ಭೇಟಿ ನೀಡುತ್ತಿಲ್ಲ ಎಂದು ಹೇಳಲಾಗಿದ್ದು ಈವರೆಗೆ ಅವರ ಖಾತೆಯನ್ನು ಪ್ರಧಾನಿ ಮೋದಿ ಯಾರಿಗೂ ವಹಿಸಿಲ್ಲ. 

ಕೆಲವು ಸಮಯದ ಹಿಂದಷ್ಟೇ ಹಿರಿಯ ಸಚಿವ ಅರುಣ್ ಜೇಟ್ಲಿ ಮೂತ್ರಕೋಶದ ಗಂಭೀರ ಸಮಸ್ಯೆಗೆ ತುತ್ತಾಗಿ  ಕಿಡ್ನಿ ಕಸಿ ಮಾಡಿಸಿಕೊಂಡು ಬಂದಿದ್ದರು. ಈ ಸಂದರ್ಭದಲ್ಲಿ ಸುದೀರ್ಘ ಕಾಲ ಅವರ ಖಾತೆಯನ್ನು ಪಿಯೂಷ್ ಗೋಯಲ್ ಅವರು ವಹಿಸಿಕೊಂಡಿದ್ದರು. ಇದೀಗ ಅನಂತ್ ಕುಮಾರ್ ಅವರ ಸರದಿ. ಗೋವಾದಲ್ಲಿ ಈಗಾಗಲೇ ಮುಖ್ಯಮಂತ್ರಿ ಬದಲಾಯಿಸಲು ಬಿಜೆಪಿಯ ಕೇಂದ್ರ ತಂಡ ಅಲ್ಲಿಗೆ ಭೇಟಿ ನೀಡಿದೆ. ಈ ಬಗ್ಗೆ ಕೇಂದ್ರ ಸರಕಾರವಾಗಲೀ, ಸಚಿವರ ಕಚೇರಿಯಾಗಲೀ ಅಧಿಕೃತ ಮಾಹಿತಿ ನೀಡಿಲ್ಲ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...