ಭಟ್ಕಳ: ತಾಲೂಕಿನ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಪನಟ್ಟೆ ಬಳಿಯ ಹೊಳೆಯೊಂದರಲ್ಲಿ ಅಪರಿಚಿತ ಮೃತದೇಹವೊಂದು ಶನಿವಾರ ಪತ್ತೆಯಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಗ್ರಾಮೀಣ ಠಾಣಾ ಪೊಲೀಸರು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದಾರೆ. 3-4 ದಿನಗಳ ಹಿಂದೆಯೇ ವ್ಯಕ್ತಿಯು ನೀರನಲ್ಲಿ ಮುಳುಗಿರುವ ಶಂಕೆವ್ಯಕ್ತವಾಗಿದ್ದು ಯಾವುದೇ ಗುರುತು ಪತ್ತೆಯಾಗಿರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದೊಂದು ಆತ್ಮಹತ್ಯೆಯೋ ಆಥವಾ ಕೊಲೆಯೋ ಎಂಬುದನ್ನು ಪೊಲೀಸರ ತನಿಖೆಯಿಂದಲೆ ತಿಳಿದುಬರಬೇಕಾಗಿದೆ.