ಗೋಹತ್ಯ ಶಂಕೆ; ವ್ಯಾಪಾರಿಯನ್ನು ಥಳಿಸಿ ಕೊಂದ ಉ.ಪ್ರ.ಪೊಲೀಸರು; ಆರೋಪ

Source: sonews | By Staff Correspondent | Published on 23rd June 2018, 9:25 PM | National News | Don't Miss |

ಲಕ್ನೊ: ಉತ್ತರಪ್ರದೇಶದ ಬರೇಲಿಯಲ್ಲಿ ಗೋ ಹತ್ಯೆ ಮಾಡುತ್ತಿದ್ದರೆಂಬ ಶಂಕೆಯಲ್ಲಿ ಮಾಂಸದ ವ್ಯಾಪಾರಿಯನ್ನು ಪೊಲೀಸರೇ ಥಳಿಸಿ ಹತ್ಯೆ ಮಾಡಿದ್ದಾರೆ ಎಂದು ಮೃತ ವ್ಯಕ್ತಿಯ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಮಾಂಸದ ವ್ಯಾಪಾರಿಯಾಗಿದ್ದ ಮುಹಮ್ಮದ್ ಸಲೀಂ ಖುರೇಶಿ ಅಲಿಯಾಸ್ ಮುನ್ನಾ ಎಂಬಾತನನ್ನು ಪೊಲೀಸರು ಥಳಿಸಿದ ಕಾರಣ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ದಿಲ್ಲಿಯ ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ 8 ದಿನಗಳ ಬಳಿಕ ಖುರೇಶಿ ಮೃತಪಟ್ಟಿದ್ದಾನೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಪ್ರಕರಣದ ಹಿನ್ನೆಲೆಯಲ್ಲಿ ಠಾಣಾಧಿಕಾರಿ ಹಾಗೂ ಇಬ್ಬರು ಕಾನ್‌ಸ್ಟೇಬಲ್‌ಗಳನ್ನು ಅಮಾನತುಗೊಳಿಸಲಾಗಿದ್ದು ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಇವರ ವಿರುದ್ಧ ಹಲ್ಲೆ ಮತ್ತು ಹಣ ವಸೂಲಿ ಪ್ರಕರಣ ದಾಖಲಿಸಲಾಗಿದ್ದು ವಲಯಾಧಿಕಾರಿ ನಿಧಿ ದ್ವಿವೇದಿ ಪ್ರಕರಣಗಳ ತನಿಖೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯ ಕಾರ್ಪೊರೇಟರ್‌ನ ಸೂಚನೆಯಂತೆ ಪೊಲೀಸ್ ಸಿಬ್ಬಂದಿಗಳು ತನ್ನ ಪತಿಯ ಮೇಲೆ ಹಲ್ಲೆ ನಡೆಸಿರುವುದಾಗಿ ಖುರೇಶಿಯ ಪತ್ನಿ ಫರ್ಝಾನಾ ಉ.ಪ್ರದೇಶ ಪೊಲೀಸ್ ಮಹಾನಿರ್ದೇಶಕರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ತನ್ನ ಪತಿಯಿಂದ ಹಣ ವಸೂಲು ಮಾಡಲು ಬಯಸಿದ್ದ ಪೊಲೀಸರು ಥಳಿಸಿದ್ದಾರೆ. ಇದಕ್ಕೆ ಸ್ಥಳೀಯ ಕಾರ್ಪೊರೇಟರ್ ಅಂಜುಮ್ ಖಾನ್ ಅಲಿಯಾಸ್ ಫಿರ್ದೌಸ್‌ನ ಕುಮ್ಮಕ್ಕು ಕಾರಣ ಎಂದು ಫರ್ಝಾನಾ ಆರೋಪಿಸಿದ್ದಾರೆ.

ಬರೇಲಿಯ ಬರಾದರಿ ಪ್ರದೇಶದಲ್ಲಿ ಖುರೇಶಿಗೆ ಸಣ್ಣ ಮಾಂಸದ ಅಂಗಡಿಯೊಂದಿದೆ. ಈ ಅಂಗಡಿಯಲ್ಲಿ ಖುರೇಶಿ ಗೋ ಹತ್ಯೆ ಮಾಡುತ್ತಿದ್ದಾದೆ ಎಂಬ ದೂರಿನ ಹಿನ್ನೆಲೆಯಲ್ಲಿ ಆತನನ್ನು ಠಾಣೆಗೆ ಕರೆತರಲು ಕಂಕರ್‌ತೊಲಾ ಠಾಣಾಧಿಕಾರಿ ಅಲಿ ಮಿಯಾ ಝೈದಿ ಕಾನ್‌ಸ್ಟೇಬಲ್‌ಗಳಾದ ಶ್ರೀಪಾಲ್ ಮತ್ತು ಹರೀಶ್‌ಚಂದ್ರರನ್ನು ಜೂನ್ 14ರಂದು ಖುರೇಶಿಯ ಮನೆಗೆ ಕಳುಹಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ವಿಚಾರಣೆ ಸಂದರ್ಭ ತನ್ನ ಮೇಲಿನ ಆರೋಪವನ್ನು ಖುರೇಶಿ ನಿರಾಕರಿಸಿದಾಗ ಆತನನ್ನು ಹಿಗ್ಗಾಮುಗ್ಗಾ ಥಳಿಸಲಾಗಿದ್ದು ಖುರೇಶಿಗೆ ಪ್ರಜ್ಞೆ ತಪ್ಪಿದೆ ಎಂದು ಕುಟುಂಬದ ಸದಸ್ಯರು ಆರೋಪಿಸುತ್ತಿದ್ದಾರೆ.

ತಕ್ಷಣ ಖುರೇಶಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಿಲ್ಲಿಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಜೂನ್ 21ರಂದು ಮೃತಪಟ್ಟಿದ್ದಾರೆ ಎಂದು ಬರೇಲಿಯ ಹಿರಿಯ ಪೊಲೀಸ್ ಅಧೀಕ್ಷಕ ಕಲಾನಿಧಿ ನೈಥಾನಿ ತಿಳಿಸಿದ್ದಾರೆ. ಸಂತ್ರಸ್ತ ವ್ಯಕ್ತಿಯ ಕುಟುಂಬದವರು ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ದೈಹಿಕ ಹಲ್ಲೆ ನಡೆಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಠಾಣಾಧಿಕಾರಿ ಮತ್ತು ಇಬ್ಬರು ಕಾನ್‌ಸ್ಟೇಬಲ್‌ಗಳನ್ನು ಅಮಾನುತಗೊಳಿಸಿ ತನಿಖೆಗೆ ಆದೇಶಿಸಲಾಗಿದೆ. ವರದಿ ಸಲ್ಲಿಕೆಯಾದ ಬಳಿಕ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ.

ಆದರೆ ತಾವು ಪ್ರತಿಭಟನೆ ನಡೆಸಿದ ಬಳಿಕವಷ್ಟೇ ಆರೋಪಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಖುರೇಶಿಯ ಸಾವಿಗೆ ಕಾರಣವಾದ ಥಳಿತ ಪ್ರಕರಣದಲ್ಲಿ ಶಾಮೀಲಾಗಿರುವ ಪೊಲೀಸ್ ಅಧಿಕಾರಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ಖುರೇಶಿಯ ಕುಟುಂಬದ ಸದಸ್ಯರು ಪೊಲೀಸ್ ಮಹಾನಿರ್ದೇಶಕ ಒ.ಪಿ.ಸಿಂಗ್‌ರಿಗೆ ಪತ್ರ ಬರೆದಿದ್ದಾರೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...