ಉ.ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ಬಂಪರ್ ಜಯ ಇವಿಎಂ  ನಲ್ಲಿ ಗೋಲ್ಮಾಲ್?

Source: sonews | By Staff Correspondent | Published on 1st December 2017, 11:44 PM | National News | Don't Miss |

ಲಕ್ನೋ: ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಆದರೆ ಟ್ಟಿಟರ್ ನಲ್ಲಿ ಪೋಸ್ಟ್ ಮಾಡಲಾಗಿರುವ ವಿಡಿಯೋವೊಂದು ಚುನಾವಣೆಯಲ್ಲಿ ಬಳಸಲಾದ ಇವಿಎಂಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತಿದೆ ಎಂದು nationalheraldindia.com ವರದಿ ಮಾಡಿದೆ.

ಉತ್ತರ ಪ್ರದೇಶದ ಶಹರಾನ್ಪುರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಬನಾ ಅವರು ಒಂದೂ ಮತಗಳನ್ನು ಪಡೆದಿಲ್ಲ. “ಕೊನೆಯ ಪಕ್ಷ ನನ್ನ ಕುಟುಂಬಸ್ಥರಾದರೂ ನನಗೆ ಮತ ನೀಡಿದ್ದಾರೆ. ಹಾಗಾದರೆ ಒಂದು ಮತವನ್ನು ಪಡೆಯದಿರಲು ಹೇಗೆ ಸಾಧ್ಯ” ಎಂದವರು ಪ್ರಶ್ನಿಸಿದ್ದಾರೆ.

“ನಾನು ನೀಡಿದ ಮತ ಎಲ್ಲಿ ಮಾಯವಾಗಿದೆ. ನಮ್ಮ ಕುಟುಂಬದಿಂದ ಕನಿಷ್ಠ ಮೂರು ಮತಗಳು ಬಿದ್ದಿದೆ. ಆದರೆ ನಮಗೆ ಕಡೆಯ ಪಕ್ಷ 900 ಮತಗಳಾದರೂ ಬೀಳಬೇಕಿತ್ತು” ಎಂದು ಶಬನಾರ ಪತಿ ಆಜ್ ತಕ್ ನ ಪತ್ರಕರ್ತರೊಬ್ಬರು ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಹೇಳಿದ್ದಾರೆ.

ಶಹರಾನ್ಪುರಕ್ಕೆ ಇದೇ ಮೊದಲ ಬಾರಿ ಮುನಿಸಿಪಲ್ ಚುನಾವಣೆ ನಡೆದಿತ್ತು. ಮತದಾರರ ಪಟ್ಟಿಯಲ್ಲಿ ಹಲವರ ಹೆಸರುಗಳು ನಾಪತ್ತೆಯಾಗಿದೆ ಎನ್ನುವ ಅರೋಪಗಳೂ ಇದೇ ಕೇಂದ್ರದಿಂದ ಈ ಹಿಂದೆ ಕೇಳಿಬಂದಿತ್ತು.

ಮತದಾನದ ದಿನವೂ ಇಲ್ಲಿ ಮತಯಂತ್ರದ ಯಡವಟ್ಟುಗಳು ಸಂಭವಿಸಿತ್ತು. ಮೀರತ್ ಹಾಗು ಶಹರಾನ್ಪುರದ ಹಲವೆಡೆ ಬೇರೆ ಯಾವುದೇ ಪಕ್ಷಗಳಿಗೆ ಮತ ಹಾಕಿದರೂ ಬಿಜೆಪಿಗೆ ಮತ ಬೀಳುತ್ತಿದೆ ಎಂಬ ಆರೋಪವೂ ಕೇಳಿಬಂದಿತ್ತು. 

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...