ಹಿಂದೂ, ಮುಸ್ಲಿಮ,ಕ್ರೈಸ್ತರನ್ನು ಸಮಾನವಾಗಿ ಕಾಣುವಂತೆ ಸಿ.ಎಂ.ಯೋಗಿಗೆ ಪಾಲಕರ ಸಲಹೆ

Source: S O News service | By Staff Correspondent | Published on 20th March 2017, 4:06 PM | National News | Special Report | Don't Miss |

ಲಕ್ನೌ: ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ರವಿವಾರ ಪ್ರಮಾಣವಚನ ಸ್ವೀಕರಿಸಿದ ಹಿಂದುತ್ವವಾದಿ ಆದಿತ್ಯನಾಥ್ ಅವರಿಗೆ ಮತೀಯ ರಾಜಕಾರಣದಿಂದ ದೂರವಿರುವಂತೆ ಸಲಹೆಯೊಂದು ಬಂದಿದೆ. ಅಂದ ಹಾಗೆ ಈ ಸಲಹೆ ಬಂದಿರುವುದು ಅವರ ತಂದೆ ಆನಂದ್ ಸಿಂಗ್ ಬಿಷ್ಠ್ ಅವರಿಂದ.

 

‘‘ಅವರು ಎಲ್ಲಾ ಧರ್ಮಗಳನ್ನೂ ಗೌರವಿಸುತ್ತಾರೆಂದು ನಾನು ನಿರೀಕ್ಷಿಸುತ್ತೇನೆ’’ ಎಂದು ಆದಿತ್ಯನಾಥ್ ತಂದೆ ಹೇಳಿದ್ದಾರೆ. ‘‘ಅವರು ಬಿಜೆಪಿಯ ಧ್ಯೇಯ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಅಂತೆಯೇ ಅವರು ಕಾರ್ಯಾಚರಿಸಬೇಕು. ಬಡವರು, ಶ್ರೀಮಂತರು, ಹಿಂದೂಗಳು, ಮುಸ್ಲಿಮರು ಹಾಗೂ ಕ್ರೈಸ್ತರನ್ನು ಸಮಾನವಾಗಿ ಕಾಣಬೇಕು. ಈಗ ಅವರ ಜವಾಬ್ದಾರಿ ಹೆಚ್ಚಾಗಿದೆ’’ ಎಂದು ಹೇಳಿದ್ದಾರೆ.

ಉತ್ತರಾಖಂಡ ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿಯಾಗಿರುವ ಬಿಷ್ಠ್ ಪ್ರಕಾರ ಅವರ ಪುತ್ರ ಕೋಮುವಾದ ಹಾಗೂ ಹಿಂದುತ್ವದೊಂದಿಗಿನ ತಮ್ಮ ಸಂಬಂಧವನ್ನು ತ್ಯಜಿಸಿದ್ದಾರೆ. ಕೋಮುವಾದಿ ರಾಜಕಾರಣದಿಂದ ದೂರವಿರಬೇಕೆಂದು ಆದಿತ್ಯನಾಥರ ಕುಟುಂಬ ಬಯಸಿದೆ.

‘‘ಇತ್ತೀಚೆಗೆ ನಾನು ಆತನನ್ನು ಭೇಟಿಯಾದಾಗ ಕೋಮು ಭಾವನೆಗಳಿಂದ ದೂರವಿರುವಂತೆ ಸಲಹೆ ನೀಡಿದ್ದೆ. ಈ ಬಗ್ಗೆ ಆತ ಭರವಸೆ ನೀಡಿದ್ದಾನೆ’’ ಎಂದು ಮುಖ್ಯಮಂತ್ರಿಯ ಸೋದರ ಮಾವ ಹೇಳಿಕೊಂಡಿದ್ದಾರೆ.

ಉತ್ತರಾಖಂಡದ ಪಂಚೂರ್ ಗ್ರಾಮದಲ್ಲಿ ಹುಟ್ಟಿದ ಆದಿತ್ಯನಾಥ್ ಮೂಲ ಹೆಸರು ಅಜಯ್ ಸಿಂಗ್ ಬಿಷ್ಠ್. ಅವರು ಪದವಿಯಲ್ಲಿ ಓದುತ್ತಿರುವಾಗಲೇ ಎಬಿವಿಪಿ ಸೇರಿದ್ದರು. ಆದಿತ್ಯನಾಥ್ ಅವರ ಕಿರಿಯ ಸಹೋದರನ ಪ್ರಕಾರ ಕೂಡ ಅವರು ಉಗ್ರ ಹಿಂದುತ್ವವಾದಿಯಾಗಿಲ್ಲವಾದರೂ ಗೋರಖನಾಥ ದೇವಳದ ಮುಖ್ಯ ಅರ್ಚಕರಾಗಿ ಅವರು ಹಿಂದುತ್ವವನ್ನು ಪಸರಿಸುವುದು ಸಹಜವಾಗಿದೆ ಎಂದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...