ನಗರ ಸ್ಥಳೀಯ ಸಂಸ್ಥೆಗಳು ಕೈಗೊಂಡ ಕಾಮಗಾರಿಗಳ ಪಟ್ಟಿ ಕೊಡಿ : ಜಿಲ್ಲಾಧಿಕಾರಿ

Source: sonews | By Staff Correspondent | Published on 14th March 2019, 11:17 PM | Coastal News | Don't Miss |

ಕಾರವಾರ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಸೂಚಿಸಿದ್ದಾರೆ.
    
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ನಗರ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಸಭೆ ನಡೆಸಿದ ಅವರು, ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಹೊಸ ಕಾಮಗಾರಿ ಟೆಂಡರ್‍ಗಳ್ನು ಕೈಗೆತ್ತಿಕೊಳ್ಳದಿರಲು ಹಾಗೂ ಈಗಾಗಲೇ ಟೆಂಡರ್ ಆಗಿರುವ ಕಾಮಗಾರಿಯನ್ನು ಆರಂಭಿಸುವ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಸೂಚಿಸಿದರು.
    
ಕುಡಿಯುವ ನೀರು ಸೇರಿದಂತೆ ಜನರ ಅತ್ಯಗತ್ಯದ  ಕೆಲಸಗಳನ್ನು ನಿರ್ವಹಿಸಲು ಯಾವುದೇ ಅಭ್ಯಂತರವಿಲ್ಲ ಆದರೆ ಅದು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತಿರಬೇಕು ಹಾಗೂ ನ್ಯಾಯ ಬದ್ಧವಾಗಿರಬೇಕು ಎಂದು ಅವರು ಹೇಳಿದರು.
    
ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲೂ ಆಡಳಿತಾಧಿಕಾರಿಗಳು ಇರುವುದರಿಂದ ಯಾವುದೇ ನಿರ್ಧಾರಗಳನ್ನು ಕೈಗೊಳ್ಳುವಾಗ ಕಾನೂನಾತ್ಮಕವಾಗಿರಬೇಕು ಅಷ್ಟನ್ನು ಮಾತ್ರ ಮುಖ್ಯಾಧಿಕಾರಿಗಳು ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ಇರಿಸಬೇಕು ಎಂದು ಹೇಳಿದರು.
    
ಲೋಕಸಭೆ ಚುನಾವಣೆಗೆ ದೊಡ್ಡ ದೊಡ್ಡ ರ್ಯಾಲಿಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ರಾಜಕೀಯ ಪಕ್ಷಗಳಿಗೆ ಅನುಮತಿ ನೀಡುವಾಗ ಸಮಾನ ಅವಕಾಶಗಳನ್ನು ನೀಡಬೇಕು. ಮಾದರಿ ನೀತಿ ಸಂಹಿತೆ ವ್ಯಾಪ್ತಿಯಲ್ಲಿ ಸರಿಯಾದ ನಿರ್ಧಾರಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.
    
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಾಗರಾಜ್ ಸಿಂಗ್ರೇರ್, ನಗರಾಭಿವೃದ್ಧಿ ಪ್ರಾಧಿಕಾರ ಯೋಜನಾ ನಿರ್ದೇಶಕ ವಿರಕ್ತಮಠ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಆರ್.ಪಿ.ನಾಯಕ್, ಕಾರವಾರ ನಗರಸಭೆ ಆಯುಕ್ತ ಎಸ್.ಯೋಗೇಶ್ವರ್ ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...