ಕಾರವಾರ :ಶಿರಸಿ ಪ್ರಾದೇಶಿಕ ಸಾರಿಕೆ ಅಧಿಕಾರಿಗಳ ಕಚೇರಿಯಲ್ಲಿ ಸೆಪ್ಟೆಂಬರ್ 21ರಿಂದ ವಾಹನ್-4 ಅಧಿಕೃತವಾಗಿ ಪೂರ್ಣ ಪ್ರಮಾಣದಲ್ಲಿ ಪ್ರಾರಂಭವಾಗಲಿದೆ ಎಂದು ಶಿರಸಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿ.ಡಿ.ನಾಯ್ಕ್ ತಿಳಿಸಿದ್ದಾರೆ.
ವಾಹನಗಳ ನೋಂದಣಿ ಸೇವೆಗಳಿಗೆ ಸಂಬಂಧಿಸಿದ ಕೇಂದ್ರೀಕೃತ ಹಾಗೂ ವೆಬ್ ಆಧಾರಿತ ವಾಹನ್-4 ಸಾಫ್ಟ್ವೇರ್ ಅನುಷ್ಠಾನಗೊಳಿಸುವಂತೆ ಸಾರಿಗೆ ಆಯುಕ್ತರು ಆದೇಶಿಸಿರುವ ಹಿನ್ನೆಲೆಯಲ್ಲಿ ಸೆ.21ರಿಂದ ಪೂರ್ಣ ಪ್ರಮಾಣದಲ್ಲಿ ವಾಹನ್-4 ಪ್ರಾರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಎನ್ಐಸಿರವರ ತಾಂತ್ರಿಕ ನೆರವಿನಲ್ಲಿ ವಾಹನಗಳ ನೋಂದಣಿಯ ವಾಹನ್-4 ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು ಇನ್ನು ಮುಂದೆ ನೋಂದಣಿ ಸಂಬಂಧಿಸಿದ ಎಲ್ಲ ವ್ಯವಹಾರಗಳು ವಾಹನ್-4 ತಂತ್ರಾಂಶದಲ್ಲೇ ನಡೆಯಲಿದೆ. ಇದಕ್ಕೆ ಅನುಗುಣವಾಗಿ ವಾಹನ್-3 ಸಂಬಂದಿಸಿದ ಆನ್ಲೈನ್ ಮೂಲಕ ವಾಹನ ನೋಂದಣಿಗೆ ಅರ್ಜಿ ಸಲ್ಲಿಸುವಿಕೆ ಹಾಗೂ ಇ-ಪಾವತಿಯನ್ನು ಸೆ.22ರಿಂದ ಸ್ಥಗಿತಗೊಳಿಸಲಾಗಿದೆ. ವಾಹನ್-1ಗೆ ಸಂಬಂಧಿಸಿದಂತೆ ನಗದು ವಿಭಾಗ (ಖಜಾನೆ ಕೌಂಟರ್) ಸೆ.24ರಿಂದ ಸ್ಥಗಿತಗೊಳ್ಳಲಿದೆ. ಸೆ.26ರಿಂದ ಡಾಟಾ ಬೇಸಿನ್ ಪೋರ್ಟಿಂಗ್ ಕಾರ್ಯ ಸಿದ್ಧಪಡಿಸಲಾಗುವುದು ಹಾಗೂ ಎನ್ಐಸಿಯವರಿಂದ ವಾಹನ್-1 ಡಾಟಾವನ್ನು ವಾಹನ್-4ಗೆ ಪೋರ್ಟಿಂಗ್ ಕಾರ್ಯ ನಿರ್ವಹಿಸಲಾಗುವುದು. ದಿನಾಂಕ 27-09-2018ರಿಂದ ವಾಹನ ನೋಂದಣಿ ರಹದಾರಿ ಹಾಗೂ ಅರ್ಹತಾ ಪತ್ರಕ್ಕೆ ಸಂಬಂಧಿಸಿದ ಸೇವೆಗಳು ಲಭ್ಯವಿದೆ. ಈ ಹಿನ್ನೆಲೆಯಲ್ಲಿ 26-09-2018ರವರೆಗೆ ಸೇವೆಗಳು ಸ್ಥಗಿತವಾಗುವುದರಿಂದ ಸಾರ್ವಜನಿಕರು ಸಹಕರಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿ.ಡಿ.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...
ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ
ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...