ಕುಮಟಾ : ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಪಟ್ಟಣದ ಕುಂಭೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಿಶ್ವೇಶ್ವರ ಭಟ್ಟ ಅವರು ಕೊಲೆಯಾದ ಸುಳಿವು ಪೊಲೀಸರಿಗೆ ದೊರೆತ್ತಿದೆ.
ಪಟ್ಟಣದ ಹೆಡ್ಪೋಸ್ಟ್ ಆಫೀಸ್ ಸಮೀಪದ ನಿವಾಸಿ ವಿಶ್ವೇಶ್ವರ ಭಟ್ ಅವರು ಕಳೆದ ಮಂಗಳವಾರ ಸಂಜೆ ತಾಲೂಕಿನ ಮೂರೂರು ಸಮೀಪದಲ್ಲಿ ಹೊಸ ಜಾಗದ ಶುದ್ಧಿಕರಣ ಹೋಮಕ್ಕಾಗಿ ಅಪರಿಚಿತ ವ್ಯಕ್ತಿಯೊಂದಿಗೆ ತನ್ನದೆ ಬೈಕ್ನಲ್ಲಿ ತೆರಳಿದ್ದರು. ರಾತ್ರಿಯಾದರೂ ಮನೆಗೆ ವಾಪಸ್ ಬಾರದ ಕಾರಣ ಗಾಬರಿಯಾದ ಅವರ ಪತ್ನಿ ಬುಧವಾರ ಕುಮಟಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಶ್ವೇಶ್ವರ ಭಟ್ ಬಳಸಿರುವ ಮೊಬೈಲ್ನ ಕರೆಗಳನ್ನು ಪರಿಶೀಲಿಸುವ ಜೊತೆಗೆ ಪಟ್ಟಣದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾದ ವಿಡಿಯೋಗಳ ಪರಿಶೀಲನೆ ನಡೆಸಿದ್ದರು. ಭಟ್ಟರ ಮನೆಗೆ ಆಗಮಿಸಿದ ಜಾಕೆಟ್ ಧರಿಸಿದ ಅಪರಿಚಿತ ವ್ಯಕ್ತಿಯು ಹೊಸ ಬಸ್ ನಿಲ್ದಾಣದಿಂದ ಬೇರೆ ಬೈಕ್ನಲ್ಲಿ ಭಟ್ಟರ ಮನೆಗೆ ಬಂದಿರುವುದು ಮತ್ತು ಭಟ್ಟರ ಮನೆಯಿಂದ ಮೂರೂರು ರಸ್ತೆಗೆ ತೆರಳುತ್ತಿರುವ ದೃಶ್ಯಾವಳಿಯನ್ನು ಪೊಲೀಸರಿಗೆ ಲಭಿಸಿರುವುದು ತಿಳಿದುಬಂದಿತ್ತು. ಭಟ್ಟರ ಮೊಬೈಲ್ ಟವರ್ ಲೋಕೇಶನ್ ಕೂಡ ಮೂರೂರು ಗುಡ್ಡದಲ್ಲೆ ತೋರಿಸುತ್ತಿರುವುದರಿಂದ ಪೊಲೀಸರು ರಾತ್ರಿ ಕೂಡ ಗಸ್ತು ತಿರುಗುವ ಮೂಲಕ ಶೋಧ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದರು.
ಮೊಬೈಲ್ ಕರೆ ಆಧರಿಸಿ ದೊರೆತ ಸುಳಿವಿನ ಮೇರೆಗೆ ಶಿರಸಿಯಲ್ಲಿ ಇಬ್ಬರನ್ನು ಗುರುವಾರ ಸಂಜೆ ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ವಿಶ್ವೇಶ್ವರ ಭಟ್ಟರ ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಕಾರ್ಯಪ್ರವೃತರಾದ ಪೊಲೀಸರು ಕೂಜಳ್ಳಿ ಭಾಗದ ತೋಟವೊಂದರಲ್ಲಿ ಹೂತು ಹಾಕಿದ್ದ ಶವವನ್ನು ಮೇಲ್ಕೆತ್ತುವ ಪ್ರಕ್ರಿಯೆ ನಡೆದಿದೆ. ಜಮೀನು ವಿಷಯಕ್ಕೆ ಸಂಬಂಧಿಸಿದಂತೆ ಈ ಹತ್ಯೆ ನಡೆದಿದ್ದು, ಕೊಲೆ ಪ್ರಕರಣದಲ್ಲಿ ಸಂಬಂಧಿಕರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ
Read These Next
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಕಾರವಾರ: ಚುನಾವಣಾ ಕಂಟ್ರೋಲ್ ರೂಂ ಗೆ ವೆಚ್ಚ ವೀಕ್ಷಕರ ಭೇಟಿ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರದಿರುವ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ...