ಮೈಸೂರು: ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಜಾತ್ರ ಮಹೋತ್ಸವಕ್ಕೆ ರಾಜ್ಯದ ವಿವಿಧ ಮೂಲಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಹಾಗೂ ನಾಗರೀಕರಿಗೆ ಮಂಗಳವಾರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭೆ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಮತದಾನ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಪಾಲ್ಗೊಂಡು ತಮ್ಮ ಅತ್ಯಮೂಲ್ಯವಾದ ಮತದಾನ ಹಕ್ಕನ್ನು ಚಲಾಯಿಸಬೇಕು. ಸಮಾಜದ ಅಂಕು ಡೊಂಕುಗಳನ್ನು ತಿದ್ದಲು ಮತದಾನವು ಬ್ರಹ್ಮಾಸ್ತ್ರವಾಗಿದೆ ಎಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಂಠ ರಾಜೇ ಅರಸ್ ತಿಳಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೆ ಪ್ರಭುಗಳು, ಜನಪರ ಕಾಳಜಿ ಹಾಗೂ ದೇಶದ ಅಭಿವೃದ್ಧಿಯ ಮಾನದಂಡ ಇಟ್ಟುಕೊಂಡು ಉತ್ತಮ ಆಡಳಿತ ನಡೆಸುವ ಸರ್ಕಾರವನ್ನು ಆಯ್ಕೆ ಮಾಡುವ ಅವಕಾಶ ನಿಮ್ಮ ಕೈಯಲ್ಲಿದೆ ಚುನಾವಣೆಯ ದಿನ ಮತಗಟ್ಟೆಗೆ ಬಂದು ತಪ್ಪದೇ ಮತದಾನ ಮಾಡಿ ನಿಮ್ಮ ಕರ್ತವ್ಯವನ್ನು ಪೊರೈಸಿ ಎಂದರು.
ನಾಗರೀಕರು ಹಣ, ಹೆಂಡ ಹಾಗೂ ಇನ್ನಿತರ ಆಮಿಷಗಳಿಗೆ ಒಳಗಾಗದೆ ಪ್ರಜಾಪ್ರಭುತ್ವದ ಬಲಪಡಿಸಿ, ದೇಶ ಪ್ರಜೆಗಳಿಗೋಸ್ಕರ ಪಾರದರ್ಶಕ ಆಡಳಿತ ನಡೆಸುವ ನಾಯಕರನ್ನು ಆಯ್ಕೆ ಮಾಡಲು ಮುಂದಾಗುವಂತೆ ಮತದಾರರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೆಶಕರಾದ ಶ್ರೀನಿವಾಸ್ , ಕಛೇರಿ ವ್ಯವಸ್ಥಾಪಕ ನಂಜುಡಸ್ವಾಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು