ರೈಲ್ವೆ ಚಾಲಕಿ ಮುಮ್ತಾಜ್ ಗೆ  ನಾರಿ ಶಕ್ತಿರಾಷ್ಟ್ರಪತಿ ಪುರಸ್ಕಾರ

Source: S O News service | By Staff Correspondent | Published on 9th March 2017, 11:12 PM | National News | Special Report | Don't Miss |

ಮುಂಬೈ: 25 ವರ್ಷಗಳ ಹಿಂದೆ ಪುರುಷರ ಏಕಸ್ವಾಮ್ಯ ಮುರಿದು ಏಷ್ಯಾದ ಮೊಟ್ಟಮೊದಲ ಡೀಸೆಲ್ ಎಂಜಿನ್ ರೈಲು ಚಾಲಕಿ ಎನಿಸಿಕೊಂಡಿದ್ದ ಮುಂಬೈ ಮೂಲದ ಮುಮ್ತಾಜ್ ಎಂ.ಖಾಝಿ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ನಾರಿ ಶಕ್ತಿ ಪುರಸ್ಕಾರ ಪ್ರದಾನ ಮಾಡಿದರು. ಇವರ ಜತೆಗೆ ಇತರ ಆರು ಮಂದಿ ಕೂಡಾ ಈ ಅತ್ಯುನ್ನತ ಗೌರವಕ್ಕೆ ಪಾತ್ರರಾದರು.

 

ಮುಮ್ತಾಜ್ ಇದುವರೆಗೆ ವಿವಿಧ ಬಗೆಯ ರೈಲುಗಳನ್ನು ಚಾಲನೆ ಮಾಡಿದ್ದು, ಲಕ್ಷಾಂತರ ಮಹಿಳೆಯರಿಗೆ ಸ್ಫೂರ್ತಿ ತುಂಬಿದ್ದಾರೆ. "ಎಲ್ಲರ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಅಭಿವೃದ್ಧಿ ಸಾಧಿಸುವ ಗುರಿ ಹೊಂದಿದ ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯಕ್ಕೆ ಅವಕಾಶವಿಲ್ಲ" ಎಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಮುಖರ್ಜಿ ಬಣ್ಣಿಸಿದರು.

45 ವರ್ಷ ವಯಸ್ಸಿನ ಮುಮ್ತಾಜ್, ಮುಂಬೈನ ಸೆಂಟ್ರಲ್ ರೈಲ್ವೆಯ ಉಪನಗರ ಸ್ಥಳೀಯ ರೈಲುಗಳ ಮೋಟರ್‌ವುಮನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಾಕತಾಳೀಯವೆಂದರೆ ಇವರು ರೈಲು ಚಲಾಯಿಸುವ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್- ಥಾಣೆ ವಿಭಾಗವು ಭಾರತದ ಮೊಟ್ಟಮೊದಲ ಹಾಗೂ ಇಕ್ಕಟ್ಟಾದ ರೈಲ್ವೆ ಹಳಿಯಾಗಿದೆ.

ಸಂಪ್ರದಾಯಸ್ಥ ಮುಸ್ಲಿಂ ಕುಟುಂಬದಲ್ಲಿ ಜನಿಸಿದ ಮುಮ್ತಾಜ್, 1989ರಲ್ಲಿ ರೈಲ್ವೆಯಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದಾಗ, ಸ್ವತಃ ರೈಲ್ವೆ ಉದ್ಯೋಗಿಯಾಗಿದ್ದ ತಂದೆ ಅಲ್ಲಾರಖು ಇಸ್ಮಾಯಿಲ್ ಖಾತಾವಾಲಾ ಅವರಿಂದ ವಿರೋಧ ಎದುರಿಸಬೇಕಾಯಿತು. ಸ್ನೇಹಿತರು ಹಾಗೂ ಕುಟುಂಬದವರು ಮನವೊಲಿಸಿದ ಬಳಿಕ, ಆಕೆಯ ಕನಸಿನ ಉದ್ಯೋಗಕ್ಕೆ ಸಮ್ಮತಿ ಸೂಚಿಸಿದರು. ಮುಮ್ತಾಜ್ ಅವರು ಮಸೂದ್ ಕಾಜಿ ಜತೆ ವಿವಾಹವಾಗಿದ್ದು, ಪತಿ ಎಲೆಕ್ಟ್ರಿಕಲ್ ಎಂಜಿನಿಯರ್ ಆಗಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

1995ರಲ್ಲಿ ಇವರ ಹೆಸರು ಲಿಮ್ಕಾ ದಾಖಲೆ ಪುಸ್ತಕದಲ್ಲಿ ಮೊಟ್ಟಮೊದಲ ಡೀಸೆಲ್ ಲೋಕೊಮೋಟಿವ್ ಚಾಲಕಿ ಎಂಬ ದಾಖಲಾಯಿತು. 2015ರಲ್ಲಿ ಅವರಿಗೆ ರೈಲ್ವೆ ಪ್ರಧಾನ ವ್ಯವಸ್ಥಾಪಕರ ಪ್ರಶಸ್ತಿ ಸಂದಿತ್ತು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...