ಭಟ್ಕಳ: ಇಲ್ಲಿನ ಕಾರಗದ್ದೆಯ ಗುಡ್ಲಕ್ ರಸ್ತೆಯ 2ನೇ ಕ್ರಾಸ್ನ ಮಸೀದಿಯಿಂದ ನಮಾಜು ಮುಗಿಸಿ ರಾತ್ರಿ 8 ಗಂಟೆಯ ಸುಮಾರಿಗೆ ಮನೆಗೆ ಹೋಗುವಾಗ ತನ್ನ ಕೈಯಲ್ಲಿದ್ದ ಹಣವನ್ನು ಕಳೆದುಕೊಂಡು ಹುಡುಕುತ್ತಿರುವ 12 ವರ್ಷದ ಬಾಲಕನೋರ್ವನನ್ನು ಬಲಾತ್ಕಾರದಿಂದ ಕರೆದುಕೊಂಡು ಹೋಗಿ ಅನೈಸರ್ಗಿಕ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿರುವ ಕುರಿತು ತಡವಾಗಿ ಬೆಳಕಿಗೆ ಬಂದಿದೆ.
ಪಟ್ಟಣದ ವ್ಯಾಪ್ತಿಯ ಗುಡ್ಲಕ್ ರಸ್ತೆಯ ನಿವಾಸಿ ಅಬ್ದುಲ್ ದಯೀಮ್ ಫಕ್ಕರ್ಡೆ ಎನ್ನುವವನೇ ಬಾಲಕನನ್ನು ಬಲಾತ್ಕಾರವಾಗಿ ಎಳೆದುಕೊಂಡು ಹೋಗಿ ಹತ್ತಿರದಲ್ಲಿಯೇ ನಿರ್ಮಾಣ ಹಂತದಲ್ಲಿರುವ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಆತನನ್ನು ಸಲಿಂಗ ಕಾಮಕ್ಕೆ ಬಳಸಿಕೊಂಡಿದ್ದಲ್ಲದೇ ಜೀವ ಬೆದರಿಕೆಯನ್ನು ಹಾಕಿದ್ದು ಈ ಕುರಿತು ಆತನ ಅಜ್ಜಿ ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಆರೋಪಿಯ ಮೇಲೆ ಪೋಸ್ಕೋ ಕಾಯಿದೆಯಡಿಯಲ್ಲಿ ದೂರು ದಾಖಲಿಸಿಕೊಂಡು ಬಂಧಿಸಿ ಕಾರವಾರದ ಜೈಲಿಗೆ ಕಳುಹಿಸಲಾಗಿದೆ.
ಮನೆಯಿಂದ ಹೊರಟ ಬಾಲಕನ ಕೈಯಲ್ಲಿ ಆತನ ಅಜ್ಜಿ 40 ರೂಪಾಯಿಗಳನ್ನು ಕೊಟ್ಟಿದ್ದು ನಮಾಜಿಗೆ ಹೋಗಿ ಬರುವಾಗ ಹಣವನ್ನು ಎಲ್ಲಿಯೋ ಕಳೆದುಕೊಂಡಿದ್ದ ಬಾಲಕ ಕತ್ತಲೆಯಲ್ಲಿ ಹುಡುಕುತ್ತಿರುವುದನ್ನು ಕಂಡ ಆರೋಪಿ ತಕ್ಷಣ ಆತನ ಬಾಯಿಗೆ ಕೈಯಿಂದ ಮುಚ್ಚಿ ಎಳೆದುಕೊಂಡು ಹೋದನೆನ್ನಲಾಗಿದೆ. ಹತ್ತಿರದಲ್ಲಿಯೇ ನಿರ್ಮಾಣ ಹಂತದಲ್ಲಿರುವ ಮನೆಯ ಆವರಣಕ್ಕೆ ಕರೆದುಕೊಂಡು ಹೋಗಿ ಖುಲ್ಲಾ ಜಾಗಾದಲ್ಲಿ ಈತನನ್ನು ಬಳಸಿಕೊಂಡು ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ್ದಲ್ಲದೇ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆಯನ್ನು ಹಾಕಿದ್ದಾನೆನ್ನಲಾಗಿದೆ. ಭಯದಿಂದ ಮನೆಯಲ್ಲಿ ಯಾರಿಗೂ ಹೇಳದೇ ಯಾತನೆ ಪಡುತ್ತಿರುವ ಹುಡುಗನನ್ನು ನೋಡಿ ಮನೆಯವರು ಸಂಶಯಗೊಂಡು ಮತ್ತೆ ಮತ್ತೆ ಕೇಳಿದಾಗ ನಡೆದ ಸಂಗತಿಯನ್ನು ವಿವರಿಸಿದ ಬಾಲಕ ಆರೋಪಿಯ ಪತ್ತೆಯನ್ನು ಸಹ ಹೇಳಿದನೆನ್ನಲಾಗಿದೆ.
ತಕ್ಷಣ ರಾತ್ರಿಯೇ ಗ್ರಾಮೀಣ ಠಾಣೆಗೆ ಬಂದು ಬಾಲಕನ ಅಜ್ಜಿ ದೂರು ನೀಡಿದ್ದಾರೆ. ದೂರನ್ನು ಸ್ವೀಕರಿಸಿದ ಪೊಲೀಸರು ತಕ್ಷಣ ಕಾರ್ಯಾಚರಣೆಯನ್ನು ನಡೆಸಿ ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದ್ದು ಪೊಲೀಸರ ಸಕಾಲಿಕ ಕ್ರಮ ಪ್ರಶಂಸಗೆ ಕಾರಣವಾಗಿದೆ.
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...