ಝುಬೇರ್ ಹತ್ಯೆಗೆ ಮಾದಕ ವಸ್ತು ಮಾಫಿಯಾ ಕಾರಣವಾಯಿತೆ??

Source: sonews | By Staff Correspondent | Published on 5th October 2017, 11:09 PM | Coastal News | State News | Incidents | Don't Miss |

ಮಂಗಳೂರು: ಮಾದಕ ವಸ್ತುಗಳ ಮಾರಾಟದ ವಿರುದ್ಧ ಧ್ವನಿ ಎತ್ತಿದ್ದೇ ಝುಬೈರ್ ಹತ್ಯೆಗೆ ಕಾರಣವಾಯಿತೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ. ಮುಕ್ಕಚ್ಚೇರಿ ನಿವಾಸಿ ಝುಬೈರ್ ಅವರನ್ನು ಬುಧವಾರ ಸಂಜೆ ಇಲ್ಲಿನ ಮಸೀದಿಯ ಮುಂದೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದರು.

ಉಳ್ಳಾಲ ಕೇಂದ್ರವಾಗಿ ಸುತ್ತಮುತ್ತ ಪ್ರದೇಶಗಳಲ್ಲಿ ಕಳೆದ ಕೆಲವು ವರ್ಷಗಳಿಂದ ನಿಷೇಧಿತ ವಸ್ತುಗಳಾದ ಗಾಂಜಾ, ಅಫೀಮು, ಡ್ರಗ್ಸ್ ಗಳು ನಿರಾತಂಕವಾಗಿ ಮಾರಾಟವಾಗುತ್ತಿವೆ ಎಂಬ ಆರೋಪಗಳು ಹಿಂದಿನಿಂದಲೂ ಕೇಳಿ ಬರುತ್ತಿವೆ. ಮುಕ್ಕಚ್ಚೇರಿ ಮಸೀದಿಯ ಮುಂದೆ ಹತ್ಯೆಗೀಡಾದ ಝುಬೈರ್ ಈ ಅಮಲು ಪದಾರ್ಥಗಳ ವಿರುದ್ಧ ಧ್ವನಿ ಎತ್ತಿದ್ದರು. ಯುವಕರಿಗೆ, ವಿದ್ಯಾರ್ಥಿಗಳ ಕೈಗೆ ಸುಲಭವಾಗಿ ಸಿಗುತ್ತಿರುವ ಇಂತಹ ನಿಷೇಧಿತ ವಸ್ತುಗಳ ವಿರುದ್ಧ ಝುಬೈರ್ ಬುದ್ಧಿಮಾತು ಹೇಳಿದ್ದೇ ಅವರ ಹತ್ಯೆಗೆ ಕಾರಣವಾಗಿದೆ ಎಂದೂ ಝುಬೈರ್ ಆಪ್ತರು ಆರೋಪ ಮಾಡಿದ್ದಾರೆ.

ಉಳ್ಳಾಲ, ತೊಕ್ಕೊಟ್ಟು, ಉಳ್ಳಾಲ ಬೀಚ್, ತೊಕ್ಕೊಟ್ಟು ರೈಲ್ವೆ ಸ್ಟೇಷನ್, ಬೊಟ್ಟು ಮೊದಲಾದ ಕಡೆಗಳಲ್ಲಿ ಅಮಲು ಪದಾರ್ಥಗಳ ಮಾರಾಟಗಳು ನಿರಾತಂಕವಾಗಿ ನಡೆಯುತ್ತಿದ್ದು, ಇಂತಹ ವಸ್ತುಗಳು ಶ್ರೀಮಂತರ ಮಕ್ಕಳು, ವೈದ್ಯಕೀಯ ವಿದ್ಯಾರ್ಥಿಗಳು ಸಹಿತ ಸ್ಥಳೀಯವಾಗಿ ಮಕ್ಕಳ ಕೈಗೆ ಸುಲಭದಲ್ಲಿ ಸಿಗುತ್ತಿವೆ. ಇದೀಗ ಸ್ಥಳೀಯ ಯುವಕರ ಗುಂಪುಗಳು ಇಂತಹ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿಕೊಂಡಿದ್ದು, ಇಂತಹ ವಸ್ತುಗಳ ಮಾರಾಟಕ್ಕೆ ಕಡಿವಾಣ ಬೀಳದಿರುವುದೇ ಕೊಲೆ, ಹಲ್ಲೆಗಳಂತಹ ಘಟನೆಗಳು ಮರುಕಳುಸುತ್ತಿವೆ ಎಂಬ ಅಪವಾದ ವ್ಯಕ್ತವಾಗುತ್ತಿದೆ.

ಉತ್ತಮ ವ್ಯಕ್ತಿತ್ವದ ಯುವಕ: ಫಾರೂಕ್ ಉಳ್ಳಾಲ ; ಬುಧವಾರ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಝುಬೈರ್ (39) ಉತ್ತಮ ವ್ಯಕ್ತಿತ್ವದ ಯುವಕ. ಪತ್ನಿ, ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಝುಬೈರ್ ಯಾವುದೇ ಗಲಾಟೆ, ಗ್ಯಾಂಗ್ ನಲ್ಲಿ ಗುರುತಿಸಿಕೊಂಡವರಲ್ಲ. ಫಿಶ್ ಮಿಲ್ ಪ್ಲಾಂಟ್ ನಲ್ಲಿ ಎಲೆಕ್ಟ್ರಿಶಿಯನ್ ಸಹಿತ ಇತರ ಕೆಲಸ ಮಾಡಿಕೊಂಡಿದ್ದರು. ಧಾರ್ಮಿಕವಾಗಿಯೂ ಎಲ್ಲರಿಗೂ ಬೇಕಾದವರು. ಬುಧವಾರ ಮುಕ್ಕಚ್ಚೇರಿ ಮಸೀದಿಯಲ್ಲಿ ನಮಾಝ್ ನಿರ್ವಹಿಸಿ ಹಿಂದಿರುಗುತ್ತಿದ್ದಾಗ ಅವರನ್ನು ಕೊಲೆ ಮಾಡಲಾಗಿದೆ.

ಉಳ್ಳಾಲ ಕೇಂದ್ರವಾಗಿ ಮಾರಾಟವಾಗುತ್ತಿರುವ ಅಫೀಮು, ಗಾಂಜಾ, ಡ್ರಗ್ಸ್ ವಿರುದ್ಧ ಧ್ವನಿ ಎತ್ತಿದ್ದರು. ಅದರಲ್ಲಿ ತೊಡಗಿದ್ದ ಹುಡುಗರನ್ನು ಹತ್ತಿರಕ್ಕೆ ಕರೆದು ಬುದ್ಧಿವಾದ ಹೇಳುತ್ತಿದ್ದರು. ಇದು ಅವರ ಹತ್ಯೆಗೆ ಕಾರಣವಾಗಿರಬಹುದು ಎಂದು ಮೇಲಂಗಡಿ ಹೊಸಪಳ್ಳಿ ಮಸೀದಿ ಸಮಿತಿಯ ಅಧ್ಯಕ್ಷ ಫಾರೂಕ್ ಉಳ್ಳಾಲ ಪ್ರತಿಕ್ರಿಯಿಸಿದ್ದಾರೆ.

ಗಾಂಜಾ ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಠಾಣೆಗೆ ಮುತ್ತಿಗೆ: ಡಿವೈಎಫ್ಐ ಎಚ್ಚರಿಕೆ

ಉಳ್ಳಾಲ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಗಾಂಜಾ ಮಾಫಿಯಾವನ್ನು ಪತ್ತೆ ಹಚ್ಚಿ ಅದರಲ್ಲಿ ತೊಡಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ಪೊಲೀಸ್  ಇಲಾಖೆಯನ್ನು ಆಗ್ರಹಿಸಿದೆ.

ಮುಕ್ಕಚ್ಚೇರಿಯಲ್ಲಿ ಗಾಂಜಾ ಸೇವನೆಯ ಹುಡುಗರಿಂದ ಸಾರ್ವಜನಿಕರು ಅನುಭವಿಸುತ್ತಿದ್ದ ತೊಂದರೆಯ ಹಿನ್ನೆಲೆಯಲ್ಲಿ ಝುಬೈರ್ ಆ ಹುಡುಗರಿಗೆ ಬುದ್ಧಿವಾದ ಹೇಳಿದ್ದಾರೆ. ಇಂತಹ ಹುಡುಗರ ವಿರುದ್ಧ ಝುಬೈರ್ ಪೊಲೀಸರಿಗೆ ದೂರು ನೀಡಿದ್ದಾರೆಂಬ ಅನುಮಾನದ ಮೇಲೆ ಗಾಂಜಾ ವ್ಯಸನಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಡಿವೈಎಫ್ ಐ ಉಳ್ಳಾಲ ವಲಯ ಸಮಿತಿಯ ಕಾರ್ಯದರ್ಶಿ ರಝಾಕ್ ಮೊಂಟೆಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪೊಲೀಸರು ಗಾಂಜಾ, ಅಫೀಮುಗಳ ಮಾರಾಟ ಜಾಲವನ್ನು ಪತ್ತೆ ಹಚ್ಚಬೇಕು. ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...