10 ದ್ವಿಚಕ್ರ ವಾಹನ ಲೋಕಾರ್ಪಣೆ. 500 ಉಚಿತ ಹೆಲ್ಮೆಟ್ ವಿತರಣೆ. ಜೀವ ರಕ್ಷಣೆ ಮಾಡಿಕೊಳ್ಳಲು ಕರೆ.

Source: SO News | By Laxmi Tanaya | Published on 10th January 2024, 9:34 PM | State News | Don't Miss |

ಬಾಗಲಕೋಟೆ : ಬಹು ಅಮೂಲ್ಯವಾದ ಜೀವ ರಕ್ಷಣೆ ಅವಶ್ಯವಾಗಿದ್ದು, ಪ್ರತಿಯೊಬ್ಬ ಬೈಕ್ ಸವಾರ ಹೆಲ್ಮೆಟ್ ಬಳಸಿ, ಕಾರು ಚಾಲಕರು ಸೀಟ್ ಬೆಲ್ಟ ಕಡ್ಡಾಯವಾಗಿ ಬಳಸಬೇಕೆಂದು ಶಾಸಕ ಎಚ್.ವಾಯ್.ಮೇಟಿ ಹೇಳಿದರು.
            ವಿದ್ಯಾಗಿರಿಯ ಕಾಲೇಜು ವೃತ್ತದಲ್ಲಿ ಆಯೋಜಿಸಲಾಗಿದ್ದ 10 ಪೊಲೀಸ್ ದ್ವಿಚಕ್ರ ವಾಹನ ಲೋಕಾರ್ಪಣೆ ಹಾಗೂ ಹೆಲ್ಮೆಟ್ ಕಡ್ಡಾಯವ ಅಭಿಯಾನ ಪ್ರಯುಕ್ತ ಉಚಿತ ಹೆಲ್ಮೆಟ್ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಇತ್ತೀಚೆಗೆ ನಡೆದಂತಹ ಮೋಟಾರ ಸೈಕಲ್ ಅಪಘಾತದಲ್ಲಿ ಹೆಚ್ಚಿನ ಜನ ತೆಲೆಗೆ ಪೆಟ್ಟು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿವೆ. ಹೆಲ್ಮೆಟ್ ಬಳಸಿದ್ದರೆ ಈ ಅನಾಹುತ ಸಂಭವಿಸುತ್ತಿರಲಿಲ್ಲವೆಂದರು.

          ಹಿಂದೆ ಹೆಲ್ಮೆಟ್ ಕಡ್ಡಾಯವ ಇಲ್ಲದ ಸಮಯದಲ್ಲಿ ಅಂದು ನಾನು ಕೂಡಾ ಹೆಲ್ಮೆಟ್ ಬಳಸಿದ್ದರಿಂದ ತಲೆಒಂದು ಬಿಟ್ಟು ಉಳಿದೆಲ್ಲ ಗಾಯಗಳಾಗಿದ್ದು, ಮರೆತಿಲ್ಲ. ಅಲ್ಲದೇ ಕಾರಿನಲ್ಲಿ ಹೋಗುವಾಗ ಸೀಟ್ ಬೆಲ್ಟ್ ಧರಿಸಿರದರಿಂದ ಅಪಘಾತದಲ್ಲಿ ಸಿಲುಕಿ 25 ದಿನಗಳ ವರೆಗೆ ಆಸ್ಪತ್ರೆಯಲ್ಲಿ ಇದ್ದ ಬಗ್ಗೆ ನೆನಪಿಸಿಕೊಂಡರು. ಪ್ರತಿಯೊಬ್ಬ ಸವಾರನ ಹಿಂದೆ ಕುಟುಂಬ ಅವಲಂಭಿತವಾಗಿದ್ದು, ಅವಲಂಬಿತ ಕುಟುಂಬದವರ ರಕ್ಷಣೆ ನಿಮ್ಮದಾಗಿದ್ದು, ಜವಾಬ್ದಾರಿಯುತವಾಗಿ ಹಾಗೂ ಸುರಕ್ಷಿತವಾಗಿ ವಾಹನ ಚಲಾಯಿಸಿ ಪ್ರಾಣ ಹಾನಿಯಾಗದಂತೆ ಎಚ್ಚರ ವಹಿಸಬೇಕು ಎಂದರು.

          ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ, ದೇಶದಲ್ಲಿ ಪ್ರತಿ ವರ್ಷ 1.60 ಲಕ್ಷಕ್ಕೂ ಹೆಚ್ಚು ಅಪಘಾತದಲ್ಲಿ ಮರಣ ಹೊಂದಿತ್ತಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ವರ್ಷಕ್ಕೆ 1200-1500 ವರೆಗೆ ಅಪಘಾತಗಳು ಸಂಭವಿಸುತ್ತಿದ್ದು, ಅದರಲ್ಲಿ ಕನಿಷ್ಟ 400 ಜನ ಸಾವನ್ನೊಪ್ಪುತ್ತಿದ್ದಾರೆ. ಮರಣ ಹೊಂದಿದ 400 ಜನರಲ್ಲಿ 300 ಜನ ಹೆಲ್ಮೆಟ್ ಬಳಸದೆ ಸಾವನ್ನೊಪ್ಪಿದ್ದಾರೆ ಎಂದರು. 

              ಈ ಎಲ್ಲ ಪ್ರಕರಣಗಳನ್ನು ಗಮನಿಸಿದಾಗ ನಾವು ನಿವೇಲ್ಲ ಈಗ ಸುರಕ್ಷಿತರಾಗಿದ್ದೇವೆ. ಆದರೆ ಹೆಲ್ಮೆಟ್ ಬಳಸದೆ ಅಪಘಾತಕ್ಕೊಳಗಾಗಿ ಮರಣ ಹೊಂದಿದ ಅಂಗವೈಕಲ್ಯ ಹೊಂದಿದವರನ್ನು ಸಂಪರ್ಕಿಸಿದಾಗ ಅವರಿಂದ ಬರುವ ಮಾತು ಅಂದು ನಾವು ಹೆಲ್ಮೆಟ್ ಬಳಸದೇ ಇದ್ದುದರಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳುತ್ತಾರೆ. ಸಮಯ ಮುಗಿದು ಹೋಗಿರುತ್ತದೆ. ಇದನ್ನೆಲ್ಲ ನೆನಪಿನಲ್ಲಿಟ್ಟುಕೊಂಡು ಪ್ರತಿಯೊಬ್ಬರು ಬೈಕ್ ಸವಾರ ಹೆಲ್ಮೆಟ್, ಕಾರ್ ಸವಾರ ಬೆಲ್ಟ್ ಧರಿಸಿ ಚಲಾಯಿಸಲು ತಿಳಿಸಿದರು. 

            ಈ ಸಂದರ್ಭದಲ್ಲಿ ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಸಾಂಕೇತಿಕವಾಗಿ ಹೆಲ್ಮೆಟ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಹಾಂತೇಶ್ವರ ಜಿಡ್ಡಿ, ಡಿಎಸ್‍ಪಿಗಳಾದ ಪಂಪನಗೌಡ, ಪ್ರಭು ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...