ಭಟ್ಕಳ:ವಿಶ್ವ ಪ್ರಸಿದ್ದವಾದ ಮುರ್ಡೇಶ್ವರಕ್ಕೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಆಕಸ್ಮಿಕವಾಗಿ ಅನಾಹುತಗಳೆನದರೂ ಸಂಭವಿಸಿದರೆ ತುರ್ತು ಚಿಕಿತ್ಸೆಗೆ ಒಯ್ಯಲು ಇಲ್ಲಿ 108 ಆರೋಗ್ಯ ಕವಚ ಇದ್ದು ಇಲ್ಲದಂತಾಗಿರುವದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ
ಮುರ್ಡೇಶ್ವರಕ್ಕೆ ಪೌರಾಣಿಕ ಹಿನ್ನಲೆ ಇದ್ದು ಶಿವನ ದರ್ಶನಕ್ಕೆ ಭಕ್ತರು ಮುಗಿಬೀಳುತ್ತಾರೆ. ನೈಸರ್ಗಿಕ ಸಮುದ್ರ ತಾಣ, ಸ್ಕೂಬಾ ಡೈವಿಂಗ್ ಹೀಗೆ ವಿವಿದ ರೀತಿಯಲ್ಲಿ ಮುದ ನೀಡುವ ಸಾಧನಗಳು ಪ್ರವಾಸಿಗರನ್ನು ತನತ್ತ ಸೆಳೆಯುತ್ತಿದೆ. ಆದರೆ ಇಲ್ಲಿ ಎನಾದರೂ ಅವಘಡ ಸಂಭವಿಸಿದರೆ ಮಾತ್ರ ಇಲ್ಲಿ ತುರ್ತು ಚಿಕಿತ್ಸೆಗೆ ಕರೆದೊಯ್ಯಲು ಅತಿ ಮುಖ್ಯವಾದ ಅಂಬ್ಯುಲೆನ್ಸ್ ಸೇವೆ ಇಲ್ಲ.ಈ ಹಿಂದೆ ಇಲ್ಲಿ 108 ಕಾರ್ಯನಿರ್ವಹಿಸುತ್ತಿತ್ತು. ಆದರೆ ಅದು ಬಂದ ಆಗಿ ತಿಂಗಳುಗಳೆ ಕಳೆದಿದೆ. ಪರವಾನಿಗೆ ಮುಗಿದಿದ್ದು ಅದನ್ನು ನವೀಕರಣ ಮಾಡಲು ಆರೋಗ್ಯ ಇಲಾಖೆ ಮೀನಮೇಷ ಎಣಿಸುತ್ತಿದೆ. ಇದರಿಂದ ಮುರ್ಡೇಶ್ವರದ ಜನತೆ ಮಾತ್ರವಲ್ಲದೆ ಪ್ರವಾಸಿಗರು ತೊಂದರೆ ಅನುಭವಿಸುವಂತಾಗಿದೆ.
ಅಕಸ್ಮಾತ ಆಗಿ ಪ್ರವಾಸಿಗರು ನೀರಿನಲ್ಲಿ ಮುಳುಗಿ ಅಸ್ವಸ್ಥರಾದರೆ, ಅನಾಹುತ, ಅವಘಡಗಳೆನಾದರೂ ಸಂಭಿವಿಸಿದರೆ ತುರ್ತು ಚಿಕಿತ್ಸೆಗೆಂದು ತಾಲೂಕಾಸ್ಪತ್ರೆಗಾಗಲಿ, ಕುಂದಾಪುರ ಉಡುಪಿ ಸಾಗಿಸಲು ಇಲ್ಲಿ ಒಂದೆ ಒಂದು ಅಂಬ್ಯುಲೆನ್ಸ್ ಲಬ್ಯವಿಲ್ಲ. ಹೊನ್ನಾವರದ ಮಂಕಿಯಿಂದಲೊ ಅಥವಾ ಭಟ್ಕಳದಿಂದದಲೊ ಅಂಬ್ಯುಲೆನ್ಸ್ ತರಿಸಬೇಕು. ಅಷ್ಟರಲ್ಲಿ ರೋಗಿಗಳ ಪ್ರಾಣಕ್ಕೆ ಸಂಚಕಾರ ಬರುವ ಸಂದರ್ಬಗಳೆ ಹೆಚ್ಚಿವೆ. ಸ್ಥಳೀಯ ಪಂಚಾಯಿತಿ ಆಗಲಿ, ತಾಲೂಕಾಡಳಿತವಾಗಲಿ ಈ ಕುರಿತು ಸೂಕ್ತ ಕ್ರಮಕ್ಕೆ ಮುಂದಾಗಿಲ್ಲದಿರುವದು ಸ್ಥಳೀಯರ ಅಸಮಾದಾನಕ್ಕೆ ಕಾರಣವಾಗಿದೆ.
ಈ ಬಗ್ಗೆ ಸ್ಥಳೀಯ ಶರತ್ ಭರತ ನಾಯ್ಕ, ಮಾತನಾಡಿ
ಮುರ್ಡೇಶ್ವರರ ಸ್ಥಳೀಯ ತುರ್ತು ಪರಿಸ್ಥಿತಿಯಲ್ಲಿ ಜೀವ ಉಳಿಸಬೇಕಾದ 108 ಆರೋಗ್ಯ ಕವಚ ಅನಾರೋಗದಿಂದ ಬಳಲುತ್ತಿದೆ. ತುರ್ತು ಸಂದರ್ಬದಲ್ಲಿ ಕರೆ ಮಾಡಿದರೆದುರಸ್ತಿಯಲ್ಲಿದೆ ಎನ್ನುತ್ತಾರೆ. ಕಳೆದ ಒಂದು ತಿಂಗಳಿಂದಲೂ ಇದೆ ಕಥೆ ಹೇಳುತ್ತಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿದರೂ ಪ್ರಯೋಜನವಾಗಿಲ್ಲ. ಶಾಸಕರಿಗೂ ಈ ಕುರಿತು ದೂರು ನೀಡಲಾದೆ. 108 ನಿರ್ವಹಣಾ ಸಂಸ್ಥೆ ಜಿವಿಕೆ ಇಎಮ್ಆರ್ಐ ಬಳಿಯಂತೂ ವಿಚಾರಿಸುವಂತಿಲ್ಲ. ಇದರಿಂದ ಸಾರ್ವಜನಿಕರು ಯಾತ್ರಾರ್ಥಿಗಳು ಸಂಕಷ್ಟ ಅನುಭವಿಸುವಂತಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ಸಿದ್ದ ಕಾರವಾರ ಜಿಲ್ಲಾ ವೈದ್ಯಾಧಿಕಾರಿ,ಡಾ. ಅಶೋಕ ಕುಮಾರ
ಮುರ್ಡೇಶ್ವರದಲ್ಲಿದ್ದ ಅಂಬ್ಯುಲೆನ್ಸ್ ಹಳೆದಾಗಿದ್ದು ಹೊಸ ಅಂಬ್ಯುಲೆನ್ಸ್ ಬೇಕೆಂದು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ್ಮ ಜಿಲ್ಲೆ ಗುಡ್ಡಗಾಡು ಪ್ರದೇಶಗಳಿಂದ ಕೂಡಿದ್ದು ಇಲ್ಲಿ ಖರೀದಿಸಿದ್ದ ಹೊಸ ಅಂಬ್ಯುಲೆನ್ಸಗಳನ್ನೆ ನೀಡುವಂತೆ ಒತ್ತಡ ಹೇರಲಾಗಿದೆ. ಮುಂದಿನ 15 ದಿನಗಳಲ್ಲಿ ಹೊಸ ಅಂಬ್ಯುಲೆನ್ಸ್ ಮುರ್ಡೇಶ್ವರಕ್ಕೆ ನೀಡಲಾಗುವದು. ಅಲ್ಲಿಯವರೆಗೂ ಬೆಳಗಿನ ಸಂದರ್ಬ ಮಂಕಿಯ ಅಂಬ್ಯುಲೆನ್ಸ್ ಕಳುಹಿಸಿವ ವ್ಯವಸ್ಥೆ ಮಾಡಲಾಗುವದು ಎಂದರು.
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಪೌರಕಾರ್ಮಿಕರ ಮೊಗದಲ್ಲಿ ಸಂತೃಪ್ತಿಯ ಭಾವ ಮೂಡಿಸಿದ ಖಾಯಂ ನೇಮಕಾತಿ ಆದೇಶ
ಅಲ್ಲಿ ನೆರದಿದ್ದವರು ಎಂದಿನಂತಿನ ಸಾಮಾನ್ಯ ದಿನಗಳಂತೆ ಬೇಸರದ ಮನಸ್ಥಿತಿಯಲ್ಲಿರಲಿಲ್ಲ, ಶುಭ್ರ ವಸ್ತçದಾರಿಗಳಾಗಿದ್ದ ಅವರ ...
ಪಂಚಾಯತ್ ಸೇವೆಗಳನ್ನು ಪಡೆಯಲು ಬಂದಿದೆ ಪಂಚಮಿತ್ರ ವಾಟ್ಸಾಪ್
ಸರ್ಕಾರದ ಹಲವು ಇಲಾಖೆಗಳು ಆನ್ಲೈನ್ ಮೂಲಕ ಸಾರ್ವಜನಿಕರಿಗೆ ತಮ್ಮ ಕೈ ಬೆರಳಿನಲ್ಲಿಯೇ ತಮಗೆ ಅಗತ್ಯವಿರುವ ಸೇವೆಗಳನ್ನು ಪಡೆಯಲು ...
ಇಡಿ ಭಯದಿಂದ ಬಿಜೆಪಿಗೆ ₹335 ಕೋಟಿ ದೇಣಿಗೆ ನೀಡಿದ 30ಕ್ಕೂ ಅಧಿಕ ಕಂಪನಿಗಳು
ಈ ಮಹತ್ವದ ಸಂಗತಿಯನ್ನು ‘ದಿ ನ್ಯೂಸ್ ಮಿನಿಟ್’ ಹಾಗೂ ‘ನ್ಯೂಸ್ ಲಾಂಡ್ರಿ‘ ಸ್ವತಂತ್ರ ಮಾಧ್ಯಮ ಸಂಸ್ಥೆಗಳು ತಮ್ಮ ತನಿಖಾ ವರದಿಯಲ್ಲಿ ...
ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?
ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...
ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ
ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...
ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ
ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...