ಮೋದಿಯವರ ೧೫ ಲಕ್ಷ ರೂ ವದಂತಿ;ಅಂಚೆ ಕಚೇರಿ ಮುಂದೆ ಜಮಾಯಿಸಿದ ಖಾತೆದಾರರು

Source: sonews | By Staff Correspondent | Published on 1st August 2019, 5:54 PM | National News | Don't Miss |

ತಿರುವನಂತಪುರ: ಕೇರಳದ ಮುನ್ನಾರ್ ಪೋಸ್ಟ್ ಆಫೀಸ್ ಸಿಬ್ಬಂದಿಗೆ ರವಿವಾರ ಅಚ್ಚರಿ ಕಾದಿತ್ತು. ನೂರಾರು ಜನರು ಆ ದಿನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆಯಲು ಕಾದು ನಿಂತಿದ್ದರು. ಅವರಲ್ಲಿನ ಈ ಉತ್ಸಾಹ  ಒಳ್ಳೆಯದೇ ಆದರೂ ಇದರ ಹಿಂದಿನ ಕಾರಣ ಒಂದು ವಾಟ್ಸ್ಯಾಪ್ ಸಂದೇಶವಾಗಿತ್ತು. ಅಷ್ಟಕ್ಕೂ ಈ ಸಂದೇಶ ನಕಲಿ ಎಂದು ತಿಳಿಯದ ಮುಗ್ಧರು ಸರತಿ ನಿಂತಿದ್ದರು.

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆಯುವವರಿಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ 2014 ಚುನಾವಣಾ ಪ್ರಚಾರದಲ್ಲಿ ಆಶ್ವಾಸನೆ ನೀಡಿದಂತೆ 3 ಲಕ್ಷ ರೂ.ಗಳಿಂದ ಹಿಡಿದು 15 ಲಕ್ಷ ರೂ.ವರೆಗೆ ಹಣ ಜಮೆಯಾಗಲಿದೆ ಎಂಬುದೇ ಆ ನಕಲಿ ಸಂದೇಶವಾಗಿತ್ತು.

ಈ ಸುದ್ದಿ ಕಾಳ್ಗಿಚ್ಚಿನಂತೆ ಹಬ್ಬಿ ಹೆಚ್ಚಾಗಿ ಎಸ್ಟೇಟ್ ಕಾರ್ಮಿಕರು ಪೋಸ್ಟ್ ಆಫೀಸ್ ಮುಂದೆ ಸರತಿ ನಿಂತಿದ್ದರು.

ರವಿವಾರ ಅಂಚೆ ಕಚೇರಿ ಖಾತೆ ತೆರೆಯುವ ಅಭಿಯಾನವೂ ಇದ್ದುದರಿಂದ ಆ ದಿನ ಅಂಚೆ ಕಚೇರಿ ತೆರೆದಿತ್ತು. ಇದು  ಕೂಡ  ಈ ವದಂತಿಯನ್ನು ಜನರು ನಂಬುವಂತೆ ಮಾಡಿತ್ತು. ಅಂಚೆ ಕಚೇರಿಗೆ ಆಗಮಿಸುವವರ ಸಂಖ್ಯೆ ಅಧಿಕವಾದಂತೆಯೇ ಪೊಲೀಸರು  ಅಲ್ಲಿದ್ದವರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.

ಜನರ ಸಂಶಯ ನಿವಾರಿಸಲು ಅಂಚೆ ಕಚೇರಿ ಅಧಿಕಾರಿಗಳು ಕಚೇರಿಯೆದುರು ಒಂದು ಸೂಚನಾ ಫಲಕ ಅಳವಡಿಸಿದರೂ ಅದರಿಂದ ಪ್ರಯೋಜನವಾಗಲಿಲ್ಲ.  ದೇವಿಕುಳಂನಲ್ಲಿನ ಆರ್‍ಡಿಒ ಕಚೇರಿಯಲ್ಲೂ ಇದೇ ಪರಿಸ್ಥಿತಿಯಿತ್ತು.

ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆದವರ ಖಾತೆಗೆ ಹಣ ಜಮೆ ಮಾಡಲಾಗುವುದು ಎಂಬ ನಕಲಿ ಸುದ್ದಿ ಕುರಿತಂತೆ ಯಾವುದೇ ದೂರು ದಾಖಲಾಗಿಲ್ಲ, ದೂರು ಬಂದರೆ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಕಲೆಕ್ಟರ್ ಎಚ್ ದಿನೇಶನ್ ಹೇಳಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...