ಭೀಮ್ ಆರ್ಮಿ ಮುಖ್ಯಸ್ಥ ಆಝಾದ್ ಮೇಲೆ ಗುಂಡಿನ ದಾಳಿ ಸಿಡಿದ 2 ಗುಂಡುಗಳು; ಅಪಾಯದಿಂದ ಪಾರು

Source: Vb | By I.G. Bhatkali | Published on 29th June 2023, 11:35 PM | National News |

ಸಹರಾನ್‌ಪುರ (ಉತ್ತರಪ್ರದೇಶ): ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ ಆಝಾದ್ ಅವರ ಮೇಲೆ ಬುಧವಾರ ಉತ್ತರಪ್ರದೇಶದ ಸಹರಾನ್‌ಪುರದಲ್ಲಿ ಗುಂಡಿನ ದಾಳಿ ನಡೆದಿದೆ. ಅವರು ತರಚು ಗಾಯದೊಂದಿಗೆ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ಆಝಾದ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಎರಡು ಗುಂಡುಗಳನ್ನು ಹಾರಿಸಲಾಗಿದೆ. ಮೊದಲ ಗುಂಡು ವಾಹನದ ಆಸನದ ಒಳಗೆ ಪ್ರವೇಶಿಸಿದೆ. ಅದು ಆಝಾದ್‌ ದೇಹವನ್ನು ಸವರಿಕೊಂಡು ಬಾಗಿಲ ಮೂಲಕ ಹಾದು ಹೋಗಿದೆ. ಎರಡನೇ ಗುಂಡು ಹಿಂದಿನ ಬಾಗಿಲಿಗೆ ಬಡಿದಿದೆ. ಅವರು ಸ್ವಲ್ಪದರಲ್ಲೇ ಪಾರಾಗಿದ್ದಾರೆ.

“ಚಂದ್ರಶೇಖರ ಆಝಾದ್‌ ವಾಹನಗಳ ಸಾಲಿನ ಮೇಲೆ ಕಾರಿನಲ್ಲಿ ಬಂದ ಕೆಲವು ಶಸ್ತ್ರಧಾರಿ ವ್ಯಕ್ತಿಗಳು ಗುಂಡು ಹಾರಿಸಿದರು. ಒಂದು ಗುಂಡು ಅವರನ್ನು ಸವರಿಕೊಂಡು ಹೋಯಿತು. ಅವರಿಗೆ ಹೆಚ್ಚಿನ ಗಾಯವಾಗಿಲ್ಲ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ'' ಎಂದು ಹಿರಿಯ ಪೊಲೀಸ್ ಅಧಿಕಾರಿ ವಿಪಿನ್ ಟಾಡ ಹೇಳಿದರು ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಭೀಮ್ ಆರ್ಮಿಯ ಮುಖ್ಯಸ್ಥರು ಟೊಯೋಟ ಫಾರ್ಚುನರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಮೇಲೆ ದಾಳಿ ನಡೆದಿದೆ. ಗಾಯಗೊಂಡಿರುವ ಆಝಾದ್ ಮತ್ತು ಹಾನಿಗೊಳಗಾದ ಅವರ ವಾಹನದ ಚಿತ್ರಗಳನ್ನು ಭೀಮ್ ಆರ್ಮಿಯು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದೆ.

“ಸಹರಾನ್‌ಪುರದ ದೇವಬಂದ್‌ನಲ್ಲಿ ಭೀಮ್ ಆರ್ಮಿಯ ಮುಖ್ಯಸ್ಥ ಭಾಯಿ ಚಂದ್ರಶೇಖರ ಆಝಾದ್‌ ಮೇಲೆ ಭೀಕರ ದಾಳಿ ನಡೆದಿದೆ.

ಇದು ಬಹುಜನ ಮಿಶನ್ ಚಳವಳಿಯನ್ನು ನಿಲ್ಲಿಸುವ ಉದ್ದೇಶದ ಹೇಡಿತನದ ಕೃತ್ಯವಾಗಿದೆ! ಪಾತಕಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಹಾಗೂ ಭೀಮ್ ಆರ್ಮಿಯ ರಾಷ್ಟ್ರೀಯ ಅಧ್ಯಕ್ಷ ಭಾಯಿ ಚಂದ್ರಶೇಖರ ಆಝಾದ್‌ರಿಗೆ ಭದ್ರತೆ ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ' ಎಂದು ಭೀಮ್ ಆರ್ಮಿ ಹೇಳಿಕೆಯೊಂದರಲ್ಲಿ ತಿಳಿಸಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...