ಹಳಿಯಾಳ: ಸಾರಿಗೆ ಬಸ್ ಡಿಕ್ಕಿ; ಬೈಕ್ ಸವಾರರಿಬ್ಬರ ಸಾವು

Source: S O News Service | By I.G. Bhatkali | Published on 25th January 2020, 10:14 AM | Coastal News | Don't Miss |

ಹಳಿಯಾಳ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.

      ಪಟ್ಟಣದ ವಿಆರ್‍ಡಿ ಎಂಜಿನಿಯರಿಂಗ್ ಕಾಲೇಜಿನ ಎದುರು ನಡೆದ ಈ ಅಪಘಾತದಲ್ಲಿ ಮಂಜುನಾಥ ಮುನ್ನಪ್ಪ ಮಿರಾಶಿ (23) ಹಾಗೂ ಶಿವಾಜಿ ರಾಮಚಂದ್ರ ಮಿರಾಶಿ (22) ಎನ್ನುವವರು ಮೃತಪಟ್ಟಿದ್ದಾರೆ. ಮೃತರು ಹಳಿಯಾಳ ತಾಲೂಕಿನ ತಟ್ಟಿಗೆರೆ ಗ್ರಾಮದ ನಿವಾಸಿಗಳಾಗಿದ್ದು, ವೃತ್ತಿಯಲ್ಲಿ ಓರ್ವ ಚಾಲಕನಾಗಿದ್ದರೆ, ಇನ್ನೊಬ್ಬ ಕೂಲಿ ಕೆಲಸ ಮಾಡುತಿದ್ದ ಎನ್ನಲಾಗಿದೆ.

ತಟ್ಟಿಗೆರೆ ಗ್ರಾಮಕ್ಕೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ದಾಂಡೇಲಿಯಿಂದ ಹಳಿಯಾಳದತ್ತ ತೆರಳುತ್ತಿದ್ದ ಬಸ್‍ಗೆ ಓವರ್‍ಟೇಕ್ ಮಾಡಲು ಪ್ರಯತ್ನಿಸಿದಾಗ ಬಸ್ ಡಿಕ್ಕಿ ಹೊಡೆದಿದೆ. ಹೆಲ್ಮೆಟ್ ಹಾಕದ ಪರಿಣಾಮ ತಲೆಗೆ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಹಳಿಯಾಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...