ಭಟ್ಕಳದ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು 24x7 ಸಹಾಯವಾಣಿ ಸಿದ್ಧ; ಮನೆಬಾಗಿಲಿಗೆ ವೈದ್ಯರ ಸೇವೆ

Source: sonews | By Staff Correspondent | Published on 30th March 2020, 8:01 PM | Coastal News | Don't Miss |

ಭಟ್ಕಳ: ಕೊರೋನ ಮಹಾಮಾರಿ ಹಿನ್ನೆಲೆಯಲ್ಲಿ ತಾಲೂಕಿನಾದ್ಯನ ಜನರ ಸಮಸ್ಯೆಗಳಿಗೆ ಸ್ಪಂಧಿಸಲು ದಿನ ೨೪ಗಂಟೆಯೂ ಸಹಾಯವಾಣಿ ಸಿದ್ದವಿದ್ದು 08385226422ಕರೆ ಮಾಡುವುದರ ಮೂಲಕ ಎಲ್ಲ ರೀತಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಎಂದು ಭಟ್ಕಳ ಉಪವಿಭಾಗದ ಸಾಹಯಕ ಆಯುಕ್ತ ಭರತ್ ಎಸ್ ಸೋಮವಾರ ಹೇಳಿದರು.

ಅವರು ಸಹಾಯಕ ಆಯುಕ್ತರ ಕಾರ್ಯಾಲಯದಲ್ಲಿ  ಸುದ್ದಿಗೊಷ್ಟಿಯನ್ನುದ್ದೇಶಿಸಿ ಮಾತನಾಡಿದರು. ತಾಲೂಕಾ ಸಹಾಯವಾಣಿಯಲ್ಲಿ ನಾಲ್ಕ ಜನರು ನೇಮಕಗೊಂಡಿದ್ದು ಎಲ್ಲರೀತಿಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳ ನೇಮಕಗೊಂಡಿದ್ದು ತರಕಾರಿ, ಹಾಲು, ಕಿರಾಣಿ, ದನಕರುಗಳಿಗೆ ಮೇವು, ಔಷಧಿ ವಲಸೆ ಕಾರ್ಮಿಕರು ಹೀಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳು ನೇಮಕಗೊಂಡಿದ್ದು ಮೇಲಿನ ಸಹಾಯವಾಣಿಗೆ ಕರೆ ಮಾಡಿದರೆ ಅವರು ನಿಮ್ಮ ಸಮಸ್ಯೆಗಳನ್ನು ಬರೆದುಕೊಂಡು ಸಂಬಂಧಿಸಿದ ನೋಡೆಲ್ ಅಧಿಕಾರಿಗಳಿಗೆ ತಿಳಿಸಿ ನಿಮ್ಮ ಸಮಸ್ಯೆಗೆ ಪರಿಹಾರವನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.

ಮನೆಬಾಗಿಲಿಗೆ ಚಿಕಿತ್ಸೆಗೆ: ಮಹಾಮಾರಿ ಕೊರೋನಾ ವೈರಸ್ ಸೋಂಕು ಹರಡುತ್ತದೆ ಎನ್ನುವ ಆತಂಕದಲ್ಲಿರುವ ಭಟ್ಕಳದಲ್ಲಿ ಮನೆ ಬಾಗಿಲಿಗೆ ವೈದ್ಯರನ್ನ ಕಳಿಸಿ ಚಿಕಿತ್ಸೆ ಕೊಡಿಸುವ ಪ್ರಯತ್ನಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಈಗಾಗಲೇ ಭಟ್ಕಳದಲ್ಲಿ ಏಳು ಜನರಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟ ಹಿನ್ನಲೆಯಲ್ಲಿ ಹೆಲ್ತ್ ಎಮರ್ಜೆನ್ಸಿ ಹಾಗೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮನೆಯಿಂದ ಯಾರೂ ಹೊರಬರದಂತೆ ಸೂಚನೆ ನೀಡಿದ್ದರು ಅನಾರೋಗ್ಯ ಕಾರಣ ಹೇಳಿ, ಔಷದಿ ತೆಗೆದುಕೊಳ್ಳಬೇಕು ಎನ್ನುವ ಕಾರಣ ನೀಡಿ ಮನೆಯಿಂದ ಕೆಲವರು ಒಡಾಟ ಮಾಡುತ್ತಿದ್ದರು‌. ಸೋಂಕು ಹರಡುವ ಸೂಕ್ಷ್ಮ ಪ್ರದೇಶ ಆಗಿರುವ ಹಿನ್ನೆಲೆಯಲ್ಲಿ ಜನರು ಯಾರು ಕೂಡ ಮನೆಯಿಂದ ಹೊರಬರಬಾರದು ಎನ್ನುವ ಉದ್ದೇಶದಿಂದ ಮನೆಯಲ್ಲಿ ಕುಳಿತು ಸಹಾಯವಾಣಿ 08385226422ಕರೆ ಮಾಡಿದ್ದಲ್ಲಿ ವೈದ್ಯರು ನಿಮ್ಮ ಮನೆಬಾಗಿಲಿಗೆ ಬಂದು ಚಿಕಿತ್ಸೆ ನೀಡುತ್ತಾರೆ. ಅದಕ್ಕಾಗಿ ಪ್ರತಿಯೊಂದು ದಿನ ಒಬ್ಬರಂತೆ ವೈದ್ಯರನ್ನು ನೇಮಿಸಿಕೊಳ್ಳಲಾಗಿದೆ ಅವರು ಬಂದು ನಿಮಗೆ ಉಚಿತ ಸೇವೆಯನ್ನು ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಡಾ.ಸೈಯ್ಯದ್ ಅಬ್ದುಲ್ ಕಾದರ್ 7022859538, ಡಾ.ಬಾಲಕೃಷ್ಣ ಲೈಫ್ ಕೇರ್ ಆಸ್ಪತ್ರೆ 9108881160,  ಡಾ. ಯಸೀನ್ ಮೊಹತೆಶಮ್ ಕಿಟ್ ಕ್ಯಾಟ್ ಕ್ಲಿನಿಕ್ 9449581195, ಡಾ.ನಸೀಮ್ ಖಾನ್ ಶಿರಾಲಿ 9916880146, ಮುಹಮ್ಮದ್ ಸಮಿಯುಲ್ಲಾ ನಿಶಾತ್ ನರ್ಸಿಂಗ್  9663107039, ಡಾ.ಗಣೇಶ್ ಪ್ರಭು ರಾಜ್ ಕ್ಲಿನಿಕ್ 9343391811, ಡಾ.ರಾಜೇಂದ್ರ ಆರ್.ಎನ್.ಎಸ್ ಆಸ್ಪತ್ರೆ  9676538522 . 

ಇವರು ಮಾ.30 ರಿಂದ ಎಪ್ರಿಲ್ 6 ರ ವರೆಗೆ ಸೇವೆಗೆ ಲಭ್ಯವಿರುತ್ತಾರೆ ಸಾರ್ವಜನಿಕರು ತುರ್ತು ಪರಿಸ್ಥಿತಿಯಲ್ಲಿ ಇವರ ಸೇವೆಯನ್ನು ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...