ಬಿಜೆಪಿಯ 25 ಮಂದಿ ಸಂಸದರು ದಂಡಪಿಂಡಗಳು. ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ಜನದ್ರೋಹ ಎಸಗಿದೆ: ಬಿ.ವಿ.ಶ್ರೀನಿವಾಸ್

Source: SO News | By Laxmi Tanaya | Published on 23rd September 2023, 10:44 PM | State News | Don't Miss |

ಬೆಂಗಳೂರು : ಕನ್ನಡ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ಬಿಜೆಪಿ ನಿರಂತರವಾಗಿ, ಚರಿತ್ರೆಯುದ್ದಕ್ಕೂ ಜನದ್ರೋಹ ಎಸಗುತ್ತಿರುವ ಬಿಜೆಪಿ ಕಾವೇರಿ ನೀರಿನ ವಿಚಾರದಲ್ಲಿ ಮೊಸಳೆ ಕಣ್ಣೀರು ಹರಿಸುತ್ತಿದೆ ಎಂದು ಎಐವೈಸಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಖಂಡಿಸಿದ್ದಾರೆ. 

ಬಿಜೆಪಿ ಕಾರ್ಯಕರ್ತರೊಬ್ಬರು ಇಂದು ಬಾಯಿಗೆ ಮಣ್ಣು ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಕಳೆದ 9 ವರ್ಷಗಳಿಂದ ಕೇಂದ್ರ ಸರ್ಕಾರ ಕನ್ನಡಿಗರ ಬಾಯಿಗೆ ಮಣ್ಣು ಹಾಕುವ, ಕನ್ನಡಿಗರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಾ ಬಂದಿರುವುದನ್ನು ಬಿಜೆಪಿ ಕಾರ್ಯಕರ್ತ ಸಾಂಕೇತಿಕವಾಗಿ ಆಚರಿಸಿದ್ದಾನೆ ಎಂದು ಬಿ.ವಿ.ಶ್ರೀನಿವಾಸ್ ಟೀಕಿಸಿದ್ದಾರೆ. 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿ ಕೇಂದ್ರ ಸಚಿವರಾದರು. ಆದರೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗದಂತೆ ತೆಗೆದುಕೊಳ್ಳಬೇಕಾದ ತೀರ್ಮಾನಗಳ ಕುರಿತಂತೆ ದೆಹಲಿಯಲ್ಲಿ ನಡೆದ ಸರ್ವ ಪಕ್ಷದ ಸಂಸದರು ಮತ್ತು ಸದಸ್ಯರ ಸಭೆಗೆ ನಿರ್ಮಲಾ ಸೀತಾರಾಮನ್ ಅವರು ನೆಪಕ್ಕಾದರೂ ಭಾಗವಹಿಸಲಿಲ್ಲ. 

ರಾಜ್ಯಕ್ಕೆ ಬರಬೇಕಾದ GST ಪಾಲಿನಲ್ಲಿ, 15ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಅನ್ಯಾಯ ಆದಾಗ ರಾಜ್ಯವನ್ನು ಪ್ರತಿನಿಧಿಸುವ 25 ಮಂದಿ ಬಿಜೆಪಿ ಸಂಸದರು ಬಾಯಿ ಬಿಡಲೇ ಇಲ್ಲ. 

ರಾಜ್ಯಕ್ಕೆ ಬರ ಬಂದಾಗ, ಅತಿವೃಷ್ಠಿ-ಪ್ರವಾಹದಿಂದ ಸಂಕಷ್ಟ ಎದುರಾದಾಗಲೂ ಈ ಸಂಸದರಾಗಲಿ, ರಾಜ್ಯದವರೇ ಆದ ಕೇಂದ್ರ ಸಚಿವರಾಗಲೀ ರಾಜ್ಯದ ನೆರವಿಗೆ ಬರಲೇ ಇಲ್ಲ. ಈ ಸಂಸದರಾಗಲೀ, ಕೇಂದ್ರ ಸಚಿವರಾಗಲೀ ಇವರ್ಯಾರೂ ನೆಪಕ್ಕೂ ಕೂಡ ಪ್ರಧಾನಿ ಮೋದಿ ಅವರ ಬಳಿ ಹೋಗಿ ರಾಜ್ಯದ ಪಾಲಿನ ಹಕ್ಕನ್ನು ಕೇಳುವ ಧೈರ್ಯ ಮಾಡಲಿಲ್ಲ. ಪಾರ್ಲಿಮೆಂಟಿನಲ್ಲೂ ರಾಜ್ಯದ ಪರವಾಗಿ ಸಮರ್ಥ ಧ್ವನಿ ಎತ್ತಿದ ಉದಾಹರಣೆಗಳಿಲ್ಲ. ಈ ರೀತಿ ನಿರಂತರವಾಗಿ ಜನದ್ರೋಹವನ್ನು ಮತ್ತು ಹೊಣೆಗೇಡಿತನವನ್ನು ಆಚರಿಸುತ್ತಾ ಬರುತ್ತಿರುವ ಬಿಜೆಪಿ ಸಂಸದರು ಮತ್ತು ಬಿಜೆಪಿ ನಾಯಕರು ಲೋಕಸಭೆ ಚುನಾವಣೆ ಹತ್ತಿರ ಇರುವುದರಿಂದ ಕಾವೇರಿ ವಿಚಾರದಲ್ಲಿ ಮಾತ್ರ ಪ್ರತಿಭಟನೆಯ ಸೋಗು ಹಾಕುತ್ತಿದ್ದಾರೆ ಎಂದು ಬಿ.ವಿ.ಶ್ರೀನಿವಾಸ್ ಖಂಡಿಸಿದ್ದಾರೆ. 

ಹಿಂದಿ ಭಾಷೆ ಹೇರಿಕೆ, ರಾಜ್ಯದ ಪಾಲಿನ ಉದ್ಯೋಗಾವಕಾಶಗಳನ್ನು ಕಿತ್ತುಕೊಂಡಾಗಲೂ ಈ ಸಂಸದರು ಉಸಿರು ಬಿಡಲಿಲ್ಲ. 

ಹೀಗೆ ನೆಲ-ಜಲ, ಭಾಷೆ-ಸಂಸ್ಕೃತಿ ವಿಚಾರದಲ್ಲಿ ನಿರಂತರವಾಗಿ ನಾಡದ್ರೋಹಿಗಳಾಗಿರುವ ಸಂಸದರು ಈಗ ಆಡುತ್ತಿರುವ ಮಾತುಗಳು ಆತ್ಮವಂಚನೆಯದ್ದು. 

ಕಾವೇರಿ ನೀರಿನ ವಿವಾದ ನಾಲ್ಕು ರಾಜ್ಯಗಳಿಗೆ ಸೇರಿದ್ದು. ನಾಲ್ಕೂ ರಾಜ್ಯಗಳ ಪ್ರತಿನಿಧಿಗಳನ್ನು ಕರೆದು ಮಾತುಕತೆ ನಡೆಸುವ ಅಧಿಕಾರ ವ್ಯಾಪ್ತಿ ಇರುವುದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾತ್ರ. ಆದರೆ ಈವರೆಗೂ ಕೇಂದ್ರದಿಂದ ಈ ಪ್ರಯತ್ನವೇ ನಡೆದಿಲ್ಲ. 

ಸರ್ವ ಪಕ್ಷ ನಿಯೋಗಕ್ಕೆ ಸಮಯ ಕೊಡಿ ಎಂದು ಪ್ರಧಾನಿ ಅವರನ್ನು ಕೇಳುವ ಧೈರ್ಯ ಕೂಡ ಇಲ್ಲದ ಸಂಸದರ ಪುಕ್ಕಲುತನ ಹೇಡಿತನದ್ದು ಎಂದು ಬಿ.ವಿ.ಶ್ರೀನಿವಾಸ್ ಟೀಕಿಸಿದ್ದಾರೆ. 

ಹೀಗಾಗಿ ಈ ಕೂಡಲೇ ಸಂಕಷ್ಟ ಸೂತ್ರ ರೂಪಿಸಲು ಅಗತ್ಯ ಕ್ರಮಕ್ಕೆ ಮುಂದಾಗುವಂತೆ, ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕದಂತೆ ನಾಲ್ಕೂ ರಾಜ್ಯಗಳ ರೈತರ ನೆರವಿಗೆ ಧಾವಿಸುವಂತೆ ಪ್ರಧಾನಿ ಅವರನ್ನು ಬಿಜೆಪಿ ಸಂಸದರು ಮತ್ತು ನಾಯಕರು ಒತ್ತಾಯಿಸಬೇಕು ಎಂದು ಬಿ.ವಿ.ಶ್ರೀನಿವಾಸ್ ಆಗ್ರಹಿಸಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...