ಭಟ್ಕಳದ ಅಂಜುಮನ್ ಪಿಯು ಕಾಲೇಜಿನಲ್ಲಿ ಮೊದಲ ಬಾರಿ ನಡೆಯುತ್ತಿದೆ ಸಿಇಟಿ ಪರೀಕ್ಷೆ; 253 ವಿದ್ಯಾರ್ಥಿಗಳು ನೋಂದಣಿ

Source: sonews | By Staff Correspondent | Published on 29th July 2020, 3:43 PM | Coastal News | Don't Miss |

ಭಟ್ಕಲ್: 2020-21ರ ಶೈಕ್ಷಣಿಕ ವರ್ಷದ ವೈದ್ಯಕೀಯ, ದಂತ, ಆಯುರ್ವೇದ, ಹೋಮಿಯೋಪತಿ, ಯುನಾನಿ, ಪ್ರಕೃತಿಚಿಕಿತ್ಸೆ ಮತ್ತು ಯೋಗ, ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ  ಜುಲೈ 30ರಂದು ರಾಜ್ಯಾದ್ಯಂತ ವಿ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗಳನ್ನು ಎದುರಿಸಲಿದ್ದು ಭಟ್ಕಳ ದಲ್ಲಿ ಪ್ರಥಮ ಬಾರಿಗೆ 253 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಅಂಜುಮನ್ ಪಿಯು ಕಾಲೇಜಿನ ಪ್ರಾಂಶುಪಾಲ ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷಾ ಕೇಂದ್ರದ ಮುಖ್ಯಸ್ಥ ಮುಹಮ್ಮದ್ ಯೂಸೂಫ್ ಕೋಲಾ ಸಾಹಿಲ್ ಆನ್ ಲೈನ್ ಗೆ ಮಾಹಿತಿ ನೀಡಿದ್ದಾರೆ. 

ಮೊದಲ ಬಾರಿಗೆ ಭಟ್ಕಳದ ಅಂಜುಮಾನ್ ಪಿಯು ಕಾಲೇಜಿನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಇದರಲ್ಲಿ ತಾಲ್ಲೂಕಿನ ಒಟ್ಟು 253 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಕೋವಿಡ್-19 ರ ಈ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಪರೀಕ್ಷೆಗೆ ಎರಡು ಗಂಟೆಗಳ ಮೊದಲು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ಅವರು ಹೇಳಿದರು. ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಅವಕಾಶವಿದ್ದು ಫೇಸ್ ಮಾಸ್ಕ್ ಧರಿಸಬೇಕು, ಕುಡಿಯುವ ನೀರಿನ ಬಾಟಲಿಗಳು ಮತ್ತು ಮನೆಯಿಂದ ತರಬೇಕು ಎಂದು ಅವರು ಹೇಳಿದರು.

ನಾವು ಎಲ್ಲಾ ತರಗತಿ ಕೊಠಡಿಗಳನ್ನು ಸ್ವಚ್ಚಗೊಳಿಸಿದ್ದೇವೆ. ರೋಗಲಕ್ಷಣಗಳನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯನ್ನು  ಕಾಯ್ದಿರಿಸಲಾಗಿದೆ. ಹಿರಿಯ ಅಧಿಕಾರಿಗಳನ್ನು ವೀಕ್ಷಕರಾಗಿ ನಿಯೋಜಿಸಲಾಗಿದೆ, ಮತ್ತು ಸಿಇಟಿಯನ್ನು ಸುಗಮವಾಗಿ ನಡೆಸಲು ಸಮಿತಿಗಳನ್ನು ರಚಿಸಲಾಗಿದೆ. ಪರೀಕ್ಷೆಯಲ್ಲಿನ ನಕಲು ಹಾಗೂ ದುಷ್ಕೃತ್ಯಗಳನ್ನು ತಡೆಗಟ್ಟಲು ಪ್ರತಿ ಕೇಂದ್ರಕ್ಕೆ ವಿಶೇಷ ಫ್ಲೈಯಿಂಗ್ ಸ್ಕ್ವಾಡ್ ಅನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...