ಭಟ್ಕಳ :ಸಮುದ್ರ ಪಾಲಾಗುತಿದ್ದ ಬೆಂಗಳೂರು ಮೂಲದ ಮೂವರು ಇಂಜಿನಿಯರ್ ಗಳನ್ನು ಲೈಪ್ ಗಾರ್ಡ ಗಳು ತಮ್ಮ ಜೀವದ ಹಂಗು ತೊರೆದು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಶನಿವಾರ ಜರಗಿದೆ.
ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದ ಐದು ಜನ ಗೆಳೆಯರ ತಂಡ ಸಮುದ್ರದ ಅರ್ಭಟವನ್ನು ಲೆಕ್ಕಿಸದೆ ಸಮುದ್ರದಲ್ಲಿ ಈಜಲು ತೆರಳಿದ್ದಾಗ ಸಮುದ್ರದಲೆಗಳ ಸೆಳೆತಕ್ಕೆ ಸಿಲುಕಿ ನೀರುಪಾಲಾಗುತ್ತಿದ್ದರು. ಇದನ್ನು ಕಂಡ ಲೈಪ್ ಗಾರ್ಡಗಳು ತಮ್ಮ ಜೀವದ ಹಂಗು ತೊರೆದು ರಭಸದ ಅಲೆಯಲ್ಲಿಯೂ ಮೂರುಜನರನ್ನು ರಕ್ಷಣೆ ಮಾಡಿದ್ದಾರೆ.
ಬೆಂಗಳೂರು ಜಿಲ್ಲೆಯ ದೊಡ್ಡ ಬಳ್ಳಾಪುರ ತಾಲೂಕಿನ ಹರೀಶ್ ಎಸ್.ಸಿ (೨೪), ಆನಂದ್ (೨೪), ಸುರೇಶ್ (೨೪) ಎಂಬುವವರೇ ಜೀವರಕ್ಷಕ ದಳದ ತಂಡದವರಿಂದ ರಕ್ಷಣೆಗೊಳಗಾದವರಾಗಿದ್ದು ಎಂದು ಗುರುತಿಸಲಾಗಿದೆ.
ಶಶಿಧರ್ ನಾಯ್ಕ, ಚಂದ್ರಶೇಖರ್ ಹರಿಕಾಂತ್ ರಕ್ಷಣೆ ಮಾಡಿದ ಲೈಪ್ ಗಾರ್ಡಗಳಾಗಿದ್ದಾರೆ. ಘಟನೆ ಸಂಬಂಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.