ಆನ್‌ಲೈನ್ ಹಣ ವಂಚನೆ, ಅಶ್ಲೀಲ ಜಾಲತಾಣಗಳ ವಿರುದ್ಧ 3 ವರ್ಷಗಳಲ್ಲಿ 32,746 ಪ್ರಕರಣ ದಾಖಲು

Source: Vb/ಜಿ.ಮಹಾಂತೇಶ್ | By I.G. Bhatkali | Published on 21st February 2023, 4:15 PM | National News | Special Report |

ಬೆಂಗಳೂರು: ಹಣ, ಅಶ್ಲೀಲ ಮತ್ತಿತರ ವಿಷಯಗಳ ಜಾಲತಾಣಗಳ ಕುರಿತಂತೆ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 32,746 ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಇದೇ ಅವಧಿಯಲ್ಲಿ 11,125 ಪ್ರಕರಣಗಳು ಸೈಬರ್ ಅಪರಾಧದಡಿಯಲ್ಲಿ ದಾಖಲಾಗಿವೆ ಎಂಬ ಅಂಕಿ ಅಂಶಗಳನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬಹಿರಂಗಪಡಿಸಿದ್ದಾರೆ.

ಕೋವಿಡ್ ಮೊದಲ ಅವಧಿಯಲ್ಲಿ 3,501 ಸೈಬರ್ ಅಪರಾಧಗಳಿದ್ದರೆ ಹಣ, ಅಶ್ಲೀಲ ಮತ್ತಿತರರ ವಿಷಯಗಳ ಜಾಲತಾಣಗಳ ಕುರಿತಂತೆ ಒಟ್ಟು 10,738 ಪ್ರಕರಣಗಳು ದಾಖಲಾಗಿವೆ ಎಂಬ ಮಾಹಿತಿ ಒದಗಿಸಿದ್ದಾರೆ.

ವಿಧಾನಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಬ.ಪಾಟೀಲ್ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸೈಬರ್‌ ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ ಹೆಸರುಗಳನ್ನು ಬಹಿರಂಗಪಡಿಸಿಲ್ಲ.

'ದೇಶದಲ್ಲಿ ಐಟಿ ಕ್ಷೇತ್ರವು ವ್ಯಾಪಕವಾಗಿ ಅಭಿವೃದ್ಧಿಯಾಗುತ್ತಿದ್ದು, ಕರ್ನಾಟಕ ರಾಜ್ಯವು ಅಗ್ರಸ್ಥಾನದಲ್ಲಿದೆ. ಪ್ರಸ್ತುತ ಸಾರ್ವಜನಿಕರು ದೈನಂದಿನ ವ್ಯವಹಾರಗಳನ್ನು ಹೆಚ್ಚಾಗಿ ಆನ್ ಲೈನ್ ಬ್ಯಾಂಕಿಂಗ್, ಮೊಬೈಲ್ ಮೂಲಕ ಹಣಕಾಸಿನ ಚಲಾವಣೆ ಮಾಡುತ್ತಿರುವುದ ರಿಂದ ಸೈಬರ್ ವಂಚಕರ ಸಂಖ್ಯೆಯು ಹೆಚ್ಚಾಗಿ ಸೈಬರ್ ಅಪರಾಧಗಳು 2019ರಿಂದ ದ್ವಿಗುಣಗೊಂಡಿದೆ. ಆದ್ದರಿಂದ ಸೈಬರ್ ಅಪರಾಧಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಕ್ರಮವಹಿಸಬೇಕು' ಎಂದು ಒಳಾಡಳಿತ ಇಲಾಖೆಯು ಕಾನೂನು ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

ಸೈಬರ್ ಅಪರಾಧಿಗಳಡಿಯಲ್ಲಿ ದಾಖಲಾಗಿ ರುವ 37,746 ಪ್ರಕರಣಗಳಲ್ಲಿನ ಕೇವಲ 1,503 ಆರೋಪಿಗಳನ್ನಷ್ಟೇ ಬಂಧಿಸಿರುವುದು ಸಚಿವರು ನೀಡಿರುವ ಉತ್ತರದಿಂದ ಗೊತ್ತಾಗಿದೆ.

2021ರಲ್ಲಿ 3,501, 2022ರಲ್ಲಿ 2,701, 2023 (ಜನವರಿ ಅಂತ್ಯ) 172 ಸೈಬರ್ ಅಪರಾಧಗಳು ದಾಖಲಾಗಿದ್ದರೆ 2020ರಲ್ಲಿ 10,738, 2021ರಲ್ಲಿ 8,132, 2022ರಲ್ಲಿ 12,551, 2023 (ಜನವರಿ ಅಂತ್ಯ) 1,325 ಪ್ರಕರಣಗಳು ಹಣ, ಅಶ್ಲೀಲ ಮತ್ತಿತರ ಜಾಲತಾಣಗಳ ಕುರಿತಾಗಿವೆ.

ಕಳೆದೆರಡು ವರ್ಷಗಳಿಂದ ಆನ್‌ ಲೈನ್ ಬ್ಯಾಂಕಿಂಗ್ ಮತ್ತು ಮೊಬೈಲ್ ಮೂಲಕ ಹಣ ದೋಚುವ ಸೈಬರ್ ಅಪರಾಧ ಪ್ರಕರಣಗಳು ದ್ವಿಗುಣಗೊಂಡಿದ್ದರೂ ಸೈಬರ್ ಅಪರಾಧಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳ ರಚನೆ ಆಗಿಲ್ಲ. ಕಳೆದೊಂದು ವರ್ಷದಿಂದಲೂ ಪೊಲೀಸ್ ಮಹಾನಿರ್ದೇಶಕರು ವಿಶೇಷ ನ್ಯಾಯಾಲಯ ಸ್ಥಾಪನೆ ಕುರಿತು ಪತ್ರಗಳನ್ನು ಬರೆಯತ್ತಿದ್ದರೂ ಸರಕಾರ ಮಾತ್ರ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ.

ವಿಶೇಷ ನ್ಯಾಯಾಲಯಗಳ ಸ್ಥಾಪನೆ ಕುರಿತು ಗಮನಹರಿಸಬೇಕಿದ್ದ ಕಾನೂನು ಇಲಾಖೆಯು ದಿವ್ಯ ನಿರ್ಲಕ್ಷ್ಯ ವಹಿಸಿದೆ. ಹೀಗಾಗಿ ಒಳಾಡಳಿತ ಇಲಾಖೆಯು ಸೈಬರ್ ಅಪರಾಧಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಎಂದು 2022ರ ಮೇ 31ರಂದು ಪತ್ರವನ್ನು ಬರೆದಿತ್ತು.

ಸೈಬರ್ ಅಪರಾಧಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಹಾಗೂ ಇಂತಹ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯದ ಪ್ರತಿ ಜಿಲ್ಲೆ ಹಾಗೂ ನಗರಗಳಲ್ಲಿ ವಿಶೇಷ ಸೈಬರ್‌, ನಾರ್ಕೋಟಿಕ್ ಇಕಾನಾಮಿಕ್ ಪೊಲೀಸ್ ಠಾಣೆಗಳನ್ನು ಸ್ಥಾಪಿಸಿದೆ. ರಾಜ್ಯದಲ್ಲಿ ಒಟ್ಟು 46 ಸಿಇಎನ್ ಪೊಲೀಸ್ ಠಾಣೆಗಳು ಹಾಗೂ ಇವುಗಳ ಪೈಕಿ ಬೆಂಗಳೂರು ನಗರದಲ್ಲಿ ಮಾತ್ರ 8 ವಿಶೇಷ ಸಿಇಎಪೊಲೀಸ್ ಠಾಣೆಗಳು ಪ್ರತಿ ವಿಭಾಗಕ್ಕೆ ಒಂದರಂತೆ ಕಾರ್ಯನಿರ್ವಹಿಸುತ್ತಿವೆ.

ಸೈಬರ್ ಅಪರಾಧಗಳನ್ನು ತಡೆಗಟ್ಟುವ ಸಲುವಾಗಿ ಸಿಐಡಿ ಕಚೇರಿಯಲ್ಲಿ ಸೆಂಟರ್ ಫಾರ್ ಸೈಬರ್ ಕ್ರೈಮ್ ಇನ್ವೆಸ್ಟಿ ಗೇಷನ್ ಮತ್ತು ಡಿಜಿಟಲ್ ಫ್ಲೋರೆನ್ಸಿಕ್ ಟ್ರೈನಿಂಗ್ ಆ್ಯಂಡ್ ರೀಸರ್ಚ್ ಘಟಕ ಆರಂಭಿಸಿದೆ ಎಂದು ತಿಳಿದುಬಂದಿದೆ.

 

Read These Next

ಡೆಹ್ರಾಡೂನ್: ಕ್ರೈಸ್ತ ಪ್ರಾರ್ಥನಾ ಸಭೆಯ ಮೇಲೆ ಸಂಘ ಪರಿವಾರದಿಂದ ದಾಳಿ; ಏಳು ಜನರಿಗೆ ಹಲ್ಲೆ

ಸಂಘ ಪರಿವಾರ ಕಾರ್ಯಕರ್ತರ ಗುಂಪೊಂದು ರವಿವಾರ ಇಲ್ಲಿ ಕ್ರೈಸ್ತ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದೆ. ಕನಿಷ್ಠ ...

ಲೋಕಸಭಾ ಚುನಾವಣೆಯ ಬಳಿಕ ಮುಸ್ಲಿಮರ ವಿರುದ್ಧ ಗುಂಪು ದಾಳಿ ಪ್ರಕರಣದಲ್ಲಿ ಹೆಚ್ಚಳ; ಜಮಾಅತೆ ಇಸ್ಲಾಮೀ ಹಿಂದ್ ಕಳವಳ

ಹೊಸದಿಲ್ಲಿ : ದೇಶದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರದ ಪ್ರಕರಣಗಳು ಅಧಿಕಗೊಂಡಿದ್ದು, ಅದರಲ್ಲೂ ಲೋಕಸಭಾ ಚುನಾವಣೆಯ ಬಳಿಕ ...

ಬ್ರಿಟಿಷ್ ಯುಗದ ಕಾನೂನುಗಳಿಗೆ ತೆರೆ; ಇಂದಿನಿಂದ ಮೂರು ನೂತನ ಕ್ರಿಮಿನಲ್ ಕಾಯ್ದೆಗಳು ಜಾರಿ

ಸೋಮವಾರ, ಜುಲೈ 1ರಂದು ಮೂರು ನೂತನ ಕ್ರಿಮಿನಲ್ ಕಾನೂನುಗಳು ದೇಶಾದ್ಯಂತ ಜಾರಿಗೊಳ್ಳಲಿದ್ದು ಬ್ರಿಟಿಷ್ ಯುಗದ ಕಾನೂನುಗಳು ಅಸ್ತಿತ್ವ ...

ಕಾರವಾರ: ಶಕ್ತಿ ಯೋಜನೆಗೆ ತುಂಬಿತು ವರ್ಷ: ಜಿಲ್ಲೆಯಲ್ಲಿ 6.19 ಕೋಟಿ ಮಹಿಳೆಯರಿಗೆ ಉಚಿತ ಪ್ರಯಾಣದ ಹರ್ಷ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ರಾಜ್ಯಾದ್ಯಂತ ಸಂಚರಿಸುವ ಉಚಿತ ...

ಮೇ 31 ವಿಶ್ವ ತಂಬಾಕು ರಹಿತ ದಿನ; ಜಿಲ್ಲೆಯಲ್ಲಿ ತಂಬಾಕು ದುಷ್ಪರಿಣಾಮಗಳ ನಿಯಂತ್ರಣಕ್ಕೆ ವಿವಿಧ ಕಾರ್ಯಕ್ರಮ

ಉತ್ತರ ಕನ್ನಡ ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ನಿಯಂತ್ರಣಕ್ಕೆ ಕಳೆದ ಒಂದು ವರ್ಷದಿಂದ ಜಿಲ್ಲಾ ಹಾಗೂ ತಾಲೂಕು ...

ಭಟ್ಕಳ: ಮುರುಡೇಶ್ವರಕ್ಕೆ ಅಪ್ಪಳಿಸಿದ ಜನಮಾರುತ; ಸರಕಾರದ ಮಹಾ ಶಕ್ತಿ ಸಂಗಮಕ್ಕೆ ಪ್ರವಾಸಿ ತಾಣ ತತ್ತರ

ಮುಂಗಾರು ಆಗಮನಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ವಾರದ ರಜೆ ರವಿವಾರ ಪ್ರವಾಸಿಗರ ಸಮೂಹ ಮುರುಡೇಶ್ವರಕ್ಕೆ ಮಾರುತವಾಗಿ ...

ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಬಂದರೂ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಭಟ್ಕಳ ತಾಲೂಕು

ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ...