ಉತ್ತರಪ್ರದೇಶ: ಶೌಚಗುಂಡಿ ಸ್ವಚ್ಛಗೊಳಿಸುತ್ತಿದ್ದ ನಾಲ್ವರ ಸಾವು

Source: Vb | By I.G. Bhatkali | Published on 30th May 2023, 11:52 AM | National News |

ಲಕ್ನೋ: ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಶೌಚ ಗು೦ಡಿಯೊಂದರಲ್ಲಿ ವಿಷಾನಿಲ ಸೇವಿಸಿ ರವಿವಾರ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ಜಿಲ್ಲೆಯ ರಾಮನಗರ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಮೃತರನ್ನು ನಂದಕುಮಾರ್ (45), ನಿತೇಶ್ (25), ದಿನೇಶ್ (40) ಮತ್ತು ಆನಂದ್ (22) ಎಂಬುದಾಗಿ ಗುರುತಿಸಲಾಗಿದೆ.

ಗ್ರಾಮದಲ್ಲಿನ ಶೌಚಗುಂಡಿಯೊಂದನ್ನು ಶುಚಿಗೊಳಿಸುವ ಕೆಲಸವನ್ನು ನಂದಕುಮಾರ್‌ಗೆ ವಹಿಸಲಾಗಿತ್ತು. ಶುಚಿ ಮಾಡುತ್ತಿರುವಾಗ, ಅವರು ಗುಂಡಿಯ ಒಳಗೆ ಬಿದ್ದು ಸಿಕ್ಕಿಹಾಕಿಕೊಂಡರು. ಅವರನ್ನು ರಕ್ಷಿಸಲು ಮಗ ನಿತೇಶ್ ಗುಂಡಿಗೆ ಜಿಗಿದರು. ಆದರೆ ಅವರು ಕೂಡ ಅಲ್ಲಿ ಸಿಕ್ಕಿಹಾಕಿಕೊಂಡರು.

ಆಗ ಅವರ ಸಂಬಂಧಿಕರಾದ ದಿನೇಶ್ ಮತ್ತು ಆನಂದ್ ತಮ್ಮ ನೆರೆಮನೆಯವರಾದ ರಾಜ್‌ ಕುಮಾರ್ ಜೊತೆ ಗುಂಡಿಗೆ ಜಿಗಿದರು. ಆದರೆ, ಅವರೂ ಪ್ರಜ್ಞಾಹೀನರಾದರು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಬಂದು ಶೌಚಗುಂಡಿಯನ್ನು ಸ್ವಚ್ಛಗೊಳಿಸಲು ಸಕ್ಷನ್ ಟ್ಯಾಂಕೊಂದನ್ನು ಬಳಸಿದರು.

ಐವರನ್ನು ಕೊತ್ವಾ ಆರೋಗ್ಯ ಕೇಂದ್ರಕ್ಕೆ ಒಯ್ಯಲಾಯಿತು. ನಾಲ್ವರು ಮೃತಪಟ್ಟಿದ್ದಾರೆ ಎಂಬುದಾಗಿ ಅಲ್ಲಿ ಘೋಷಿಸಲಾಯಿತು. ಗಂಭೀರ ಸ್ಥಿತಿಯಲ್ಲಿರುವ ರಾಜ್‌ಕುಮಾರ್‌ರನ್ನು ದೇವರಿಯ ವೈದ್ಯಕೀಯ ಕಾಲೇಜ್ ಸೇರಿಸಲಾಗಿದೆ.

ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...