ಕೋಲಾರ ನಾಡಪ್ರಭು ಕೆಂಪೇಗೌಡರ 510 ನೇ ಜಯಂತೋತ್ಸವ

Source: S.O. News Service | By MV Bhatkal | Published on 27th June 2019, 7:55 PM | State News | Don't Miss |

ಕೋಲಾರ: ಜನ-ಮನ ಮೆಚ್ಚುವಂತೆ ಸ್ಥಬ್ದ ಚಿತ್ರಗಳನ್ನು ನಿರ್ಮಾಣ ಮಾಡುವಲ್ಲಿ ಕೆ.ಎಸ್.ಆರ್.ಟಿ.ಸಿ. ನೌಕರರ ಕೌಶಲ್ಯ ಹಾಗೂ ಕಲಾಭಿರುಚಿಯ ಶ್ರಮ ಸಾರ್ಥಕತೆಯಿಂದ ಕೂಡಿದೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಅವರು ಸಂತಸ ವ್ಯಕ್ತಪಡಿಸಿದರು. 
ನಾಡಪ್ರಭು ಕೆಂಪೇಗೌಡರ 510 ನೇ ಜಯಂತೋತ್ಸವದ ಪ್ರಯುಕ್ತ ನಗರದಲ್ಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ಕಚೇರಿಯ ವಕ್ಕಲಿಗ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ, ಬಹುವಿಧಧ ಸಂದೇಶ ಸಾರುವ ಸ್ಥಬ್ದಚಿತ್ರದ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. 
ನಾಡಹಬ್ಬ ಕನ್ನಡ ರಾಜ್ಯೋತ್ಸವ ಸೇರಿದಂತೆ ಅನೇಕ ಜಯಂತಿ ಕಾರ್ಯಕ್ರಮಗಳಲ್ಲಿ ಕೆ.ಎಸ್.ಆರ್.ಟಿ.ಸಿಯ ನೌಕರರು ತಯಾರಿಸುವ ಸ್ಥಬ್ದ ಚಿತ್ರ ಅರ್ಥಪೂರ್ಣವಾಗಿರುತ್ತದೆ ಎಂದ ಅವರು, ಇದೇ ಕೌಶಲ್ಯವನ್ನು ಮುಂದುವರೆಸಿಕೊಂಡು ಹೋಗಬೇಕೆಂದು ತಿಳಿಸಿದರು. 
ಈ ಸಂದರ್ಭದಲ್ಲಿ ಶಾಸಕರನ್ನು ಸನ್ಮಾನಿಸಿದ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ಅಧಿಕಾರಿ ಹಿಮವರ್ಧನ ನಾಯ್ಡು ಅಲ್ಲೂರಿ ಅವರು ಮಾತನಾಡಿ, ಸಂಸ್ಥೆಯ ಬಸ್ಸುಗಳ ಕಾರ್ಯಾಚರಣೆ ಹೆಚ್ಚಾಗುತ್ತಿದ್ದು ಇದಕ್ಕೆ ಅನುಗುಣವಾಗಿ ಡಿಪೋಗಳ ವಿಸ್ತರಣೆ ಅಗತ್ಯವಾಗಿದ್ದು, ಕೋಲಾರಕ್ಕೆ ವಿಶಾಲ ಜಾಗದ ಹೆಚ್ಚುವರಿ ಡಿಪೋ ನಿರ್ಮಾಣ ಮಾಡಲು ಸೂಕ್ತ ಜಾಗವನ್ನು ಒದಗಿಸಿಕೊಡಬೇಕೆಂದು ಮನವಿ ಮಾಡಿದರು. 
ಈ ಕಾರ್ಯಕ್ರಮದಲ್ಲಿ ಮುಖಂಡರಾದ ಕೆ.ವಿ.ಶಂಕರಪ್ಪ, ವಕ್ಕಲೇರಿ ರಾಮು, ಬಿಸಪ್ಪಗೌಡ, ಅನಿಲ್‍ಕುಮಾರ್, ವೆಂಕಟೇಶಪ್ಪ ಸೇರಿದಂತೆ ವಿವಿಧ ಸಮಾಜದ ಮುಖಂಡರು ಹಾಗೂ ನೌಕರರ ಸಂಘದ ಪದಾದಿಕಾರಿಗಳು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...