ಮಾಜಿ ಶಾಸಕ ಮಾಂಕಾಳರ ನೆರವಿನಿಂದ ಭಟ್ಕಳದಿಂದ ಓಡಿಸ್ಸಾ ಕ್ಕೆ ಪ್ರಯಾಣ ಬೆಳೆಸಿದ 70 ಮೀನುಗಾರರು

Source: sonews | By Staff Correspondent | Published on 25th May 2020, 10:38 PM | Coastal News |

ಭಟ್ಕಳ: ಸೇವಾ ಸಿಂಧು ಆ್ಯಫ್‍ನಲ್ಲಿ ಹೆಸರು ನೊಂದಾಯಿಸಿ ತಮ್ಮ ರಾಜ್ಯಕ್ಕೆ ಮರಳು  ಕಾಯುತ್ತಿದ್ದ ಒಡಿಸ್ಸಾದ 70 ಮೀನುಗಾರರು ಸೋಮವಾರದಂದು ಮಾಜಿ ಶಾಸಕ ಮಾಂಕಾಳ ವೈದ್ಯರ ನೆರವಿನಿಂದ ಖಾಸಗಿ ಬಸ್ ಮೂಲಕ ಪ್ರಯಾಣ ಬೆಳಿಸಿದರು. 

ಕಳೆದ ಕೆಲವು ದಿನಗಳಿಂದ ಒಡಿಸ್ಸಾ ತೆರಳಲು ಸುಮಾರು 70 ಮೀನುಗಾರರು ಸೇವಾ ಸಿಂಧು ಆ್ಯಫ್‍ನಲ್ಲಿ ಹೆಸರು ನೊಂದಾಯಿಸಿದ್ದರು. ಆದರೆ ಅಲ್ಲಿಗೆ ತೆರಳಲು ರೈಲಿನ ವ್ಯವಸ್ಥೆ ಇಲ್ಲದೆ ಇಲ್ಲಿಯೆ ಪರದಾಡುತ್ತಿದ್ದರು. ಅವರ ಬೋಟ್‍ಗಳ ಮಾಲಿಕರು ಅವರಿಗೆ ಊಟ ತಿಂಡಿ ಕೊಡುತ್ತಿದ್ದರಾದರೂ ಮರಳಿ ಮನೆಗೆ ತೆರಳಲು ಪ್ರತಿದಿನ ಹೋರಾಟ ನಡೆಸುತ್ತಿದ್ದರು. ಮಾಜಿ ಶಾಸಕ ಮಂಕಾಳ ವೈದ್ಯ ಅವರ ಮನೆಗೆ ತೆರಳಿ ತಮ್ಮ ಸಂಕಷ್ಟ ತಿಳಿಸಿದ್ದು ಮೀನುಗಾರರ ನೆರವಿಗೆ ಧಾವಿಸಿದ ಅವರು ಬೋಟ್ ಮಾಲಿಕರಾದ ನಾರಾಯಣ ಮೊಗೇರ್, ಮಾಧವ ಮೊಗೇರ್, ಸುಕ್ರಯ ನಾಯ್ಕ ಬಂದರ್ ಹಾಗೂ ಮೀನುಗಾರಿಕೆ ಇಲಾಖೆಯ ಸಹಾಯ ನಿರ್ದೇಶಕ ಅಧಿಕಾರಿ ರವಿ ಅವರ ಸಹಕಾರದೊಂದಿಗೆ ಭಟ್ಕಳದಿಂದ ಒಡಿಸ್ಸಾಕ್ಕೆ ತೆರಳಲು ಬಸ್ ಸೌಕರ್ಯ ಕಲ್ಪಿಸಿ ಕೊಟ್ಟಿದ್ದಾರೆ. 

ಸೋಮವಾರ ಆರೋಗ್ಯ ತಪಾಸಣೆ ನಡೆಸಿ 70 ಕಾರ್ಮಿಕರು ತಮ್ಮ ಊರಿಗೆ ತೆರಳಲು ಬಸ್ ಹತ್ತಿದ್ದಾರೆ. ಈ ಸಂದರ್ಭದಲ್ಲಿ ಜಾಲಿ ಪ.ಪಂ. ಮಾಜಿ ಅಧ್ಯಕ್ಷ ಅಬ್ದುಲ್ ರಹೀಮ್ ಶೇಕ್ ಇದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...