ಚಾಮರಾಜನಗರ: ಮಧ್ಯಾಹ್ನದ ಬಿಸಿಯೂಟ ಸೇವಿಸಿ 70 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ವಡಕೆಹಳ್ಳದಲ್ಲಿ ನಡೆದಿದೆ. ತಾಲೂಕಿನ ಶಾಲಾ ಮಕ್ಕಳು ಸೇವಿಸಿದ್ದ ಊಟದಲ್ಲಿ ಹಲ್ಲಿ ಬಿದ್ದಿತ್ತು ಎನ್ನಲಾಗಿದ್ದು, ಅಸ್ತ ಮಕ್ಕಳಿಗೆ ಹನೂರು ತಾಲೂಕಿನ ಕೌದಳ್ಳಿ ಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಬಿಇಒ ಟಿ.ಆರ್.ಸ್ವಾಮಿ, ಅಸ್ವಸ್ಥಗೊಂಡ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಶಾಲೆಯಲ್ಲಿ 90ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದು, 70ಕ್ಕೂ ಹೆಚ್ಚು ಮಕ್ಕಳು ಬಿಸಿಯೂಟ ಸೇವಿಸಿದ್ದರು. ಇವರೆಲ್ಲ ವಾಂತಿ ಮಾಡಿಕೊಂಡ ಬಳಿಕ ಇತರ ಮಕ್ಕಳು ಊಟ ಸೇವಿಸಿಲ್ಲ ಎಂದು ತಿಳಿದುಬಂದಿದೆ.