ಧಾರವಾಡ : ಬರುವ ಡಿಸೆಂಬರ್ 22 ರಂದು ಮೊದಲ ಹಂತದಲ್ಲಿ ಜಿಲ್ಲೆಯ ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕುಗಳ ವಿವಿಧ ಗ್ರಾಮ ಪಂಚಾಯತಿಗಳ ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಮತ್ತು ಚುನಾವಣೆಗಳು ಮುಕ್ತ, ನ್ಯಾಯಸಮ್ಮತ, ನಿಷ್ಪಕ್ಷಪಾತವಾಗಿ ನಡೆಯಲು ಅನುಕೂಲವಾಗುವಂತೆ ಅಧಿಕಾರಿ, ಪೊಲೀಸ್ ಪೇದೆಗಳು ಸೇರಿದಂತೆ ಒಟ್ಟು 725 ಸಿಬ್ಬಂದಿಗಳನ್ನು ನೇಮಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮತದಾನ ನಡೆಯುವ ಸಾಮಾನ್ಯ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳ ಅನುಸಾರ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಿಸಲಾಗಿದೆ.
ಧಾರವಾಡ, ಕಲಘಟಗಿ, ಅಳ್ನಾವರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಲು 4 ಜನ ಡಿವೈಎಸ್ ಪಿ, 10 ಜನ ಸಿಪಿಐ, 17 ಜನ ಪಿಎಸ್ಐ, 49 ಜನ ಎಎಸ್ಐ, 318 ಹೆಡ್ ಕಾನಸ್ಟೆಬಲ್, ಕಾನಸ್ಟೆಬಲ್ಗಳು, 132 ಹೋಮ್ ಗಾಡ್ರ್ಸ್ ಮತ್ತು 195 ಜನ ಜೈಲ್ ವಾರ್ಡ್ನ್ ಗಳನ್ನು ನೇಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.