ಪಂಜಾಬ್ ಕಳ್ಳಭಟ್ಟಿ ದುರಂತ 86 ಜನರ ಸಾವು; ಅಬಕಾರಿ ಇಲಾಖೆಯ 7, 6 ಪೊಲೀಸರು ಅಮಾನತು

Source: uni | Published on 2nd August 2020, 12:55 AM | National News | Don't Miss |

 

ಹೂಚ್: ಪಂಜಾಬ್ ನ ಹೂಚ್ ನಲ್ಲಿ ವಿಷಕಾರಿ ಮದ್ಯ (ಕಳ್ಳಭಟ್ಟಿ) ಸೇವನೆ ಮಾಡಿ ಸಾವನ್ನಪ್ಪಿದವರ ಸಂಖ್ಯೆ 86 ಕ್ಕೆ ಏರಿಕೆಯಾಗಿದ್ದು, ಅಬಕಾರಿ ಇಲಾಖೆಯ 7 ಅಧಿಕಾರಿಗಳನ್ನು ಹಾಗೂ ಪೊಲೀಸ್ ಇಲಾಖೆಯ 6 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಶನಿವಾರದಂದು 48 ಜನರು ಸಾವನ್ನಪ್ಪಿದ್ದು ಒಟ್ಟಾರೆ ಸಂಖ್ಯೆ 86 ಕ್ಕೆ ಏರಿಕೆಯಾಗಿದೆ. 
ಈ ದುರ್ಘಟನೆಗೆ ಸಂಬಂಧಿಸಿದಂತೆ ಈವರೆಗೂ 25 ಜನರನ್ನು ಬಂಧಿಸಲಾಗಿದ್ದು ವಿಪಕ್ಷಗಳು ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸುತ್ತಿವೆ. ವಿಷಕಾರಿ ಮದ್ಯ ಅಥವಾ ಕಳ್ಳಭಟ್ಟಿ ಸೇವನೆ ಮಾಡಿ ಆಸ್ಪತ್ರೆಗೆ ದಾಖಲಾಗಿರುವವರ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ ಎಂದು ಚಂಡೀಗಢದ ಅಧಿಕಾರಿಗಳು ಹೇಳಿದ್ದಾರೆ.
ಕಳ್ಳಭಟ್ಟಿ ತಯಾರಿಸುವವರನ್ನು ಹಿಡಿಯುವುದಕ್ಕಾಗಿ ಪೊಲೀಸರು ಹಲವೆಡೆ ದಾಳಿ ನಡೆಸಿದ್ದರು. 3 ಜಿಲ್ಲೆಗಳಲ್ಲಿ ನಡೆದ 100 ಕ್ಕೂ ಹೆಚ್ಚು ರೈಡ್ ನಲ್ಲಿ 17 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. 
ಘಟನೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿ ಇಬ್ಬರು ಪೊಲೀಸ್ ಡೆಪ್ಯುಟಿ ಸೂಪರಿಂಟೆಂಡೆಂಟ್ ಗಳನ್ನು ಹಾಗೂ ನಾಲ್ವರು ಸ್ಟೇಷನ್ ಹೌಸ್ ಆಫೀಸರ್ ಗಳನ್ನು ಅಮಾನತುಗೊಳಿಸಲಾಗಿದೆ

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...