ಕಾರವಾರ: ಶ್ರಮಿಕ ವಿಶೇಷ ರೈಲಿನಿಂದ ಪಶ್ಚಿಮ ಬಂಗಾಳಕ್ಕೆ 967 ವಲಸೆ ಕಾರ್ಮಿಕರ ಪ್ರಯಾಣ

Source: sonews | By Staff Correspondent | Published on 1st June 2020, 7:27 PM | Coastal News |

ಕಾರವಾರ: ಉತ್ತರಕನ್ನಡ ಜಿಲ್ಲೆಯಿಂದ 967 ವಲಸೆ ಕಾರ್ಮಿಕರನ್ನು ಹೊತ್ತು ಪಶ್ಚಿಮ ಬಂಗಾಳಕ್ಕೆ ಮೊದಲ ಶ್ರಮಿಕ ರೈಲು  ಸೋಮವಾರ ಪ್ರಯಾಣ ಬೆಳಿಸಿತು. 

ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಅವರ ಕೋರಿಕೆಯ ಮೇರೆಗೆ ಕೊಂಕಣ ರೈಲ್ವೆ ನಿಗಮವು ಕಾರವಾರ ರೈಲು ನಿಲ್ದಾಣದಿಂದ ಶ್ರಮಿಕ್ ವಿಶೇಷ ರೈಲನ್ನು ಬಿಟ್ಟಿದೆ. ಈ ರೈಲಿನಲ್ಲಿ ಕಾರವಾರದಿಂದ 967 ಪ್ರಯಾಣಿಕರು ತೆರಳಿದರೆ, ಉಡುಪಿಯಿಂದ 250 ಹಾಗೂ ಮಂಗಳೂರಿನಿಂದ 72 ಕಾರ್ಮಿಕರನ್ನು ಸೇರಿದಂತೆ ಒಟ್ಟು 1,289 ಮಂದಿಯನ್ನು ಪಶ್ಚಿಮ ಬಂಗಾಳದ ಪುರುಲುವಾ ಜಂಕ್ಷನ್ ಗೆ ಕರೆದೊಯ್ಯುತ್ತಿದೆ‌.

ಈ ಸಂದರ್ಭದಲ್ಲಿ ಕೊಂಕಣ ರೈಲ್ವೆ ನಿಗಮದ ಕಾರವಾರ ಪ್ರಾದೇಶಿಕ ವ್ಯವಸ್ಥಾಪಕ ಬಿ.ಬಿ.ನಿಕಮ್, ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಹಾಜರಿದ್ದು, ಕಾರ್ಮಿಕರಿಗೆ ಸುರಕ್ಷಿತ ಪ್ರಯಾಣಕ್ಕೆ ಶುಭ ಹಾರೈಸಿದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...