ಸರ್ಕಾರ-ರೈತರ ನಡುವೆ 9ನೇ ಸುತ್ತು; ತಾನು ಬಗ್ಗದೆ, ಮೃದುವಾಗುವಂತೆ ರೈತರಿಗೆ ಆಗ್ರಹಿಸಿದ ಸರ್ಕಾರ

Source: SO News | By Laxmi Tanaya | Published on 16th January 2021, 11:01 AM | National News | Don't Miss |

ನವದೆಹಲಿ : ಸುಪ್ರೀಂ ಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ 9ನೇ ಸುತ್ತಿನ ಮಾತುಕತೆಯ ನಡೆಯುವುದೋ ಇಲ್ಲವೋ ಎಂಬ ಗೊಂದಲದ ನಡುವೆಯೇ ವಿಜ್ಞಾನ್‌ ಭವನದಲ್ಲಿ ಸಭೆ ನಡೆಯಿತು. 

ಸರ್ಕಾರದ ಪ್ರತಿನಿಧಿಗಳಾಗಿ ರೈಲ್ವೆ ಹಾಗೂ ಆಹಾರ ಸಚಿವ ಪಿಯೂಷ್‌ ಗೋಯಲ್‌, ಕೃಷಿ ಸಚಿವ ನರೇಂದ್ರಸಿಂಗ್‌ ತೋಮರ್‌ ಮತ್ತು ವಾಣಿಜ್ಯ ರಾಜ್ಯ ಖಾತೆ ಸಚಿವ ಸೋಮ್‌ ಪ್ರಕಾಶ್‌ ಸಭೆಯಲ್ಲಿ ಪಾಲ್ಗೊಂಡಿದ್ದರು. ರೈತರ ಪ್ರತಿನಿಧಿಗಳಾಗಿ 40 ಸಂಘಟನೆಯ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. 

ಕೃಷಿ ಸಚಿವ ತೋಮರ್‌ ಮಾತುಕತೆಗೆ ಚಾಲನೆ ನೀಡಿ, `ನೀವು ಸರ್ಕಾರ ಪಟ್ಟು ಹಿಡಿದೆ, ಇದನ್ನು ಅಹಂಕಾರದ ವಿಷಯವನ್ನಾಗಿ ಮಾಡಿಕೊಂಡಿದೆ ಎಂದು ಹೇಳುತ್ತೀರಿ. ಆದರೆ ನಾವು ನಿಮ್ಮ ಹಲವು ಬೇಡಿಕೆಗಳನ್ನು ಒಪ್ಪಿಕೊಂಡಿದ್ದೇವೆ. ಕಾಯ್ದೆ ಹಿಂಪಡೆಯುವ ಒಂದು ಬೇಡಿಕೆಗೆ ಅಂಟಿಕೊಳ್ಳುವ ಬದಲು ಸ್ವಲ್ಪ ಮೃದು ಧೋರಣೆ ತಳೆಯಬಾರದೇಕೆ?' ಎಂದು ರೈತ ಮುಖಂಡರಿಗೆ ಕೇಳಿದ್ದಾಗಿ ಸಭೆಯಲ್ಲಿ ಪಾಲ್ಗೊಂಡ ನಾಯಕರು ಮಾಧ್ಯಮಗಳಿಗೆ ತಿಳಿಸಿದರು. 

ಸಭೆಯಲ್ಲಿ ಸಚಿವ ತೋಮರ್‌, ಸುಪ್ರೀಂ ಕೋರ್ಟ್‌ ತಜ್ಞ ಸಮಿತಿ ರಚಿಸಿ ನೀಡಿದ ಆದೇಶವನ್ನು ಸ್ವಾಗತಿಸಿ, 'ನಾವು ಸಮಿತಿ ಎದುರು ನಮ್ಮ ವಾದವನ್ನು ಮಂಡಿಸುತ್ತೇವೆ' ಎಂದು ತಿಳಿಸಿದರು. 

ಜ.19ರಂದು ಕರೆಯಲಾಗಿರುವ ಈ ತಜ್ಞರ ಸಮಿತಿ ಸಭೆಯಲ್ಲಿ ರೈತ ಮುಖಂಡರು ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. ಸಮಿತಿಯ ಸದಸ್ಯರು ಈಗಾಗಲೇ ಕಾಯ್ದೆ ಪರವಾಗಿರುವುದಾಗಿ ತಮ್ಮ ಹೇಳಿಕೆಗಳಿಂದ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ನಾವು ಸಮಿತಿಯ ಬದಲು ಸರ್ಕಾರದೊಂದಿಗೇ ಮಾತುಕತೆ ಮುಂದುವರೆಸಲು ಸಿದ್ಧರಿದ್ದೇವೆ ಎಂದು ರೈತ ನಾಯಕರು ತಿಳಿಸಿದ್ದಾರೆ. 

ರೈತ ಹೋರಾಟದ ಬಗ್ಗೆ ಕಾಳಜಿ ತೋರಿ, ಸುಪ್ರೀಂ ಕೋರ್ಟ್‌ ನೇಮಿಸಿದ ಸಮಿತಿಯಿಂದ ಈಗಾಗಲೇ ಭೂಪಿಂದರ್‌ ಸಿಂಗ್‌ ಮಾನ್‌ ಹೊರಬಂದಿದ್ದು, ಇನ್ನೊಬ್ಬ ಸದಸ್ಯರು ಹೊರಬರುವ ನಿರೀಕ್ಷೆ ಇದೆ ಎಂದು ರೈತ ಸಂಘಟನೆಗಳ ನಾಯಕರು ಹೇಳಿದ್ದಾರೆ. 

ಈ ಸಭೆಯಲ್ಲಿ ರೈತ ಮುಖಂಡರು ಯಾವುದೇ ರೀತಿಯಲ್ಲೂ ಸರ್ಕಾರದ ಮನವಿಗಳಿಗೆ ಸ್ಪಂದಿಸದೇ ಸಭೆ ಅಂತ್ಯಗೊಂಡಿತು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...