ಸರ್ಕಾರ-ರೈತರ ನಡುವೆ 9ನೇ ಸುತ್ತಿನ ಮಾತುಕತೆ: ನಿರೀಕ್ಷೆಗಳಿಲ್ಲದ ಸಭೆ

Source: S O News | By Laxmi Tanaya | Published on 16th January 2021, 10:50 AM | National News |

ನವದೆಹಲಿ : ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ 52ನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನಗಳಲ್ಲಿ ಸರ್ಕಾರ ಮತ್ತು ರೈತರ ನಡುವೆ 8 ಸುತ್ತಿನ ಮಾತುಕತೆಗಳು ನಡೆದಿದೆ. 

ಆದರೆ ರೈತ ಹೋರಾಟ ಪ್ರಶ್ನಿಸಿ ಎರಡು ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಮ್‌ ಕೋರ್ಟ್‌ ಮಂಗಳವಾರ ರೈತರ ಬೇಡಿಕೆ ಆಲಿಸಿ, ಕಾಯ್ದೆಗಳ ಅನುಷ್ಠಾನ ಕುರಿತು ಸ್ಪಷ್ಟತೆ ಪಡೆಯಲು ಸಮಿತಿ ನೀಡಿ ಆದೇಶ ಹೊರಡಿಸಿತ್ತು. 

ಈ ಹಿನ್ನೆಲೆಯಲ್ಲಿ ಸಮಾನಾಂತರವಾಗಿ ಸರ್ಕಾರದೊಂದಿಗೆ ಮಾತುಕತೆ ನಡೆಸುವುದು ವ್ಯರ್ಥ ಎಂಬ ನಿಲುವಿದ್ದರೂ ಇಂದು ಸಭೆ ನಡೆಯುತ್ತಿದೆ. ಕೇಂದ್ರ ಸರ್ಕಾರ ರೈತರ ಮನವೊಲಿಸುವ ನಿಟ್ಟಿನಲ್ಲಿ ಮಾತುಕತೆಗೆ ಸಿದ್ಧವಾಗಿದ್ದು, ದರ್ಶನ್‌ಪಾಲ್‌ ಹಾಗೂ ಹಿರಿಯ ರೈತ ಮುಖಂಡರು ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು, ಕನಿಷ್ಠ ಬೆಂಬಲ ಬೆಲೆ ಕುರಿತು ತಮ್ಮ ಬೇಡಿಕೆಯ ವಿಷಯದಲ್ಲಿ ಪಟ್ಟು ಹಿಡಿದಿರುವ ರೈತರು ಕಳೆದ 8 ಸುತ್ತಿನ ಮಾತುಕತೆಗಳಲ್ಲಿ ಕೇಂದ್ರ ಸರ್ಕಾರದ ಯಾವುದೇ ಸಲಹೆಗಳಿಗೆ ಒಪ್ಪಿಲ್ಲ.

ಈಗ ಸುಪ್ರೀಮ್‌ಕೋರ್ಟ್‌ ಸಮಿತಿ ರಚಿಸಿದ್ದು, ರೈತರೊಂದಿಗೆ ಸಮಾಲೋಚಿಸುವುದಕ್ಕೆ ಜ. 19ರಂದು ಸಭೆ ನಿಗದಿಯಾಗಿದೆ. ಅಂದರೆ ಇಂದಿನ 9ನೇ ಸುತ್ತಿನ ಮಾತುಕತೆ ಸರ್ಕಾರ ಮತ್ತು ರೈತರ ನಡುವಿನ ನಡೆಯುವ ಕಡೆಯ ಮಾತುಕತೆಯಾಗಲಿದೆ. 

ಈ ಸಭೆಯ ಬಗ್ಗೆ ಹೋರಾಟ ನಿರತ ರೈತರು, ರೈತ ನಾಯಕರು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲವಾದರೂ, ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...