ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣ ಕುರಿತು ಚರ್ಚೆ

Source: so news | Published on 9th July 2020, 12:33 AM | State News | Don't Miss |

 


ಬೆಳಗಾವಿ: ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣಕ್ಕೆ ಸಮನ್ವಯ ಸಮಿತಿ ರಚನೆ ಹಾಗೂ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ವಿನಿಮಯಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗವು ಇಂದು ಮಹಾರಾಷ್ಟ್ರ ಸರ್ಕಾರದ ಜತೆ ಚರ್ಚೆ ನಡೆಸಿತು.
ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ರಾಜ್ಯ ನಿಯೋಗವು ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆಯ ಸಚಿವರಾದ ಜಯಂತ್ ಪಾಟೀಲ್ ಅವರೊಂದಿಗೆ ಮುಂಬೈಯಲ್ಲಿ ಸಭೆ ನಡೆಸಿತು.
ಆಲಮಟ್ಟಿ ಜಲಾಶಯದ ಎತ್ತರದ ಜತೆಗೆ ಕೃಷ್ಣಾ ನದಿ ನೀರು ಬಳಕೆಗೆ ಸಂಬಂಧಿಸಿದಂತೆ ನ್ಯಾಯಾಧೀಕರಣದ ತೀರ್ಪನ್ನು ಕೇಂದ್ರ ಸರ್ಕಾರ ಇದುವರೆಗೆ ಗೆಜೆಟ್ ನಲ್ಲಿ ಪ್ರಕಟಿಸದಿರುವುದರಿಂದ ಸದ್ಯಕ್ಕೆ ನೀರು ಬಳಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ನ್ಯಾಯಾಧೀಕರಣದ ತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಉಭಯ ರಾಜ್ಯಗಳು ತೀರ್ಮಾನಿಸಿದವು.
ಪ್ರತಿವರ್ಷ ಮಳೆಗಾಲದಲ್ಲಿ ಉಂಟಾಗುತ್ತಿರುವ ನೆರೆಹಾವಳಿಯನ್ನು ನಿಯಂತ್ರಿಸಲು ಸಮನ್ವಯ ಸಮಿತಿ ರಚಿಸಬೇಕು ಎಂಬ ಮಹಾರಾಷ್ಟ್ರ ಸರ್ಕಾರದ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಿದ ರಾಜ್ಯದ ನಿಯೋಗವು ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಹಾಗೂ ಅಧೀಕ್ಷಕ ಎಂಜಿನಿಯರ್ ಅವರನ್ನು ಸಮನ್ವಯ ಸಮಿತಿಯ ಸದಸ್ಯರನ್ನಾಗಿ ನೇಮಿಸುವುದಾಗಿ ತಿಳಿಸಿತು.
ನೀರು ವಿನಿಮಯಕ್ಕೆ ಮಹಾರಾಷ್ಟ್ರ ಮನವಿ:
ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮಹಾರಾಷ್ಟ್ರದಿಂದ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹಣದ ಬದಲು ಪರಸ್ಪರ ನೀರು ವಿನಿಮಯ ಮಾಡಿಕೊಳ್ಳುವ ಅಗತ್ಯವಿದೆ ಎಂದು ಮಹಾರಾಷ್ಟ್ರ ಸರ್ಕಾರ ಪ್ರತಿಪಾದಿಸಿತು.
ಬೇಸಿಗೆ ಕಾಲದಲ್ಲಿ ಕರ್ನಾಟಕದಲ್ಲಿ ಕುಡಿಯು ನೀರಿನ ತೀವ್ರ ಕೊರತೆ ಎದುರಾಗುತ್ತಿರುವುದರಿಂದ ನೀರು ವಿನಿಮಯದ ಬದಲಾಗಿ ಪರ್ಯಾಯ ಮಾರ್ಗಗಳ ಬಗ್ಗೆಯೂ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಕರ್ನಾಟಕದ ನಿಯೋಗವು ಅಧಿಕಾರಿಗಳಿಗೆ ತಿಳಿಸಿತು.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ನೇತೃತ್ವದ ನಿಯೋಗದಲ್ಲಿ ಜವಳಿ ಇಲಾಖೆಯ ಸಚಿವರಾದ ಶ್ರೀಮಂತ ಪಾಟೀಲ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಹೇಶ್ ಕುಮಠಳ್ಳಿ, ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಸಚಿವರ ವಿಶೇಷ ಕರ್ತವ್ಯಾಧಿಕಾರಿ ರುದ್ರಯ್ಯ, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಲ್ಲಿಕಾರ್ಜುನ ಗುಂಗೆ ಉಪಸ್ಥಿತರಿದ್ದರು.
ಮಹಾರಾಷ್ಟ್ರದ ನೀರಾವರಿ ಸಚಿವರಾದ ಜಯಂತ್ ಪಾಟೀಲ ನೇತೃತ್ವದ ನಿಯೋಗದಲ್ಲಿ ಸಚಿವರಾದ ರಾಜೇಶ್ ಪಾಟೀಲ್ ಯಡ್ರಾವಕರ್, ಸತೇಜ್ ಪಾಟೀಲ್, ಬಾಳಾಸಾಹೇಬ್ ಪಾಟೀಲ್, ವಿಶ್ವಜಿತ್ ಕದಂ, ಸಂಸದರಾದ ಸಂಜಯ್ ಕಾಕಾ ಪಾಟೀಲ್, ಧೈರ್ಯಶೀಲ ಮಾನೆ, ಶಾಸಕರಾದ ಸಾವಂತ್, ರಾಜೇಶ್ ಪಾಟೀಲ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...