ಹೊನ್ನಾವರ-ಭಟ್ಕಳದಲ್ಲಿ ಸಚಿವ ಮಂಕಾಳ ವೈದ್ಯರಿಗೆ ಅದ್ದೂರಿ ಸ್ವಾಗತ. ಕ್ಷೇತ್ರದ ನಾಗರಿಕರ ವಿಜಯೋತ್ಸವ ಮೆರವಣಿಗೆ.

Source: SO News | By Laxmi Tanaya | Published on 28th May 2023, 10:33 PM | Coastal News | Don't Miss |

ಭಟ್ಕಳ :  ನೂತನ ಸಚಿವರಾಗಿ  ಉತ್ತರಕನ್ನಡ ಜಿಲ್ಲೆಯ ಭಟ್ಕಳ ಹೊನ್ನಾವರ ಕ್ಷೇತ್ರಕ್ಕೆ ಆಗಮಿಸಿದ ಮಂಕಾಳ ವೈದ್ಯ ಅವರನ್ನ ಕ್ಷೇತ್ರದ ಜನತೆ ಅದ್ದೂರಿಯ ಸ್ವಾಗತ ಕೋರಿದ್ದಾರೆ.

ಭಾನುವಾರ ಮಧ್ಯಾಹ್ನ ಹೊನ್ನಾವರ ತಾಲೂಕಿನ  ಪ್ರಸಿದ್ಧ  ಇಡಗುಂಜಿ ಮಹಾಗಣಪತಿ ದೇವಾಲಯಕ್ಕೆ ಆಗಮಿಸಿದ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. 

ಈ ವೇಳೆ ಮಾತನಾಡಿದ ಅವರು, ಗಣಪತಿ‌ ದೇವರ ಆಶೀರ್ವಾದ ಪಡೆದು ಇಲ್ಲಿಂದಲೇ ತನ್ನ ಕೆಲಸ ಆರಂಭ ಎಂದು ಹೇಳಿದ್ದಾರೆ.

ಮಂಕಾಳ ವೈದ್ಯ ಸಚಿವರಾಗಿ ಕ್ಷೇತ್ರಕ್ಕೆ ಆಗಮಿಸಿದ್ದರಿಂದ  ಹೊನ್ನಾವರದ ಗೇರುಸೊಪ್ಪ ಸರ್ಕಲ್‌ನಿಂದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ದೂರಿ ಮೆರವಣಿಗೆ ನಡೆಸಿದರು. ರಾತ್ರಿ ಭಟ್ಕಳದ ಸಂಶುದ್ದಿನ್ ವೃತ್ತಕ್ಕೆ ಆಗಮಿಸಿದ ವಿಹಯೋತ್ಸವ ರ್ಯಾಲಿಗೆ ಭಟ್ಕಳ ಜನತೆ ಸ್ವಾಗತಿಸಿದರು. ದಾರಿಯುದ್ದಕ್ಕೂ ಜನತೆ ಸಚಿವರಿಗೆ ಹಾರ ಹಾಕಿ ಗೌರವಿಸಿದರು.
ಇದೇ ವೇಳೆ  ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಾಗರಿಕರು ಪಟಾಕಿ ಸಿಡಿಸಿ, ಜೈಘೋಷ ಹಾಕಿ ಸಂಭೃಮಿಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...