ಭಟ್ಕಳ ತಾಲೂಕಿನ ನಾಮಧಾರಿ ಸಮಾಜದ ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನದಿಂದ ದೇವರ ಪಲ್ಲಕ್ಕಿ ಉತ್ಸವ ಶನಿವಾರ ನಗರದಾದ್ಯಂತ ಅದ್ಧೂರಿಯಾಗಿ ಜರುಗಿತು. ಸಾವಿರಾರು ಭಕ್ತರು ಈ ಉತ್ಸವಕ್ಕೆ ಸಾಕ್ಷಿಯಾದರು.
ಸಂಜೆ 4:30 ಘಂಟೆಗೆ ಶ್ರೀ ವೆಂಕಟೇಶ್ವರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಪಾಲಕಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಅಂದಾಜು 5 ಸಾವಿರಕ್ಕೂ ಹೆಚ್ಚೂ ನಾಮಧಾರಿ ಶ್ವೇತ ವಸ್ತçಧಾರಿಗಳು ಪಾಲಕಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಚಂಡೆ ವಾದ್ಯ, ತಟ್ಟಿರಾಯ ಕುಣಿತ, ಮಹಿಷಾಸುರ ವೇಷಧಾರಿಗಳು ಮೆರವಣಿಗೆಯ ಮೆರಗನ್ನು ಹೆಚ್ಚಿಸಿತ್ತು. ಮಹಿಳಾ ಭಜನಾ ತಂಡದವರು ದಾರಿಯುದ್ದಕ್ಕೂ ಗೋವಿಂದ ನಾಮಾವಳಿ ಭಜನೆ ಮಾಡುತ್ತಾ ಸಾಗಿದರು. ಪಾಲಕಿ ಮೆರವಣಿಗೆ ಸಾಗಿದ ಕಡೆಯಲ್ಲಿ ಭಕ್ತರು ದೇವರಿಗೆ ಹಣ್ಣುಕಾಯಿ ಅರ್ಪಿಸಿ ಪುನೀತರಾದರು. ಅಲ್ಲಲ್ಲಿ ಮರೆವಣಿಗೆಯಲ್ಲಿ ಸಾಗುವ ಭಕ್ತರಿಗೆ ತಂಪು ಪಾನೀಯದ ವ್ಯವಸ್ಥೆ ಮಾಡಲಾಗಿತ್ತು. ರಾತ್ರಿ ಗದ್ದುಗೆಯ ಪದ್ಮಾವತಿ ದೇವಿಯ ದೇಗುಲ ತಲುಪಿದ ಪಾಲಕಿಗೆ ಸತಿಪತಿ ಸಮ್ಮಿಲನದ ಪೂಜೆ ಸಲ್ಲಿಸಲಾಯಿತು. ಮಧ್ಯರಾತ್ರಿ ಪಾಲಕಿ ಮೆರವಣಿಗೆ ಮುಗಿಸಿ ಪುರ ಪ್ರವೇಶ ಮಾಡಿದ ಪಾಲಕಿಗೆ ಪುನಃ ಪೂಜೆ ಸಲ್ಲಿಸಿ ಉತ್ಸವ ಮೂರ್ತಿಯನ್ನು ಗರ್ಭಗುಡಿ ಒಳಗಡೆ ಪ್ರತಿಷ್ಠಾಪಿಸಲಾಯಿತು.
ನಾಮಧಾರಿ ಸಮಾಜದ ಅಧ್ಯಕ್ಷ ಕೃಷ್ಣ ನಾಯ್ಕ ಆಸರಕೇರಿ, ಉಪಾಧ್ಯಕ್ಷ ಭವಾನಿಶಂಕರ ನಾಯ್ಕ, ಮುಖಂಡರಾದ ಎಂ.ಆರ್.ನಾಯ್ಕ, ರಾಜೇಶ ನಾಯ್ಕ, ಈರಪ್ಪ ಗರ್ಡಿಕರ್ ಸೇರಿದಂತೆ ಸಮಾಜದ ಹಲವು ಮುಖಂಡರು ಮೆರವಣಿಗೆಯಲ್ಲಿ ಇದ್ದರು.
Read These Next
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಕಾರವಾರ: ಚುನಾವಣಾ ಕಂಟ್ರೋಲ್ ರೂಂ ಗೆ ವೆಚ್ಚ ವೀಕ್ಷಕರ ಭೇಟಿ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರದಿರುವ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ...