ರಾಮ ಮಂದಿರ ಭೂಮಿ ಪೂಜೆಗೆ ಮುಹೂರ್ತ ನಿಗದಿಪಡಿಸಿದ್ದ ವಿದ್ವಾಂಸ ವಿಜಯೇಂದ್ರ ಶರ್ಮರಿಗೆ ಬೆದರಿಕೆ ಕರೆ!

Source: Online Desk | Published on 4th August 2020, 12:17 AM | State News | Don't Miss |

 

ಬೆಳಗಾವಿ: ರಾಮ ಮಂದಿರದ ಭೂಮಿ ಪೂಜೆಗೆ ಒಂದೆಡೆ ತಯಾರಿ ಭರ್ಜರಿಯಾಗಿ ನಡೆಯುತ್ತಿದ್ದರೆ ಮತ್ತೊಂದೆಡೆ ಮುಹೂರ್ತ ನಿಗದಿಪಡಿಸಿದ್ದ ವಿದ್ವಾಂಸ ವಿಜಯೇಂದ್ರ ಶರ್ಮ ಅವರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿವೆ. 
ಬೆಳಗಾವಿಯ ನಿವಾಸಿಯಾಗಿರುವ ವಿಜಯೇಂದ್ರ ಶರ್ಮ ಅವರಿಗೆ ಕರೆ ಮಾಡುತ್ತಿರುವ ವ್ಯಕ್ತಿಗಳು ಆ.05 ರಂದು ನಿಗದಿಪಡಿಸಿರುವ ಮುಹೂರ್ತವನ್ನು ವಾಪಸ್ ಪಡೆಯುವಂತೆ ಬೆದರಿಕೆ ಹಾಕುತ್ತಿದ್ದಾರೆ. 
ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಶರ್ಮ ಅವರ ನಿವಾಸಕ್ಕೆ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. 
ವಿಜಯೇಂದ್ರ ಶರ್ಮಾ ಅವರು ಅಕ್ಷಯ ತೃತೀಯವೂ ಸೇರಿ ಒಟ್ಟು 4 ಮುಹೂರ್ತಗಳನ್ನು ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಗಾಗಿ ಸಲಹೆ ನೀಡಿದ್ದರು. ಈ ಪೈಕಿ ಆ.05 ಸಹ ಇತ್ತು. ಟ್ರಸ್ಟ್ ನಿಂದ ಇದೇ ಮುಹೂರ್ತವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. 
ರಾಮ ಮಂದಿರ ಚಳುವಳಿಯಲ್ಲಿ ಸಕ್ರಿಯರಾಗಿದ್ದ ವಿಜಯೇಂದ್ರ ಶರ್ಮಾ ಅವರು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರಲ್ಲಿ ಒಬ್ಬರಾದ ಸ್ವಾಮಿ ಗೋವಿಂದ್ ದೇವ್ ಗಿರಿ ಜೀ ಅವರೊಂದಿಗೆ ನಿಕಟ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ. 
ವಿದ್ವಾಂಸ ವಿಜಯೇಂದ್ರ ಶರ್ಮಾ ಮಾಜಿ ಪ್ರಧಾನಿಗಳಾದ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಜ್ಯೋತಿಷ್ಯಕ್ಕೆ ಸಂಬಂಧಿಸಿದಂತೆ ಸಲಹೆ ನೀಡಿದ್ದಾರೆ

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...