ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವ ಗುತ್ತಿಗೆದಾರ

Source: S O News | By MV Bhatkal | Published on 1st June 2023, 6:41 AM | Coastal News |

ಭಟ್ಕಳ: ಗುತ್ತಿಗೆದಾರನಾಗಿ ಕೆಲಸ ಮಾಡಿಕೊಂಡಿದ್ದ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಯ್ಕಿಣಿ ಗ್ರಾಮದ ಬಾಕಡಕೇರಿ ಯಲ್ಲಿ ವರದಿಯಾಗಿದೆ.

ಮೃತ ಗುತ್ತಿಗೆದಾರನನ್ನು ದಿನೇಶ ತಂದೆ ಮಂಜಪ್ಪ ನಾಯ್ಕ 
28 ವರ್ಷ ಶಿರಾಲಿ ಮಣ್ಣಹೊಂಡ ನಿವಾಸಿ 
ಎಂದು ಗುರುತಿಸಲಾಗಿದೆ.

ರಸ್ತೆ ಮತ್ತು ಇನ್ನಿತರ ಕಾಮಗಾರಿಗಳ ಗುತ್ತಿಗೆದಾರನಾಗಿ ಕೆಲಸ ಮಾಡಿಕೊಂಡಿದ್ದು ಕೆಲಸಕ್ಕೆ ಬೆಳಿಗ್ಗೆ ಮನೆಯಿಂದ ಹೋದವನು ಮನೆಗೆ ಬಾರದೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ವಿಕೊಂಡು ಬಾಕಡಕೇರಿ ಸ್ಮಶಾನದ ಸಮೀಪ ಗೇರು ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆ ಯಲ್ಲಿ ಮೃತನ ಅಣ್ಣ ಸುಬ್ರಾಯ ನಾಯ್ಕ ದೂರು ನೀಡಿದ್ದು ದೂರನ್ನು ದಾಖಲಿಸಿ ಕೊಂಡ ಪಿ.ಎಸ್.ಐ ಮಂಜುನಾಥ 
ಘಟನ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದು, ಮೃತ ದೇಹವನ್ನ ಮುರ್ಡೇಶ್ವರ ಆಸ್ಪತ್ರೆಗೆ ರವಾನಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ
ಕುಟುಂಬದವರಿಗೆ ನೀಡಿದ್ದು ಇನ್ನೂ ಪೋಲಿಸರ ತನಿಖೆಯಲ್ಲಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬರಬೇಕಾಗಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...