ಜೋಯಿಡಾ : ವ್ಯಕ್ತಿಯೊಬ್ಬರ ಹೆಸರು ಬದಲಾವಣೆಗಾಗಿ ಲಂಚ ಪಡೆಯುತ್ತಿದ್ದ ವೇಳೆ ತಹಶಿಲ್ದಾರ್ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಮಂಜುನಾಥ್ ಹುಚ್ಚಣ್ಣನವರ್ ಎಂಬಾತನನ್ನ ಬಂಧಿಸಲಾಗಿದೆ. ಎಸಿಬಿ ಡಿವೈಎಸ್ಪಿ ಶ್ರೀಕಾಂತ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಗೋಪಿಕಾ ಸಾವಂತ್ ಎಂಬುವವರ ಹೆಸರು ಬದಲಾವಣೆಗಾಗಿ ಇವರ ಸಂಬಂಧಿ ಮೋಹನ್ ದೇಸಾಯಿ ಎಂಬುವವರ ಬಳಿ ಹನ್ನೊಂದು ಸಾವಿರ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಮಂಗಳವಾರ ಕಚೇರಿಯಲ್ಲಿಯೇ ಎರಡು ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸದ್ಯ ಮಂಜುನಾಥನನ್ನ ಬಂಧಿಸಲಾಗಿದ್ದು, ಎಸಿಬಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.