ಭಟ್ಕಳ : ೧೯೯೫ರಲ್ಲಿ ಮುರುಡೇಶ್ವರದಲ್ಲಿ ನಡೆದಿದ್ದ ಹೊಡೆದಾಟ, ದೊಂಬಿ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು ಸುಮಾರು ೨೭ ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಮುರುಡೇಶ್ವರ ಪೊಲೀಸರು ಸಫಲರಾಗಿದ್ದಾರೆ.
ಬಂಧಿತ ಆರೋಪಿಯನ್ನು ಮುರುಡೇಶ್ವರ ನ್ಯಾಶನಲ್ ಕಾಲೋನಿಯ ನಿವಾಸಿ ಮಹ್ಮದ್ ಸಾಧಿಕ್ ಅಹ್ಮದ್ ದಬಾಪು ಎಂದು ಗುರುತಿಸಲಾಗಿದೆ. ಈತ ಕೆಲವು ವರ್ಷಗಳ ಕಾಲ ತಲೆ ಮರೆಸಿಕೊಂಡು ಅರಬ್ ರಾಷ್ಟ್ರಗಳಲ್ಲಿ ನೆಲೆಸಿದ್ದ ಎನ್ನಲಾಗಿದೆ. ಈತ ಮುರುಡೇಶ್ವರಕ್ಕೆ ಬಂದಿದ್ದ ಕುರಿತು ಖಚಿತ ಮಾಹಿತಿಯನ್ನು ಪಡದ ವಾರೆಂಟ್ ಹವಾಲ್ದಾರ ನವೀನ್ ನಾಯಕ್, ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮಣ ಪೂಜಾರಿ ಇವರುಗಳು ಮುರುಡೇಶ್ವರ ಎಸ್.ಐ. ಪರಮಾನಂದ ಕೊಣ್ಣೂರು ಅವರ ಮಾರ್ಗದರ್ಶನದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ೧೫ ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಮಾಡಿದೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read These Next
ಎಕ್ಕೆಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದರೋಡೆ: ಸಾರ್ವಜನಿಕರ ಕೈಗೆ ಸಿಕ್ಕ ಬಿದ್ದ ಖತರ್ನಾಕ್ ಕಳ್ಳರು
ಎಕ್ಕೆಗೋಳಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ದರೋಡೆ: ಸಾರ್ವಜನಿಕರ ಕೈಗೆ ಸಿಕ್ಕ ಬಿದ್ದ ಖತರ್ನಾಕ್ ಕಳ್ಳರು
ಅಲ್ಪಸಂಖ್ಯಾತ ಸಮುದಾಯ ವಿದ್ಯಾರ್ಥಿಗಳಿಗೆ ತರಬೇತಿಗೆ ನಿರ್ಧಾರ
ಕಾರವಾರ: ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ...
ಕಾರವಾರ: ಬೋಟ್ ಇಂಜನ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ 30 ದಿನಗಳ ಕಾಲ ಬೋಟ್ ಇಂಜನ್ ರಿಪೇರಿ ತರಬೇತಿಯನ್ನು ಹಮ್ಮಿಕೊಂಡಿದೆ.
ಅರಣ್ಯ ಭೂಮಿ ಹಕ್ಕು- ದಾನ ಮತ್ತು ಭಿಕ್ಷಾ ಅಲ್ಲ; ಸಂವಿಧಾನ ಬದ್ಧ ಹಕ್ಕು: ರವೀಂದ್ರ ನಾಯ್ಕ.
ವಾಸ್ತವ್ಯ ಮತ್ತು ಜೀವನಕ್ಕಾಗಿ ಅರಣ್ಯ ಭೂಮಿಯನ್ನ ಅವಲಂಭಿತವಾಗಿರುವ ಅರಣ್ಯವಾಸಿಗಳಿಗೆ ನೀಡುವ ಅರಣ್ಯ ಭೂಮಿ ಹಕ್ಕು ಧಾನ ಅಥವಾ ...
ಭಟ್ಕಳ: ವಿಶ್ವ ಕ್ಯಾನ್ಸರ್ ದಿನ:ಜಾಗೃತಿಗಾಗಿ 5 ಕಿ.ಮೀ. ಮ್ಯಾರಥಾನ್
ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಭಟ್ಕಳದ ಕ್ರಿಯಾಶೀಲ ಗೆಳೆಯರ ಸಂಘ, ಭಟ್ಕಳ ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಮತ್ತಿತರ ...
ಬೆಂಗಳೂರು ಚಲೋ ಪೂರ್ವಭಾವಿ ಸಭೆ: ಅರಣ್ಯವಾಸಿಗಳ ಮೇಲೆ ದೌರ್ಜನ್ಯ ನಿಲ್ಲಿಸಿ. ರವೀಂದ್ರ ನಾಯ್ಕ
ಅರಣ್ಯವಾಸಿಗಳ ಮೇಲೆ ಕಾನೂನುಬಾಹೀರ ದೌರ್ಜನ್ಯ ಮತ್ತು ಕಿರುಕುಳ ನೀಡುವುದನ್ನು ನಿಯಂತ್ರಿಸಿ ಇಲ್ಲದಿದ್ದರೆ ಜಿಲ್ಲಾದ್ಯಂತ ಅರಣ್ಯ ...