ಮತ್ತೊಮ್ಮೆ ಬೇಕಾಬಿಟ್ಟಿಯಾಗಿ ಮಾತನಾಡಿದರೆ ಯತ್ನಾಳ್ ಮೇಲೆ ಕ್ರಮ : ಸದಾನಂದ ಗೌಡ

Source: SO News | By Laxmi Tanaya | Published on 19th January 2021, 6:45 PM | State News | Don't Miss |

ಪುತ್ತೂರು : ಇನ್ನೊಮ್ಮೆ ಬಸವನಗೌಡ ಯತ್ನಾಳ್ ಬೇಕಾಬಿಟ್ಟಿಯಾಗಿ ಮಾತನಾಡಿದರೆ ಕೇಂದ್ರ ಹೈಕಮಾಂಡ್  ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಪುತ್ತೂರಿನಲ್ಲಿ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಹೇಳಿದ್ದಾರೆ.

ಶಾಸಕ ಬಸನಗೌಡ ಯತ್ನಾಳ್ ಸಿಡಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರೀಯಿಸಿದ ಅವರು, ನಾನು ವೈಯಕ್ತಿಕವಾಗಿ ಯತ್ನಾಳ್ ಬಗ್ಗೆ ಏನು ಹೇಳಲ್ಲ. ಆಗಾಗ ನಾನು ಯತ್ನಾಳ್ ಅವರ ನಡವಳಿಕೆ ಬಗ್ಗೆ ಮಾತನಾಡುತ್ತೇನೆ.
ನಾನು ಅಧ್ಯಕ್ಷನಾಗಿದ್ದಾಗ ಅವರು ಹೀಗೆ ನಾಲಿಗೆನ ಹರಿಯಬಿಟ್ಟಿದ್ದರಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿದ್ದೆ. ಮತ್ತೆ ಅವರೇ ಒಂದು ಯಡಿಯೂರಪ್ಪರನ್ನು ಮಾತನಾಡಿಸಿ ಪಕ್ಷ ಸೇರಿದ್ದರು ಎಂದು ಹೇಳಿದರು.

ಮಂತ್ರಿ ಸ್ಥಾನಕ್ಕಾಗಿ ಯತ್ನಾಳ್ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಅವರನ್ನ ಕರೆದು ಮಾತನಾಡಿಸಿ ಮಂತ್ರಿಸ್ಥಾನ ನೀಡಬೇಕೆಂಬುದು ಯತ್ನಾಳ್ ರ ಪ್ಲಾನ್ ಆಗಿದೆ. ಯತ್ನಾಳ್ ಅವರನ್ನು ಸಮಾಧಾನಪಡಿಸುವ ಪ್ರಶ್ನೆಯೇ ಇಲ್ಲ. ಯತ್ನಾಳ್ ಅವರೇ ನಿಮ್ಮ ಸಲಹೆ-ಸೂಚನೆ ನಮಗೆ ಈಗ ಅಗತ್ಯವಿಲ್ಲ. ವಾಜಪೇಯಿ ಸರ್ಕಾರದಲ್ಲಿ
ರಾಜ್ಯ ಸಚಿವರಾಗಿದ್ದವರು ಹೇಗೆ ನಡೆದುಕೊಳ್ಳಬೇಕು ಗೊತ್ತಿಲ್ಲವೇ ಎಂದು ಪ್ರಶ್ನಿಸಿದ ಸದಾನಂದ ಗೌಡ,
ಯತ್ನಾಳ್ ಅವರ ತಲೆ ಪೂರ್ತಿಯಾಗಿ ಸರಿ ಇಲ್ಲ ಅಂತ ಅನಿಸುತ್ತದೆ. ಪ್ರಾಮಾಣಿಕವಾಗಿ ಶಾಸಕರಾಗಿ ಕೆಲಸ ಮಾಡುವುದಾದರೆ ಮಾಡಿ ಇಲ್ಲದಿದ್ದರೆ ನಿಮ್ಮ ದಾರಿ ನೀವು ನೋಡಿಕೊಳ್ಳಿ ಎಂದು‌ ಶಾಸಕ ಯತ್ನಾಳ್ ಗೆ ಕೇಂದ್ರ ಸಚಿವ ಸದಾನಂದಗೌಡ ಎಚ್ಚರಿಕೆ ನೀಡಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...