ಪಲ್ಸ್ ಪೋಲಿಯೊ ಅಭಿಯಾನ ಬೂತ್ ಮಟ್ಟದಲ್ಲಿ ಗರಿಷ್ಟ ಲಸಿಕೆ ನೀಡಲು ಕ್ರಮ: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ

Source: SO News | By Laxmi Tanaya | Published on 13th January 2022, 9:54 PM | State News | Don't Miss |

ಶಿವಮೊಗ್ಗ : ಜನವರಿ 23ರಿಂದ ನಡೆಯಲಿರುವ ಪಲ್ಸ್ ಪೋಲಿಯೊ ಅಭಿಯಾನದ ಸಂದರ್ಭದಲ್ಲಿ ಅರ್ಹ ಮಕ್ಕಳು ಪ್ರಥಮ ದಿನ ಬೂತ್‍ಗಳಿಗೆ ಭೇಟಿ ನೀಡಿ ಲಸಿಕೆ ಪಡೆದುಕೊಳ್ಳಲು ಉತ್ತೇಜನ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು.

ಪಲ್ಸ್ ಪೋಲಿಯೊ ಅಭಿಯಾನ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ಖಾಸಗಿ ಶಾಲೆಗಳು ಸೇರಿದಂತೆ ಲಭ್ಯವಿರುವ ದೊಡ್ಡ ಹಾಲ್‍ಗಳನ್ನು ಬಳಸಿಕೊಂಡು ಬೂತ್ ಮಟ್ಟದಲ್ಲಿ ಲಸಿಕೆಗೆ ವ್ಯವಸ್ಥೆ ಮಾಡಬೇಕು. ಅಲೆಮಾರಿಗಳು, ಸ್ಲಂ ಪ್ರದೇಶದಲ್ಲಿ ವಾಸಿಸುವವರು, ತೋಟಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಮಕ್ಕಳು ಸೇರಿದಂತೆ ಪ್ರತಿಯೊಬ್ಬರೂ ಲಸಿಕೆ ಪಡೆದುಕೊಳ್ಳುವುದನ್ನು ಖಾತ್ರಿಪಡಿಸಬೇಕು ಎಂದು ಅವರು ಸೂಚನೆ ನೀಡಿದರು.

ಪಲ್ಸ್ ಪೋಲಿಯೊ ಅಭಿಯಾನ ಶೇ.100ರಷ್ಟು ಯಶಸ್ವಿಯಾಗಲು ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪೋಷಕರು ತಮ್ಮ ಮಕ್ಕಳನ್ನು ಮನೆಯ ಸಮೀಪವಿರುವ ಬೂತ್‍ಗಳಿಗೆ ಮೊದಲ ದಿನ ಕರೆ ತಂದು ಲಸಿಕೆ ಹಾಕಿಸಬೇಕು. ಈ ಕುರಿತು ಎಲ್ಲಾ ಮಾಧ್ಯಮಗಳನ್ನು ಬಳಸಿಕೊಂಡು ವ್ಯಾಪಕ ಪ್ರಚಾರ ಕಾರ್ಯ ನಡೆಸುವಂತೆ ಅವರು ತಿಳಿಸಿದರು.

ಜನವರಿ 23ರಂದು ಲಸಿಕಾ ಕೇಂದ್ರಗಳಲ್ಲಿ ಜ.24ರಿಂದ 26ರವರೆಗೆ ಗ್ರಾಮೀಣ ಪ್ರದೇಶಗಳಲ್ಲಿ 3ದಿನ ಹಾಗೂ ನಗರ ಪ್ರದೇಶಗಳಲ್ಲಿ 4ದಿನಗಳ ಕಾಲ ಮನೆ ಮನೆ ಭೇಟಿ ನೀಡಿ ಲಸಿಕೆ ಹಾಕಲಾಗುವುದು. ಜಿಲ್ಲೆಯಲ್ಲಿ 1051 ಬೂತ್‍ಗಳಲ್ಲಿ 134149 ಮಕ್ಕಳು ಲಸಿಕೆ ಪಡೆಯಲಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ 89807 ಹಾಗೂ ನಗರ ಪ್ರದೇಶದಲ್ಲಿ 44342 ಅರ್ಹ ಮಕ್ಕಳು ಇದ್ದಾರೆ. ಪಲ್ಸ್ ಪೋಲಿಯೋ ಯಶಸ್ವಿ ಅಭಿಯಾನಕ್ಕಾಗಿ 30ಸಂಚಾರಿ ಹಾಗೂ 38 ಟ್ರಾನ್ಸಿಟ್ ಬೂತ್‍ಗಳನ್ನು ವ್ಯವಸ್ಥೆ ಮಾಡಲಾಗಿದ್ದು, 205 ಮೇಲ್ವಿಚಾರಕರನ್ನು, 3090 ವ್ಯಾಕ್ಸಿನೇಟರ್‍ಗಳನ್ನು ನೇಮಕ ಮಾಡಲಾಗಿದೆ ಎಂದು ಆರ್‍ಸಿಎಚ್ ಅಧಿಕಾರಿ ಡಾ.ನಾಗರಾಜ ನಾಯಕ್ ಅವರು ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ನೋಡಲ್ ಅಧಿಕಾರಿ ಡಾ.ಸತೀಶ್ಚಂದ್ರ, ಡಾ.ಕಿರಣ್, ಡಿಡಿಪಿಐ ರಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುರೇಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...