ಎರಡು ತಿಂಗಳಾದರೂ ವಿದ್ಯಾರ್ಥಿಗಳ ಕೈ ಸೇರದ ಪಠ್ಯಪುಸ್ತಕ; ವಿದ್ಯಾರ್ಥಿ ಪಾಲಕರಲ್ಲಿ ಆತಂಕ

Source: sonews | By Staff Correspondent | Published on 28th July 2018, 10:01 PM | Coastal News | State News | Special Report | Public Voice | Don't Miss |


•    ಎಂ.ಆರ್.ಮಾನ್ವಿ.

ಭಟ್ಕಳ: ಶಾಲೆಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ಇದುವರೆಗೂ ರಾಜ್ಯದ 559 ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಉರ್ದು ಮಾಧ್ಯಮ ಶಾಲೆಗಳಿಗೆ ಪಠ್ಯಪುಸ್ತಕ ದೊರೆಯದೆ ವಿದ್ಯಾರ್ಥಿಗಳೂ, ಶಿಕ್ಷಕರು ಹಾಗೂ ಪಾಲಕರು ಅಂತಂತ್ರ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ.

ಉತ್ತರಕನ್ನಡ ಜಿಲ್ಲೆಯೊಂದರಲ್ಲೇ  6 ಉರ್ದು ಮಾಧ್ಯಮ ಸರ್ಕಾರಿ ಪ್ರೌಢಶಾಲೆಗಳು, 8 ಅನುದಾನಿತ ಹಾಗೂ 3 ಅನುದಾನ ರಹಿತ ಒಟ್ಟು 17ಉರ್ದು ಮಾಧ್ಯಮ ಶಾಲೆಗಳಿದ್ದು 2371 ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. 

ಈಗಾಗಲೆ ಕನ್ನಡ ಹಾಗೂ ಆಂಗ್ಲ ಮಾಧ್ಯಮದ ಎಲ್ಲ ವಿಷಯದ ಪಠ್ಯಪುಸ್ತಕಗಳು ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ತಲುಪಿದ್ದು ಉರ್ದು ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಮಾತ್ರ ಪಠ್ಯಪುಸ್ತಕಗಳಿಲ್ಲದೆ ಅತಂತ್ರರಾಗಿದ್ದಾರೆ. 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ದೊರೆಯದೆ ಇರುವುದರಿಂದ ಎಫ್.ಎ1(ರೂಪಣಾತ್ಮಕ ಪರೀಕ್ಷೆ)ಗೆ ತೊಂದರೆಯಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ರಾಜ್ಯದ ಉರ್ದು ಮಾಧ್ಯಮ ಶಾಲೆಗಳು ದಯಾನೀಯ ಸ್ಥಿತಿಯಲ್ಲಿದ್ದು ಕೆಲವೊಂದು ಶಾಲೆಗಳು ವಿದ್ಯಾರ್ಥಿಗಳಿಲ್ಲದೆ ಬಾಗಿಲು ಹಾಕಿಕೊಂಡಿವೆ. ಈ ರೀತಿಯ ಸ್ಥಿತಿ ಮುಂದುವರೆದರೆ ಅಳಿದುಳಿದ ಶಾಲೆಗಳು ವಿದ್ಯಾರ್ಥಿಗಳಿಲ್ಲದೆ ಮುಚ್ಚಲ್ಪಡುವಂತಹ ಸ್ಥಿತಿ ಎದುರಾಗಲಿದೆ. 

ಸರ್ಕಾರದ ಮಟ್ಟದಲ್ಲಿ ಶಿಕ್ಷಣ ಸಚಿವರು, ಅಧಿಕಾರಿಗಳು ಮೇ ತಿಂಗಳೊಳಗೆ ರಾಜ್ಯದ ಎಲ್ಲ ಶಾಲೆಗಳಿಗೆ ಪಠ್ಯಪುಸ್ತಕ ರವಾನೆ ಮಾಡುಲಾಗುವುದು ಎಂಬ ಹೇಳಿಕೆಗಳನ್ನು ನೀಡುತ್ತಾರೆ ಹೊರತುಪಡಿಸಿ ಅದನ್ನು ಕಾರ್ಯಗತ ಮಾಡದೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಅಡಕತ್ತರಿಯಲ್ಲಿ ಹಾಕುತ್ತಿದ್ದಾರೆ.

ಈ ಕುರಿತಂತೆ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿರುವ ಭಟ್ಕಳದ ಇಸ್ಲಾಮಿಯ ಆಂಗ್ಲೋ ಉರ್ದು ಪ್ರೌಢಶಾಲೆಯ ಮುಖ್ಯಾಧ್ಯಾಪಕ ಶಬ್ಬಿರ್ ದಫೆದಾರ್, ಕಳೆದ ಎರಡು ತಿಂಗಳಿಂದ ಪುಸ್ತಕಗಳಿಲ್ಲದೆ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗಿದೆ. ಗಣಿತ, ವಿಜ್ಞಾನ, ಹಾಗೂ ಸಮಾಜ ವಿಜ್ಞಾನ ವಿಷಯದ ಪಠ್ಯಪುಸ್ತಕಗಳು ಇಲ್ಲದೆ ಶಿಕ್ಷಕರು ಬೋಧನೆ ಮಾಡಲು ತೊಂದರೆಯಾಗುತ್ತಿದೆ. ಕೋರ್ ವಿಷಯಗಳ ಪಠ್ಯಕ್ರಮ ಬದಲಾಗಿದ್ದರಿಂದ ಹಳೆಯ ಪುಸ್ತಕಗಳು ಕೂಡ ಉಪಯೋಗಕ್ಕೆ ಬಾರದಂತಾಗಿವೆ. ಭಾಷಾ ವಿಷಯಗಳನ್ನು ಕಳೆದ ವರ್ಷದ ವಿದ್ಯಾರ್ಥಿಗಳಿಂದ ಪಡೆದು, ಅನ್ ಲೈನ್ ಮೂಲಕವೂ ಪಠ್ಯವನ್ನು ಡೌನ್‍ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಝೆರಾಕ್ಸ್ ಪ್ರತಿ ನೀಡಿದ್ದೇವೆ. ಎಲ್ಲ ವಿದ್ಯಾರ್ಥಿಗಳಿಗೆ ಸಾಧ್ಯವಾಗದಿದ್ದರೂ ಕೆಲ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಓದುವ ಆಸಕ್ತಿ ಕಡಿಮೆಯಾಗುತ್ತಿದೆ ಎಂದರು.

ಪಠ್ಯಪುಸ್ತಕ ಸಮಸ್ಯೆ ಕುರಿತಂತೆ ಉತ್ತರಕನ್ನಡ ಜಿಲ್ಲಾ ಉಪನಿರ್ದೇಶಕ ಎನ್.ಜಿ.ನಾಯಕ ಹೇಳಿದ್ದು ಇಷ್ಟು. ‘ಉರ್ದು ಮಾಧ್ಯಮ ಪಠ್ಯಪುಸ್ತಕಗಳಲ್ಲಿ ಕೆಲವೊಂದು ವಿಷಯದ ಪುಸ್ತಕಗಳನ್ನು ಶಾಲೆಗಳಿಗೆ ರವಾನಿಸಲಾಗಿದೆ. ಇನ್ನುಳಿದ ಕೆಲ ವಿಷಯಳ ಪಠ್ಯಪುಸ್ತಕಗಳನ್ನು ಕೂಡಲೆ ಕಳುಹಿಸುವ ವವಸ್ಥೆ ಮಾಡಲಾಗುವುದು ಎನ್ನುತ್ತಾರೆ
ಮೇ ತಿಂಗಳಲ್ಲಿ ಚುನಾವಣೆ ಬಂದಿದ್ದರಿಂದಾಗಿ ಪಠ್ಯಪುಸ್ತಕಗಳನ್ನು ಮುದ್ರಿಸುವ ಸರ್ಕಾರಿ ಪ್ರೆಸ್ ಉರ್ದು ಮಾಧ್ಯಮ ಪಠ್ಯಗಳನ್ನು ಮುದ್ರಿಸಲು ತಡವಾಗಿದ್ದ ತಾಂತ್ರಿಕ ಕಾರಣದಿಂದಾಗಿ ಉರ್ದು ಮಾಧ್ಯಮ ಪಠ್ಯಪುಸ್ತಕಗಳನ್ನು ಇನ್ನೂ ಸಹ ಮುದ್ರಣಗೊಂಡಿಲ್ಲ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 
ಇತರೆ ಕನ್ನಡ ಹಾಗೂ ಆಂಗ್ಲ ಪಠ್ಯಪುಸ್ತಕಗಳು ಬೇಗನೆ ಮುದ್ರಣಗೊಂಡಿದ್ದು ಉರ್ದು ಮಾಧ್ಯಮ ಮುದ್ರಣಕ್ಕೆ ಸರ್ಕಾರ ಏಕಿಷ್ಟಿ ಅನಾಸಕ್ತಿ ಬೆಳೆಸಿಕೊಂಡಿದೆ ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಉಂಟಾಗುತ್ತಿದೆ. 

ಸಮುದಾಯದ ಮುಖಂಡರು, ಮುಸ್ಲಿಮ್ ರಾಜಕೀಯ ನಾಯಕರು, ಹಾಗೂ ಶಿಕ್ಷಣ ಸಂಘಟನೆಗಳು ನಿಷ್ಕ್ರೀಯರಾಗಿದ್ದು ತಮ್ಮ ದ್ವನಿಯನ್ನು ಸರ್ಕಾರದ ಮಟ್ಟದಲ್ಲಿ ಧ್ವನಿಸಲು ವಿಫಲರಾಗುತ್ತಿರುವುದಕ್ಕೆ ಸರ್ಕಾರ ಉರ್ದು ಹಾಗೂ ಮುಸ್ಲಿಮ್ ಸಮುದಾಯದ ಬಗೆಗಿನ ಮಲತಾಯಿ ದೋರಣಗೆ ಕಾರಣವೆನ್ನಲಾಗುತ್ತಿದೆ. 

ರಾಜ್ಯ ಉರ್ದು ಮತ್ತು ಇತರ ಅಲ್ಪಸಂಖ್ಯಾತ ನಿರ್ದೇಶನಾಲಯದ ಅಂತರಜಾಲ ತಾಣದಲ್ಲಿರುವ ಮಾಹಿತಿಯಂತೆ ರಾಜ್ಯದಲ್ಲಿ 270ಸರಕಾರಿ ಉರ್ದು ಮಾಧ್ಯಮ ಪ್ರೌಢಶಾಲೆಗಳಿದ್ದು 22269 ವಿದ್ಯಾರ್ಥಿಗಳು, ಹಾಗೂ 2401 ಶಿಕ್ಷಕರು,  135 ಅನುದಾನಿತ ಉರ್ದು ಪ್ರೌಢಶಾಲೆಗಳಲ್ಲಿ 21036 ವಿದ್ಯಾರ್ಥಿಗಳು, 1162 ಶಿಕ್ಷಕರು ಮತ್ತು 154 ಅನುದಾನ ರಹಿತ ಉರ್ದು ಮಾಧ್ಯಮ ಪ್ರೌಢಶಾಲೆಗಳಲ್ಲಿ 5753 ವಿದ್ಯಾರ್ಥಿಗಳು, 739 ಶಿಕ್ಷಕರು ಸೇರಿದಂತೆ ರಾಜ್ಯದಲ್ಲಿ ಉರ್ದು ಮಾಧ್ಯಮ ಪ್ರೌಢಶಾಲೆಗಳಲ್ಲಿ 50ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಪಠ್ಯಪುಸ್ತಕ ವಿಳಂಬದಿಂದಾಗಿ ಈ ಎಲ್ಲ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರು ತಮ್ಮ ಮಕ್ಕಳ ಭವಿಷ್ಯವನ್ನು ಕಂಡು ಚಿಂತಿಸುವಂತೆ ಮಾಡಿದೆ.  
 

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

“ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ, ಸಮಾಜಿಕ ಬದಲಾವಣೆ”-ಐಟಾ ದಿಂದ ರಾಷ್ಟ್ರೀಯ ಶೈಕ್ಷಣಿಕ ಅಭಿಯಾನ

ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ ಮತ್ತು ಸಮಾಜಿಕ ಬದಲಾವಣೆ ಈ ಮೂರು ಅಂಶಗಳು ಪರಸ್ಪರ ಸಂಬಂಧ ಹೊಂದಿವೆ. ಬೋಧನಾ ಪ್ರಬುದ್ಧತೆಯು ...