ಗಲ್ಫ್ ಮೆಡಿಕಲ್ ಯುನಿವರ್ಸಿಟಿಯ ಘಟಿಕೋತ್ಸವ; 439 ವಿದ್ಯಾರ್ಥಿಗಳಿಗ ಪದವಿ ಪ್ರದಾನ

Source: S O News | By I.G. Bhatkali | Published on 1st December 2022, 12:49 PM | Coastal News | Gulf News | Don't Miss |

ಅಜ್ಮಾನ್: ಅಜ್ಮಾನ್ ಅಲ್ ಜುರ್ಫ್ ನಲ್ಲಿರುವ ತುಂಬೆ ಮೆಡಿಸಿಟಿಯಲ್ಲಿ ಮಂಗಳವಾರ ನಡೆದ ಗಲ್ಫ್ ಮೆಡಿಕಲ್ ಯುನಿವರ್ಸಿಟಿ (ಜಿಎಂ ಯು)ಯ 19ನೇ ಘಟಿಕೋತ್ಸವದಲ್ಲಿ ಯುಎಇಯ ಸುಪ್ರೀಂ ಕೌನ್ಸಿಲ್‌ನ ಸದಸ್ಯ ಹಾಗೂ ಅಜ್ಞಾನ್‌ನ ಆಡಳಿತಗಾರ ಶೈಖ್ ಹುಮೈದ್ ಬಿನ್ ರಶೀದ್ ಅಲ್ ನುಐಮಿ 439 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.

ಈ ಸಂದರ್ಭ ದಲ್ಲಿ ಮಾತನಾಡಿದ ಅವರು, ಕಲಿಕೆಯನ್ನು ಮುಂದುವರಿಸಬೇಕು. ಇದು ವೃತ್ತಿ ಜೀವನದಲ್ಲಿ ಉತ್ಕೃಷ್ಟತೆಯನ್ನು ಸಾಧಿಸಲು ಇರುವ ಏಕೈಕ ದಾರಿಯಾಗಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಜಿಎಂಯು ದಿಂದ ಪಡೆದುಕೊಂಡ ಜ್ಞಾನವನ್ನು ಉತ್ತಮ ಜಗತ್ತು ನಿರ್ಮಾಣ ಮಾಡಲು ಬಳಸು ವಂತೆ ಅವರು ಕರೆ ನೀಡಿದರು.

ಜಿಎಂಯು ಟ್ರಸ್ಟಿಗಳ ಮಂಡಳಿಯ ಅಧ್ಯಕ್ಷ, ಸ್ಥಾಪಕ ಡಾ.ತುಂಬೆ ಮೊಯ್ದಿನ್, ಸಂಸ್ಥೆಗೆ ನಿರಂತರ ಬೆಂಬಲ ನೀಡುತ್ತಿರುವ ಸರಕಾರ, ಶೈಖ್ ಹುಮೈದ್ ಬಿನ್ ರಶೀದ್ ಅಲ್ ನುಐಮಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಜಿಎಂಯು ಕುಲಾಧಿಪತಿ ಹುಸ್ಸಾಮ್ ಹಮ್ದಿ ಮಾತನಾಡಿ ನಮ್ಮ ಪದವೀಧರರನ್ನು ಅವರ ಕಠಿಣ ಪರಿಶ್ರಮ ಹಾಗೂ ದೃಢತೆಗಾಗಿ ಅಭಿನಂದಿಸಲು ಬಯಸುತ್ತೇನೆ. ಅವರ ಕುಟುಂಬಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ' ಎಂದರು.

ವೈದ್ಯಕೀಯ ಕಾಲೇಜಿನ 154, ದಂತ ಕಾಲೇಜು 68, ಫಾರ್ಮಸಿಯ 42, ಆರೋಗ್ಯ ವಿಜ್ಞಾನ ಕಾಲೇಜು 125, ನರ್ಸಿಂಗ್ ಕಾಲೇಜು 38, ಆರೋಗ್ಯ ಸೇವೆ ನಿರ್ವಹಣೆ ಹಾಗೂ ಅರ್ಥಶಾಸ್ತ್ರ ಕಾಲೇಜಿನ 12 ಪದವೀಧರರು ಸೇರಿದಂತೆ ಒಟ್ಟು 439 ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...