ಬೀಫ್ ತ್ಯಜಿಸುವಂತೆ ಅಜ್ಮೆರ್ ದರ್ಗಾ ಮುಖ್ಯಸ್ಥನ ಕರೆ

Source: S O News service | By Staff Correspondent | Published on 3rd April 2017, 11:46 PM | National News | Don't Miss |

ಅಜ್ಮೇರ್: ಗೋಮಾಂಸ(ಬೀಫ್) ತಿನ್ನಬಾರದು ಮತ್ತು ಶರಿಯಾ ಕಾನೂನಿಗೆ ವಿರುದ್ಧವಾಗಿರುವ ತ್ರಿವಳಿ ತಲಾಖ್ ಪದ್ದತಿಯನ್ನು ಕೈಬಿಡುವಂತೆ ಅಜ್ಮೇರ್ ಶರೀಫ್ ದರ್ಗಾದ ಧಾರ್ಮಿಕ ಮುಖಂಡರು ಮುಸ್ಲಿಮರಿಗೆ ಕರೆ ನೀಡಿದ್ದಾರೆ.

 

ಅಲ್ಲದೆ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅವರು ಒತ್ತಾಯಿಸಿದ್ದಾರೆ.

  ಹಿಂದೂ ಮತ್ತು ಮುಸ್ಲಿಮರು ಶಾಂತಿಯುತ ಸಹಬಾಳ್ವೆ ನಡೆಸಬೇಕೆಂದು ತನ್ನ ಜೀವನಪರ್ಯಂತ ಪ್ರಯತ್ನಿಸಿದ ಖ್ವಾಜಾ ಮೊನುದ್ದಿನ್ ಹಸನ್ ಚಿಸ್ತಿ ಅವರ 805ನೇ ಉರುಸ್ (ವಾರ್ಷಿಕ ಪುಣ್ಯತಿಥಿ) ಸಂದರ್ಭದಲ್ಲಿ , ಹಿಂದೂಗಳ ಧಾರ್ಮಿಕ ಭಾವನೆಯನ್ನು ಗೌರವಿಸುವ ಸಲುವಾಗಿ ನಾವು ಗೋಮಾಂಸ ತಿನ್ನುವುದನ್ನು ಬಿಟ್ಟುಬಿಡಬೇಕು ಎಂದು ದರ್ಗಾದ ಧರ್ಮಗುರು ಝೈನು ಲ್ ಅಬೆದಿನ್ ಖಾನ್ ಕರೆ ನೀಡಿದರು.

ನಾವಿನ್ನು ಗೋಮಾಂಸ ತ್ಯಜಿಸುತ್ತೇವೆ ಎಂದು ಇದೇ ಸಂದರ್ಭ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು. ಝೈನುಲ್ ಅಬೆದಿನ್ ಖಾನ್ ಅವರು ಸೂಫಿ ಸಂತ ಖ್ವಾಜಾ ಮೊನುದ್ದೀನ್ ಚಿಸ್ತಿ ಅವರ 22ನೆ ವಂಶಸ್ಥರಾಗಿದ್ದಾರೆ.

ಗೋ ಹತ್ಯೆ ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಗುಜರಾತ್ ಸರಕಾರದ ಕ್ರಮವನ್ನು ಅವರು ಬೆಂಬಲಿಸಿದ್ದು ಗೋವುಗಳನ್ನು ಮಾಂಸಕ್ಕಾಗಿ ಹತ್ಯೆ ಮಾಡುವ ಕೃತ್ಯ ತಡೆಗಟ್ಟಲು ಇದು ಸೂಕ್ತ ಕ್ರಮ ಎಂದಿದ್ದಾರೆ.

ತ್ರಿವಳಿ ತಲಾಖ್ ಪದ್ಧತಿಯನ್ನು ಖಂಡಿಸಿದ ಅವರು, ಖುರಾನ್ ಮತ್ತು ಶರಿಯಾದಲ್ಲಿ ಇದಕ್ಕೆ ಅವಕಾಶವಿಲ್ಲ. ಅಮಾನವೀಯ, ಇಸ್ಲಾಮಿ ವಿರೋಧಿ ಮತ್ತು ಲಿಂಗ ಸಮಾನತೆಗೆ ವಿರುದ್ಧವಾಗಿರುವ ಈ ಪದ್ದತಿಯನ್ನು ಅತೀ ಶೀಘ್ರ ನಿಷೇಧಿಸಬೇಕು ಎಂದರು. ಖುರಾನ್ ಮತ್ತು ಪ್ರವಾದಿಯವರು ಎಂದಿಗೂ ಅನುಮೋದಿಸದ ಈ ಪದ್ದತಿ ಕೈಬಿಡಲು ಸಮುದಾಯದ ಕೆಲವರು ವಿರೋಧಿಸುತ್ತಿರುವುದು ಸರಿಯಲ್ಲ. ಈ ಕೆಟ್ಟ ಪದ್ದತಿಗೆ ನಮ್ಮ ಸೋದರಿಯರು ಮತ್ತು ಪುತ್ರಿಯರು ಬಲಯಾಗದಂತೆ ತಡೆಯಬೇಕು ಎಂದವರು ಹೇಳಿದರು. ದೇಶದ ಅತ್ಯಂತ ಪವಿತ್ರ ಮುಸ್ಲಿಮ್ ಕ್ಷೇತ್ರಗಳಲ್ಲಿ ಅಜ್ಮೇರ್ ದರ್ಗವೂ ಸೇರಿದೆ.

 

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...