ಜನವರಿ 12 ರ ವರೆಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ. ಪಟ್ಟಿಯಲ್ಲಿ ಲೋಪವಾಗದಂತೆ ಎಚ್ಚರವಹಿಸಲು ಗುಂಜನ್ ಕೃಷ್ಣ ಸೂಚನೆ

Source: SO News | By Laxmi Tanaya | Published on 8th January 2024, 9:42 PM | State News | Don't Miss |

ದಾವಣಗೆರೆ :  ಆಯೋಗವು ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಗೆ ಜನವರಿ 12 ರ ವರೆಗೆ ಅವಕಾಶ ಕಲ್ಪಿಸಿದ್ದು ತಿದ್ದುಪಡಿ, ಸೇರ್ಪಡೆ, ಮರಣ ಹೊಂದಿದ ಮತದಾರರನ್ನು ಕೈಬಿಡಬಹುದಾಗಿದ್ದು ಪರಿಷ್ಕರಣೆಯ ವೇಳೆ ದಾಖಲೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ದಾವಣಗೆರೆ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರಾದ ಶ್ರೀಮತಿ ಗುಂಜನ್ ಕೃಷ್ಣ ಅವರು ಸೂಚನೆ ನೀಡಿದರು.

 ಅವರು  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರರು, ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಆಯೋಗ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಗೆ ಅವಕಾಶ ಕಲ್ಪಿಸಿದ್ದು ಈ ಅವಧಿಯಲ್ಲಿ ಹೆಚ್ಚು ಹೆಚ್ಚು ಯುವ ಮತದಾರರನ್ನು ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಮುಂದಾಗಬೇಕು. ಮತದಾರರ ಪಟ್ಟಿಯಲ್ಲಿ ಪರಿಷ್ಕರಣೆ ಮಾಡುವಾಗ ಸ್ವಯಂಪ್ರೇರಿತವಾಗಿ ಯಾವುದೇ ದಾಖಲೀಕರಣ ಮಾಡದೇ ದಾಖಲೆಗಳನ್ನಿಟ್ಟುಕೊಂಡು ಸೇರ್ಪಡೆ, ತಿದ್ದುಪಡಿ ಮತ್ತು ಮರಣ ಹೊಂದಿದ ಮತದಾರರನ್ನು ಕೈಬಿಡುವ ಕೆಲಸ ಮಾಡಬೇಕೆಂದರು.

 ಮತದಾರರ ಪಟ್ಟಿ ವೀಕ್ಷಕರ ಲಾಗಿನ್‍ಗೆ ಸಲ್ಲಿಕೆಯಾದ ನಮೂನೆ 6,7,8 ರಡಿ ಸಲ್ಲಿಸಿದ ಅರ್ಜಿಗಳಲ್ಲಿ 208 ಅರ್ಜಿಗಳನ್ನು ಅಧಿಕಾರಿಗಳ ಹಾಗೂ ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಪರಿಶೀಲನೆ ನಡೆಸಿದರು.

 ಒಟ್ಟು ಜಿಲ್ಲೆಯಲ್ಲಿ ಜನವರಿ 4 ರ ವರೆಗೆ 727204 ಪುರುಷ, 731251 ಮಹಿಳೆಯರು, 120 ಇತರೆ, 454 ಸೇವಾ ಮತದಾರರು ಸೇರಿ 1459029 ಮತದಾರರಿದ್ದಾರೆ. ಕ್ಷೇತ್ರವಾರು ಮತದಾರರಲ್ಲಿ ಜಗಳೂರು 195558, ಹರಿಹರ 209919, ದಾವಣಗೆರೆ ಉತ್ತರ 246105, ದಕ್ಷಿಣ 215230, ಮಾಯಕೊಂಡ 193070, ಚನ್ನಗಿರಿ 200750, ಹೊನ್ನಾಳಿ 198397 ಮತದಾರರಿದ್ದಾರೆ.
 ಸಭೆಯಲ್ಲಿ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ.ವಿ, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ, ಪಾಲಿಕೆ ಆಯುಕ್ತೆ ರೇಣುಕಾ, ತಹಶೀಲ್ದಾರ್ ಅಶ್ವಥ್ ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...