ಕಾರವಾರ: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರವಾರ, ಉ.ಕ. ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಭಾರತ ರತ್ನ ಡಾ.ಬಿ. ಆರ್.ಅಂಬೇಡ್ಕರ-ಓದು-2020 ಹಾಗೂ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಿರಿಗನ್ನಡ ಜಾನಪದ ಪರಿಷದ್ ಜಿಲ್ಲಾಧ್ಯಕ್ಷ ಡಾ.ಶಿವಾನಂದ ವಿ ನಾಯಕ ಆಗಮಿಸಿ ವಿದ್ಯಾರ್ಥಿಗಳಿಗೆ ಡಾ.ಅಂಬೇಡ್ಕರ ಬರಹಗಳ ಕುರಿತ ಪುಸ್ತಕಗಳನ್ನು ವಿತರಿಸಿ ಓದಿನ ಮಹತ್ವವನ್ನು ತಿಳಿಸಿದರು. ಅಧ್ಯಕ್ಷತೆಯನ್ನು ಸರಕಾರಿ ಪಿ.ಯು ಕಾಲೇಜಿನ ಪ್ರಾಚಾರ್ಯ ರಮೇಶ ಪತ್ರೇಕರ ರವರು ವಹಿಸಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ಸತೀಶ ಬಿರಕೋಡಿ, ವೆಂಕಟರಮಣ ನಾಯ್ಕ, ವಿಠೋಬ ನಾಯಕ, ಮದನ ನಾಯಕ ಹಾಗೂ ವೇದಾವತಿ ನಾಯಕ ಮುಂತಾದವರು ಉಪಸ್ಥಿತರಿದ್ದರು. ಮಾಣೇಶ್ವರ ನಾಯಕ ವಂದಿಸಿದರು.